ಮಧುಗಿರಿ: ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ರಥಸಪ್ತಮಿ ಅಂಗವಾಗಿ’ ಬ್ರಹ್ಮ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಮಂಗಳವಾರ ನಡೆಸಲಾಯಿತು.
ಉತ್ಸವಮೂರ್ತಿಯನ್ನು ದೇವಸ್ಥಾನದ ಪ್ರಾಂಗಣದಲ್ಲಿ ಮೂರು ಬಾರಿ ಪ್ರಾಕಾರೋತ್ಸವ ನಡೆಸಿ ದೇವಸ್ಥಾನದ ಮುಂಭಾಗದಲ್ಲಿ ರಥೋತ್ಸವಕ್ಕೆ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಮಂಗಳವಾದ್ಯಗಳೊಂದಿಗೆ ತಂದು ಕುಳ್ಳಿರಿಸಲಾಯಿತು.
ಪೂಜೆ ನಡೆಸಿ ರಥವನ್ನು ಎಳೆಯಲಾಯಿತು. ಈ ವೇಳೆ ಭಕ್ತರು ಬಾಳೆಹಣ್ಣನ್ನು ರಥದ ಮೇಲೆ ಎಸೆದು ತಮ್ಮ ಇಷ್ಟಾರ್ಥಗಳು ಸಿದ್ದಿಗಾಗಿ ಪ್ರಾರ್ಥಿಸಿಕೊಂಡರು.
ಈ ವೇಳೆ ಧಾರ್ಮಿಕ ಮುಖಂಡ ಡಾ.ಎಂ.ಜಿ. ಶ್ರೀನಿವಾಸ ಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ಶಂಕರ ಸೇವಾ ಸಮಿತಿಯ ಬಿ.ಆರ್.ಸತ್ಯನಾರಾಯಣ, ಕಲಾರಂಗದ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ, ಪುರಸಭಾ ಮಾಜಿ ಅಧ್ಯಕ್ಷ ಎಂ.ವಿ.ಗೋವಿಂದರಾಜು, ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್, ರೆವಿನ್ಯೂ ಇನ್ಸ್ ಪೆಕ್ಟರ್ ಜಯರಾಮಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ ನಾಗೇಶ್, ಪುರಸಭಾ ಸದಸ್ಯ ಲಾಲಾಪೇಟೆ ಮಂಜುನಾಥ್, ಮಾಜಿ ಸದಸ್ಯ ರುಗಳಾದ ಆರ್.ಎಲ್.ಎಸ್. ರಮೇಶ್ ,ಮಂಜುನಾಥ್, ಸೇವಾಕರ್ತರಾದ ದೂಲಿ ಬಾಬು, ಯತೀಶ್ ಬಾಬು ,ಎಸ್ ಬಿ ಐ ಗೋಪಾಲ್, ಜಿ. ಆರ್.ಧನ್ ಪಾಲ್ , ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟರು, ಅರ್ಚಕ ಅನಂತ ಭಟ್ ಇದ್ದರು.
ವರದಿ: ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB