ಗುಬ್ಬಿ: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ಬುಧವಾರ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸ್ವಾಮಿಗೆ ಅಭಿಷೇಕ ,ಸುಪ್ರಭಾತಸೇವೆ ಪಂಚಾಮೃತ ಅಭಿಷೇಕ ನಡೆಯಿತ್ತು. ಬೆಳಿಗ್ಗೆ ಲಕ್ಷ್ಮೀರಂಗನಾಥಸ್ವಾಮಿಯ ಉತ್ಸವದೊಂದಿಗೆ ರಥೋತ್ಸವಕ್ಕೆ ಆಗಮಿಸಿತ್ತು. ರಥೋತ್ಸವ ಹತ್ತಿರ ಹೋಮ ಪೂಜಾ ಕಾರ್ಯಗಳು ನಡೆದವು. ಮಧ್ಯಾಹ್ನ ಒಂದು ಗಂಟೆಗೆ ರಥೋತ್ಸವದ ಸುತ್ತ ಗರುಡಸ್ವಾಮಿ ಪ್ರದಕ್ಷಣೆ ಹಾಕಿದ ನಂತರ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ಭಕ್ತರ ನಡುವೆ ನಡೆಯಿತ್ತು. ಪ್ರತಿವರ್ಷವೂ ಕೂಢ ಗರುಡಸ್ವಾಮಿ ರಥೋತ್ಸವಕ್ಕೆ ಪ್ರದಕ್ಷಣೆ ಹಾಕುವುದರ ಮೂಲಕ ಭಕ್ತರ ಗಮನ ಸೆಳೆಯಿತು.
ಒಂದು ಕಡೆ ರಥೋತ್ಸವದ ಸುತ್ತು ಗರುಡ ಪ್ರದಕ್ಷಣೆ ಹಾಕುತ್ತಿದ್ದಾರೆ, ಇನ್ನೊಂದು ಕಡೆ ರಥೋತ್ಸವಕ್ಕೆ ಆಗಮಿಸಿದ ಭಕ್ತರು ಜೈಕಾರ ಹಾಕುತ್ತಿದ್ದರು. ಜಿಲ್ಲೆಯಿಂದ ಆಗಮಿಸಿದ ಭಕ್ತರು ರಥೋತ್ಸವಲ್ಲಿ ಸಾಕ್ಷಿಯಾದರು. ಸುಡು ಮಿಸಿಲನ್ನು ಲೆಕ್ಕಿಸದೇ ಭಕ್ತರು ರಥವನ್ನು ಎಳೆದು ಪುನೀತರಾದರು. ಭಕ್ತರಿಗೆ ಅಲ್ಲಲ್ಲಿ ಪಾನಕ ಫಲಹಾರ ಮಜ್ಜಿಗೆಯನ್ನು ವಿತರಿಸಲಾಯಿತು.
ಇದೇ ಸಂಧರ್ಭದಲ್ಲಿ ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿತ್ತು. ರಥೋತ್ಸವಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ , ತಹಶೀಲ್ದಾರ್ ಆರತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ , ಉಪಾಧ್ಯಕ್ಷೆ ಮಂಜುಳ ಭೇಟಿ ನೀಡಿ ದೇವರ ದರ್ಶನ ಪಡೆದರು. ಯಾವುದೇ ಅಹಿತರ ಘಟನೆ ನಡೆಯದಂತೆ ಚೇಳೂರು ಪೋಲಿಸರು ಸೂಕ್ತ ಬಂದೂಬಸ್ತ್ ವಹಿಸಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5