nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವರಾತ್ರಿ ರಾಜೇಂದ್ರ ಶ್ರೀಗಳು ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ: ಯು.ಎಸ್.ಬಸವರಾಜು
    ಜಿಲ್ಲಾ ಸುದ್ದಿ September 7, 2025

    ಶಿವರಾತ್ರಿ ರಾಜೇಂದ್ರ ಶ್ರೀಗಳು ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ: ಯು.ಎಸ್.ಬಸವರಾಜು

    By adminSeptember 7, 2025No Comments2 Mins Read
    datti upanyasa

    ಸರಗೂರು: ಶಿವರಾತ್ರಿ ರಾಜೇಂದ್ರ ಶ್ರೀಗಳು ನಾಡಿನಾದ್ಯಂತ ನೂರಾರು ಶಿಕ್ಷಣ, ಆರೋಗ್ಯ  ಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಅಭಾವಿಲಿಂ ಮಹಾಸಭಾ ಕೇಂದ್ರ ಸಮಿತಿ ನಿರ್ದೇಶಕ ಯು.ಎಸ್.ಬಸವರಾಜು ತಿಳಿಸಿದರು.

    ಪಟ್ಟಣ ಬಿಡಗಲು ಗ್ರಾಮದ ಪಡುವಲು ವೀರಕ್ತ ಮಠದಲ್ಲಿ ಭಾನುವಾರದಂದು ಪೌರ್ಣಮಿ ಪೂಜೆ ಕಾರ್ಯಕ್ರಮ ಹಾಗೂ ಶ್ರೀ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 110 ನೇ ಜಯಂತಿ ಅಂಗವಾಗಿ ಸಂಸ್ಥಾಪಕರ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾ ಶರಣು ಸಾಹಿತ್ಯ ಪರಿಷತ್ ಮೈಸೂರು ಹಾಗೂ ಪಡುವಲು ಶ್ರೀ ವಿರಕ್ತಮಠ ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಬಡತನ ಹಾಗೂ ಅಸಮಾನತೆ ನಿರ್ಮೂಲನೆಗೆ ಶ್ರೀಗಳು ಶ್ರಮಿಸಿದ್ದರು. ಅದನ್ನು ಮುಂದುವರಿಸುತ್ತಿರುವ ಸುತ್ತೂರು ಮಠವು ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಕ್ಷೇತ್ರದ ಸಂರಕ್ಷಣೆಗೂ ಶ್ರಮಿಸುತ್ತಿದೆ’ ಎಂದು ಶ್ಲಾಘಿಸಿದರು

    ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಸುತ್ತೂರು ಶ್ರೀಮಠ ದೇಶದ ಉನ್ನತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ರಾಜೇಂದ್ರ ಶ್ರೀಗಳು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರವಾದುದನ್ನು ಸಾಧಿಸಿದ ಮಹಾನ್‌ ಋಷಿ. ನೂರಾರು ಶಾಲಾ–ಕಾಲೇಜುಗಳು, ವಿದ್ಯಾರ್ಥಿನಿಲಯಗಳನ್ನು ತೆರೆದು ಶಿಕ್ಷಣ ದಾಸೋಹದಲ್ಲಿ ಕ್ರಾಂತಿಯನ್ನೇ ಮಾಡಿದರು’ ಎಂದು ಹೇಳಿದರು.

    ದತ್ತಿ ಉಪನ್ಯಾಸ ಭಾಷಣಕಾರರಾಗಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪದ್ಮಾಶೇಖರ್ ಮಾತನಾಡಿ ‘ಮೌಲ್ಯಾಧಾರಿತ ಶಿಕ್ಷಣ ನೀಡುವತ್ತ ಗಮನಹರಿಸಿದ ಶ್ರೀಗಳು, ಅಕ್ಷರ, ಅನ್ನ ಹಾಗೂ ಆರೋಗ್ಯ ದಾಸೋಹ ಮಾಡಿದರು. ಆ ಗುರು ಪರಂಪರೆಯ ಹಾದಿಯಲ್ಲಿ ಸಾಗುತ್ತಿರುವ ಶ್ರೀಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕೂಡ ದೂರದರ್ಶಿತ್ವ ಮತ್ತು ಸದ್ಭಾವನೆಗಳ ಮೂಲಕ ಸೇವಾ ಕಾರ್ಯಗಳಲ್ಲಿ ತೊಡಗಿಸಿದ್ದಾರೆ. ದೇಶದೊಂದಿಗೆ ವಿದೇಶದಲ್ಲೂ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ಜೆಎಸ್‌ಎಸ್‌ ಮಹಾವಿದ್ಯಾಪೀಠ ಹೆಮ್ಮರವಾಗಿ ಬೆಳೆದಿದೆ’ ಎಂದರು.

    ಭಾರತೀಯ ಸಂಸ್ಕೃತಿ ಅನಂತವಾದುದು. ಇದನ್ನು ಅನಾದಿ ಕಾಲದಿಂದಲೂ ಸಾಧು–ಸಂತರು ರೂಪಿಸಿಕೊಂಡು ಬಂದಿದ್ದಾರೆ. ಉಳಿಸಲು ಶ್ರಮಿಸುತ್ತಿದ್ದಾರೆ. ವಿಶ್ವ ಬಂಧುತ್ವ ಮತ್ತು ವಿಶ್ವಶಾಂತಿ ಸಾರುವ ಸಂಸ್ಕೃತಿ ನಮ್ಮದು’ ಎಂದು ತಿಳಿಸಿದರು.

    ಸಾನ್ನಿಧ್ಯ ವಹಿಸಿದ್ದ ಪಡುವಲು ಶ್ರೀ ವೀರಕ್ತ ಮಠದ ಮಹದೇವಸ್ವಾಮಿಗಳು ಮಾತನಾಡಿ,  ‘ರಾಜೇಂದ್ರ ಶ್ರೀ ಮಹಾನ್‌ ತ್ಯಾಗಮಯಿ. ತ್ಯಾಗದಿಂದಲೇ ಅಮೃತತ್ವವನ್ನು ಸಾಧಿಸಿದವರು. ಹೊಸ ಇತಿಹಾಸ ಬರೆದವರು. ಶ್ರೀಮಠವು ಹಿಮಾಲಯದ ಎತ್ತರಕ್ಕೆ ಬೆಳೆಯಲು ಭದ್ರ ಬುನಾದಿ ಹಾಕಿದವರು. ಲಿಂಗ ಪೂಜೆಗಿಂತ ಜಂಗಮ ಸೇವೆಯೇ ಶ್ರೇಷ್ಠ ಎಂದು ನಂಬಿದ್ದರು. ನಿರಂತರವಾಗಿ ಸೇವಾ ಕಾರ್ಯಗಳನ್ನು ಮಾಡಿದರು. ಮಕ್ಕಳ ಶಿಕ್ಷಣಕ್ಕಾಗಿ ಜೀವನ ಮುಡುಪಾಗಿಟ್ಟರು’ ಎಂದು ನೆನೆದರು.

    ಮಡಿವಾಳ ಸ್ವಾಮಿ ಮಠ ಮೈಸೂರು ಬ್ರಹ್ಮ ಶ್ರೀ ಅಡವಿ ಸ್ವಾಮಿ ಮಾತನಾಡಿ, ‘ರಾಜೇಂದ್ರ ಶ್ರೀ ಮಾತೃ ವಾತ್ಸಲ್ಯದ ಮತ್ತೊಂದು ರೂಪವಾಗಿದ್ದರು. ಸಾವಿರಾರು ವರ್ಷಗಳ ಭವ್ಯ ಇತಿಹಾಸವಿರುವ ಮಠದ ಗುರುಗಳಾಗಿ ಪರಂಪರೆ ಮತ್ತು ಆಧುನಿಕತೆಗಳನ್ನು ಸಮನ್ವಯಗೊಳಿಸಿ ಸೇವಾ ಕಾರ್ಯದಲ್ಲಿ ತೊಡಗಿ ಕಾರ್ಯವ್ಯಾಪ್ತಿಯಲ್ಲಿ ವಿಸ್ತಾರಗೊಳಿಸಿದರು’ ಎಂದು ಸ್ಮರಿಸಿದರು.

    ದತ್ತಿ  ಎಚ್ ಜೆ ರತ್ನ ಮಹೇಶ್.ದತ್ತಿ ದಾಸೋಹಿಗಳು ವೈ ಟಿ ಮಹೇಶ್.ತಂದೆ ವೈ ಟಿ ತಮ್ಮಯ್ಯ ನಡೆಸಿಕೊಟ್ಟರು.

    ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಡಾ.ಹೆಳವರಹುಂಡಿ ಸಿದ್ದಪ್ಪ, ಮೈಸೂರು ಜಿಲ್ಲಾ ಹಾಲು ಒಕ್ಕೂಟ ಹಾಗೂ ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಬಿ.ಎನ್.ಸದಾನಂದ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎಂ.ಚಂದ್ರಶೇಖರ, ತಾಲೂಕು ಶರಣ ಸಾಹಿತ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಗುರುಸ್ವಾಮಿ, ಮಠದ ಆಡಳಿತಾಧಿಕಾರಿ ಕೆ.ಕೆಂಪಣ್ಣ, ಸಾಹಿತ್ಯಗಳು ಪುಟ್ಟಪ್ಪ ಮುಡಿಗುಂಡ, ಮುಖಂಡರು ಎಂ.ಎಸ್.ಗಿರೀಶ್ ಕುಮಾರ್, ಗಿರಿ ಕುಮಾರ್, ಭುಜಂಗಪ್ಪ, ಕೆ.ಪಿ.ಮಾದಪ್ಪ ಇನ್ನೂ ಮುಖಂಡರು ಸೇರಿದಂತೆ ಶಿವಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.