ಚಿಕ್ಕಮಗಳೂರು: ದತ್ತ ಜಯಂತಿ ಪ್ರಯುಕ್ತ ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.
ರಸ್ತೆಯುದ್ಧಕ್ಕೂ ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆಯೊಂದಿಗೆ ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.


