ತಿಪಟೂರು: ಪಾಶ್ಚಿಮಾತ್ಯ ಜೀವನ ಶೈಲಿಯನ್ನು ನಿಧಾನವಾಗಿ ಅಳವಡಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ನಶಿಸಿಹೋಗುತ್ತಿರುವ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸಂರಕ್ಷಿಸುವ ಹಾಗೂ ಜೀರ್ಣೋದ್ಧಾರ ಮಾಡುವುದು ನಾಗರಿಕನ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ಯೋಜನಾಧಿಕಾರಿ ಉದಯ್ ಅಭಿಪ್ರಾಯಪಟ್ಟರು.
ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ಬೆಳಗರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಮೂರು ಲಕ್ಷದ ಡಿಡಿಯನ್ನು ಹಸ್ಥಾಂತರಿಸಿ ಮಾತನಾಡುತ್ತಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಗ್ರಾಮಗಳಲ್ಲಿನ ದೇವಸ್ಥಾನಗಳ ಜೀರ್ಣೋದ್ಧಾರ ಹಾಲಿನ ಡೈರಿ ಕಟ್ಟಡ, ಸಮುದಾಯಭವನ, ರುದ್ರಭೂಮಿಯ ಅಭಿವೃದ್ಧಿಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದು, ಪ್ರಸ್ತುತ ಆರ್ಥಿಕ ವರ್ಷದಲ್ಲಿ ತಾಲೂಕಿನಲ್ಲಿ ಈಗಾಗಲೇ 42 ಲಕ್ಷ ರೂ ಅನುದಾನಗಳನ್ನು ವಿವಿಧ ಅಭಿವೃದ್ಧಿಗಳಿಗೆ ಕಾರ್ಯಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.
ದೇವಸ್ಥಾನದ ಅಭಿವೃದ್ಧಿ ಸಮಿತಿಯ ಶಿವಶಂಕರಯ್ಯ ಮಾತನಾಡಿ ಅನುದಾನ ಪಡೆಯಲು ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದಾಗ ಅವರು ನಮಗೆ ನೀಡಿದ ಆತಿಥ್ಯವನ್ನು ವರ್ಣಿಸಲಾಗದು ಹಾಗೂ ದೇವಸ್ಥಾನದ ಅಭಿವೃದ್ಧಿಗೆ 3 ಲಕ್ಷ ರೂಪಾಯಿ ಅನುದಾನಗಳನ್ನು ನೀಡಿರುವುದು ನಮಗೆ ಬಹಳ ಸಂತೋಷಕರವಾಗಿದೆ ಮತ್ತು ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲು ಚಿಂತನೆ ನಡೆಸಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ದೇವಾಲಯ ಸಮಿತಿಯ ಶಿವಶಂಕರಪ್ಪ ಸಿದ್ಧರಾಮಣ್ಣ, ದೇವಾನಂದ್, ಪ್ರಸನ್ನ, ಬಸವರಾಜು , ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಮೇಲ್ವೀಚಾರಕ ಕೃಷ್ಣ ಆಚಾರ್ಯ,ಲೆಕ್ಕ ಪರಿಶೋಧಕ ವಿನೋದ್, ಸೇವಾಪ್ರತಿನಿಧಿ ಇಂದ್ರಮ್ಮ, ದೇವಾಲಯ ಸಮಿತಿ ಸದಸ್ಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz