ತುಮಕೂರು: ತುಮಕೂರು ಗ್ರಾಮಾಂತರ ಕೆಸರುಮಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಚನಹಳ್ಳಿ ಗ್ರಾಮದ ಶ್ರೀ ತಿರುಮಲ ರಂಗನಾಥಸ್ವಾಮಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರಾದ ಡಿ.ಸಿ. ಗೌರಿಶಂಕರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.
ಈ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಶಾಸಕರಾದ ಡಿ.ಸಿ. ಗೌರಿಶಂಕರ್ ರವರು ವೈಯಕ್ತಿಕವಾಗಿ 3,50,000 (ಮೂರುವರೆ ಲಕ್ಷ) ರೂಗಳ ಧನಸಹಾಯ ಮಾಡಿದ್ದು, ದೇವಾಲಯದ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ವತಿಯಿಂದ 10,00,000 (ಹತ್ತು ಲಕ್ಷ) ರೂಗಳನ್ನು ಬಿಡುಗಡೆ ಮಾಡಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಶಾಸಕರಾದ ಕೇವಲ ನಾಲ್ಕು ವರ್ಷದ ಅವಧಿಯಲ್ಲಿ ಮಾಚನಹಳ್ಳಿ ಗ್ರಾಮಕ್ಕೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಹೊರತುಪಡಿಸಿ ಸುಮಾರು 20,00,000 (ಇಪ್ಪತ್ತು ಲಕ್ಷ) ವೆಚ್ಚದಲ್ಲಿ ಸಿಸಿ ರಸ್ತೆ 12,00,000 (ಹನ್ನೆರೆಡು ಲಕ್ಷ) ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣದಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಶಾಸಕರ ಕಾರ್ಯಕ್ಕೆ ಗ್ರಾಮಸ್ಥರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB