nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಸೀಕೆರೆ ಸಹಸ್ರಕೂಟ ಜಿನಾಲಯ ಅಭಿವೃದ್ಧಿಗೆ ಶ್ರವಣಬೆಳಗೊಳ ಭಟ್ಟರಕ ಶ್ರೀಗಳ ಸಂಕಲ್ಪ
    ಜಿಲ್ಲಾ ಸುದ್ದಿ December 27, 2024

    ಅರಸೀಕೆರೆ ಸಹಸ್ರಕೂಟ ಜಿನಾಲಯ ಅಭಿವೃದ್ಧಿಗೆ ಶ್ರವಣಬೆಳಗೊಳ ಭಟ್ಟರಕ ಶ್ರೀಗಳ ಸಂಕಲ್ಪ

    By adminDecember 27, 2024No Comments2 Mins Read
    arasikere

    ಅರಸೀಕೆರೆ:  ಇಲ್ಲಿನ ಸಹಸ್ರಕೂಟ ಜಿನಾಲಯ ದೇಶದಲ್ಲಿ ವಿಶಿಷ್ಟವಾಗಿದ್ದು , ಉತ್ತರ ಭಾರತ ಹಾಗೂ ಉತ್ತರ ಕರ್ನಾಟಕದವರು ಶ್ರೀ ಕ್ಷೇತ್ರ ಶ್ರವಣಬೆಳಗೊಳ ಸಂದರ್ಶಿಸಲು ಅರಸೀಕೆರೆ ಹೆಬ್ಬಾಗಿಲಾಗಿದ್ದು ,ಈ ಮೂಲಕ ಭಟ್ಟರಕರು, ಮುನಿಗಳು ,ಯಾತ್ರಾತ್ರಿಗಳು, ಮಾತಾಜಿ ಗಳು, ಕಾಲ್ನಡಿಗೆ ಯಲ್ಲಿ ಸಂಚರಿಸಬೇಕಿದೆ ,ಈ ಜಿನಾಲಯವನ್ನು ಅಭಿವೃದ್ಧಿಪಡಿಸಿ ತ್ಯಾಗಿ ಭವನ, ಆಹಾರ ತಯಾರಿಕ ಭವನಗಳೊಂದಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರುಕೀರ್ತಿ ಭಟ್ಟರಕ ಪಟ್ಟಾಚಾರ್ಯ ಶ್ರೀಗಳು ತಿಳಿಸಿದರು.

    ಅವರು ಶ್ರವಣಬೆಳಗೊಳ ದಿಂದ ಬೆಳಗಾವಿಗೆ ತೆರಳುವ ಮಾರ್ಗ ಮಧ್ಯೆ ನಗರದ   ಸಹಸ್ರಕೂಟ ಜಿನಾ ಲಯಕ್ಕೆಭೇಟಿ ನೀಡಿ ,ಬಸದಿ ದರ್ಶನ ಪಡೆದು ಭಕ್ತರನ್ನು ಆಶೀರ್ವದಿಸಿ ಮಾತನಾಡಿದರು.


    Provided by
    Provided by

    ಈ ಬಸದಿಗೆ ಶ್ರವಣಬೆಳಗೊಳ ಮಠವು ಎಲ್ಲಾ ರೀತಿಯ ಜವಾಬ್ದಾರಿ ತೆಗೆದುಕೊಂಡು ಒಂದು ಶ್ರದ್ಧಾ ಕೇಂದ್ರವನ್ನಾಗಿ ಮಾಡಲಾಗುವುದು ಎಂದ ಭಟ್ಟರಕ್ಕ ಶ್ರೀಗಳು , ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಸಂತಸ ತಂದಿದೆ, ಜಿಲ್ಲೆಯಲ್ಲಿರುವ ವಿವಿಧ ಜಿನಮಂದಿರಗಳೊಂದಿಗೆ ಒಂದು ಸಾವಿರ ವರ್ಷಗಳಿಗೂ ಹೆಚ್ಚು ವರ್ಷಗಳ ಇತಿಹಾಸವಿರುವ ಈ ಬಸದಿ, ಶ್ರವಣಬೆಳಗೊಳದ ಮಠದ ವ್ಯಾಪ್ತಿಗೆ ಸೇರುತ್ತದೆ .ಈ ಜಿನಾಲಯ ದ ಅಭಿವೃದ್ಧಿಯ ಕನಸು ಹಿರಿಯ ಭಟ್ಟಾರಕ ರಾದ ಕರ್ಮ ಯೋಗಿ ಶ್ರೀ ಸ್ವಸ್ತಿ ಶ್ರೀ ಚಾರುಕೀರ್ತಿ  ಭಟ್ಟಾರಕ ಶ್ರೀಗಳ  ಆಶಯವಾಗಿದ್ದು ಇದಕ್ಕೆ ಸ್ಥಳೀಯರು ಹಾಗೂ ಮಾಧ್ಯಮಗಳ ಸಹಕಾರ ಅಗತ್ಯ ಬಸದಿಯನ್ನು ಮುಂದಿನ ದಿನಗಳಲ್ಲಿ ವಿಶ್ವಕ್ಕೆ ಪರಿಚಯಿಸಲಾಗುವುದು ಎಂದರು.

    ಸಹಸ್ರಕೂಟ ಜಿನಾಲಯ ದ ಅಧ್ಯಕ್ಷ ಶಾಂತರಾಜು ಮಾತನಾಡಿ ಇಲ್ಲಿ ನಿತ್ಯ ನಿರಂತರವಾಗಿ ಪೂಜೆ  ಕೈಂಕರ್ಯ ಗಳು ನಡೆಯುತ್ತಿದ್ದು, ಭಟ್ಟರಕ ಶ್ರೀಗಳ ಭೇಟಿ  ಸಂತಸ ತಂದಿದೆ, ದೇಶದಲ್ಲಿ ಎರಡು ಕಡೆ ಮಾತ್ರ ಸಹಸಕೂಟ ಜಿನಾಲಯವಿದ್ದು ಈ ಪೈಕಿ ಅರಸೀಕೆರೆ ಸಹಸ್ರಕೂಟ ಜಿನಾಲಯವು ಜಿನಾಲಯ ಒಂದಾಗಿದೆ ಎಂದರು.

    ಮಹಿಳೆಯರು ಪೂರ್ಣ ಕುಂಭ ಕಳಸಗಳೊಂದಿಗೆ ಪೂಜ್ಯ ಭಟ್ಟರಕ ರಿಗೆ  ಸ್ವಾಗತ ನೀಡಿ, ಪಾದಪೂಜೆ ನೆರವೇರಿಸಿದರು.

    ಈ ವೇಳೆಯಲ್ಲಿ ಜಿನಾಲಯ ಸಮಿತಿಯ ಖಜಾಂಚಿ ರಾಜು, ಪದಾಧಿಕಾರಿಗಳಾದ ವಸುಪಾಲ್ ಜೈನ್ , ಬಾಹುಬಲಿ ದಂಡಾವತಿ, ಮೃತ್ಯುಂಜಯ, ಮುಕ್ತೇಶ್ ಅರ್ಚಕ ಅಕ್ಷಯ್ ಕುಮಾರ್, ನವರತನ್ ,  ಸೋಹನ್ ಲಾಲ್, ಬಿ.ವಿ .ಅಶೋಕ್, ಮೋಹನ್ ಲಾಲ್, ಚಕ್ರೇಶ್ವರಿ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಶ್ರಾವಕ -ಶ್ರಾವಕಿಯರು ವಿವಿಧ ಜೈನ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ, ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.