ಕೊರಟಗೆರೆ : ಪಟ್ಟಣದ ಶ್ರೀ ಗಂಗಾಧರೇಶ್ವರ ರಥೋತ್ಸವಕ್ಕೆ ತಹಸೀಲ್ದಾರ್ ನಹೀದಾ ಜಮ್.ಜಮ್ ಚಾಲನೆ ನೀಡಿದರು .
ಪ್ರತಿವರ್ಷ ನಡೆಯುವಂತೆ ಶಿವರಾತ್ರಿ ಹಬ್ಬದ ಮಾರನೇ ದಿನ ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಿಂದ ನೆರವೇರಿಸಲಾಗುತ್ತದೆ .
ಪ್ರತಿವರ್ಷವೂ ಶಿವರಾತ್ರಿ ಹಬ್ಬದಂದು ಭಕ್ತಾದಿಗಳು ಉಪವಾಸದಿಂದ ಜಾಗರಣೆ ಮಾಡುತ್ತಾರೆ. ಮರುದಿನ ಬೆಳಿಗ್ಗೆ ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವ ನಡೆದ ಮೇಲೆ ಉಪವಾಸವನ್ನು ಕೈ ಬಿಟ್ಟು ಭೋಜನ ಸವಿಯುತ್ತಾರೆ.
ಕೊರೊನಾ ಮಹಾಮಾರಿಯಿಂದ ಜಾತ್ರೆ ಇನ್ನಿತರ ಶುಭ ಸಮಾರಂಭಗಳು ನಿಂತು ಹೋಗಿದ್ದವು. ಇದೀಗ ಕೊವಿಡ್ ಪ್ರಮಾಣ ಕೊಂಚ ಕಡಿಮೆಯಾಗಿರುವುದರಿಂದ ಎಲ್ಲ ಶುಭ ಸಮಾರಂಭಗಳು ಜಾತ್ರೆಗಳು ಹಿಂದಿನಂತೆ ನಡೆಯುತ್ತಿದೆ ಎಂದು ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಪವನ್ ಕುಮಾರ್ ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB