ತುರುವೇಕೆರೆ: ತಾಲೂಕು ಕಾಂಗ್ರೆಸ್ ಪಕ್ಷದ ಎಐಸಿಸಿ ಸದಸ್ಯರಾದ ಸುಬ್ರಹ್ಮಣ್ಯ ಶ್ರೀಕಂಠೇಗೌಡ ರವರ ಅಪಾರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತುರುವೇಕೆರೆ ಪಟ್ಟಣದ ಚೌಧರಿ ಕನ್ವೆನ್ಷನಲ್ ಹಾಲ್ ನಲ್ಲಿ ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಿಂದ ಸುಬ್ರಹ್ಮಣ್ಯ ಶ್ರೀಕಂಠೇಗೌಡರ ಬೆಂಬಲಿಗರು ಸೇರಿಕೊಂಡು ನಾಸಿಕ್ ಡೋಲ್ ಹಾಗೂ ಬೈಕ್ ರಾಲಿಯ ಮೂಲಕ ತಮ್ಮ ನಾಯಕರನ್ನು ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ನಾಯಕರ ಪರ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿಕೊಂಡು ಚೌದರಿ ಸಮುದಾಯ ಭವನಕ್ಕೆ ಆಗಮಿಸಿದ್ದರು.
ಇದೇ ವೇಳೆ ಪರಸ್ಪರ ಶುಭಾಶಯಗಳು ಹೇಳಿ ಕೇಕ್ ಕತ್ತರಿಸಿ ಸಂಭ್ರಮ ಹಂಚಿಕೊಂಡರು ತಮ್ಮ ಅಭಿಮಾನಿಗಳು ಸುಬ್ರಹ್ಮಣ್ಯ ಶ್ರೀಕಂಠೇಗೌಡರಿಗೆ ಬೃಹತ್ ಗಾತ್ರದ ಹಾರ ಮೂಲಕ ಶುಭಾಶಯ ಕೋರಿದರು
ಈ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತಾಲೂಕು ಘಟಕದ ಅಧ್ಯಕ್ಷ ಚೌಧರಿ ಟಿ. ರಂಗಪ್ಪ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್.ಶಿವರಾಜ್, ಬೆಸ್ಕಾಂ ಮಾಜಿ ನಿರ್ದೇಶಕ ಬಿ.ಎಸ್.ವಸಂತ್ ಕುಮಾರ್, ಗೀತಾ ರಾಜಣ್ಣ, ಪಕ್ಷದ ಮುಖಂಡರಾದ ರಾಜಣ್ಣ, ಕಮಲ ಸ್ವರ್ಣ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಮಹೇಂದ್ರ, ಸುನಿಲ್, ಕೀರ್ತಿ ಹಾಗೂ ಯುವ ಕಾಂಗ್ರೆಸ್ ಸದಸ್ಯರುಗಳು ಕಾರ್ಯಕರ್ತರು ಹಾಜರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz