nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Facebook Twitter Instagram
    ಟ್ರೆಂಡಿಂಗ್
    • ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    • ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ
    • ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ
    • ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ
    • ಸಾಲ ಮರುಪಾವತಿ ಮಾಡದ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿಹಾಕಿ ಟಾರ್ಚರ್!
    • ಕುಟುಂಬ ಗಲಾಟೆ ನಿಲ್ಲಿಸಲು ಬಂದ ಪೇದೆಯಿಂದ ಮಹಿಳೆ ಮೇಲೆ ಅತ್ಯಾಚಾರ!
    • ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    • ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ರಾಮಕೃಷ್ಣ ಸೇವಾಶ್ರಮ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರವಾಹ ಪರಿಹಾರ ಯೋಜನೆ ಆರಂಭ
    ಪಾವಗಡ September 24, 2024

    ಶ್ರೀ ರಾಮಕೃಷ್ಣ ಸೇವಾಶ್ರಮ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರವಾಹ ಪರಿಹಾರ ಯೋಜನೆ ಆರಂಭ

    By adminSeptember 24, 2024No Comments2 Mins Read
    Shri Ramakrishna Sevashram

    ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ಹಾಗೂ ಇನ್ಫೋಸಿಸ್ ಫೌಂಡೇಷನ್ ಸಹಕಾರದೊಂದಿಗೆ ಕಳೆದ ಮೂರು ತಿಂಗಳುಗಳಿಂದ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರದೇಶಗಳಲ್ಲಿ ಪ್ರವಾಹ ಪರಿಹಾರ ಯೋಜನೆಯನ್ನು ಸ್ವಾಮಿ ಜಪಾನಂದಜೀ ಮಹಾರಾಜ್ ರವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುಗಿಸಿದ್ದು, ಇದೀಗ ಆಂಧ್ರಪ್ರದೇಶದ ವಿಜಯವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಪರಿಹಾರ ಕಾರ್ಯ ನೆರವೇರಿಸಲು ಸೆ.23ರಿಂದ 26ರವರೆಗೆ ವಿಜಯವಾಡ ಪ್ರದೇಶದಲ್ಲಿ ಪರಿಹಾರ ಕಾರ್ಯ ನೆರವೇರಿಸಲು ಸ್ವಾಮಿ ವಿವೇಕಾನಂದ ತಂಡದೊಂದಿಗೆ ಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರು ತೆರಳುತ್ತಿದ್ದಾರೆ.

    ಮೊದಲನೇ ಹಂತದಲ್ಲಿ ಸರಿಸುಮಾರು ಎರಡು ಸಾವಿರ ಸಂತ್ರಸ್ತರಿಗೆ ವಿಜಯವಾಡದ ಅತ್ಯಂತ ದುಃಸ್ಥಿತಿಯಲ್ಲಿರುವ ಹಾಗೂ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಿಗೆ ಪರಿಹಾರ ನೀಡಲು ಆಂಧ್ರಪ್ರದೇಶದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಸತ್ಯಕುಮಾರ್ ಯಾದವ್ ಹಾಗೂ ಸ್ಥಳೀಯ ಮುಖಂಡರುಗಳು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆಯ ಕಾರ್ಯಕರ್ತರ ಮನವಿಯ ಮೇರೆಗೆ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.


    Provided by
    Provided by

    ಸ್ವಾಮಿ ಜಪಾನಂದಜೀ ಮಹಾರಾಜ್ ರವರ ಕಾರ್ಯವೈಖರಿಯನ್ನು ಅರಿತಿರುವ ಆಂಧ್ರಪ್ರದೇಶ ಸರ್ಕಾರದ ಧುರೀಣರುಗಳಾದ ಮುಖ್ಯಮಂತ್ರಿಗಳು, ನಾ.ರಾ.ಲೋಕೇಶ್, ಘನತೆವೆತ್ತ ಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಾದ ಪವನ್ ಕಲ್ಯಾಣ್ ರವರ ಪೂರ್ಣ ಸಹಕಾರದಿಂದ ಈ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

    ಮೊದಲನೇ ಹಂತದ ಪ್ರಾರಂಭೋತ್ಸವವನ್ನು ವಿಜಯವಾಡದ ಅತ್ಯಂತ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಪ್ರದೇಶಗಳಿಂದ ಆರಂಭವಾಗುತ್ತಿದೆ. ಇದರ ಪ್ರಾರಂಭೋತ್ಸವವನ್ನು ಆರೋಗ್ಯ ಸಚಿವರಾದ ಸತ್ಯಕುಮಾರ್ ಯಾದವ್ ರವರಿಂದ ಉದ್ಘಾಟಿಸಲ್ಪಡುತ್ತಿದೆ. ಸ್ಥಳೀಯ ಶಾಸಕರುಗಳು, ಕಲೆಕ್ಟರ್, ಹಾಗೂ ಇತರ ಅಧಿಕಾರಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀ ರಾಮಕೃಷ್ಣ ಸೇವಾಶ್ರಮದ ಸಂಯೋಜಕರಾದ, ಹಿರಿಯ ವಕೀಲರು ಹಾಗೂ ಕಡಪ ಜಿಲ್ಲಾ ಬಿ.ಜೆ.ಪಿ. ಘಟಕದ ಅಧ್ಯಕ್ಷರೂ ಆದ ಸತೀಶ್ ಚಂದ್ರರವರು ಈ ಯೋಜನೆಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ.

    ಶ್ರೀ ರಾಮಕೃಷ್ಣ ಸೇವಾಶ್ರಮ ಕಳೆದ 35 ವರ್ಷಗಳಿಂದ ಮುಖ್ಯವಾಗಿ ದಕ್ಷಿಣ ಭಾರತದ ಆರು ರಾಜ್ಯಗಳಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂದರ್ಭಗಳಲ್ಲೆಲ್ಲಾ ಸೇವಾ ಯೋಜನೆಗಳನ್ನು ತತ್ಕ್ಷಿಣ ಕೈಗೊಂಡು ಸಂತ್ರಸ್ತರ ನೆರವಿಗೆ ಆಶ್ರಯಧಾತರಾಗಿ ಸೇವೆ ಸಲ್ಲಿಸುತ್ತಿರುವುದು ಗಮನಾರ್ಹ. ಸ್ವಾಮಿ ಜಪಾನಂದಜೀ ಮಹಾರಾಜ್, ಸ್ವಾಮಿ ವಿವೇಕಾನಂದ ಸ್ವಯಂಸೇವಾ ತಂಡ, ಸಮರ್ಪಣ ಇನ್ಫೋಸಿಸ್ ಸಿ.ಎಸ್.ಆರ್. ಬೆಂಗಳೂರು, ಮಮತ ಇನ್ಫೋಸಿಸ್ ಸಿ.ಎಸ್.ಆರ್. ಹೈದರಾಬಾದ್ ರವರ ಸಹಕಾರ ಅತ್ಯಮೂಲ್ಯವಾದುದಾಗಿದೆ. ಈ ಯೋಜನೆಯ ಮಾರ್ಗದರ್ಶನ ಪರಮ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರದ್ದು. ಅವರ ಕಾರ್ಯದಕ್ಷತೆ ಹಾಗೂ ಶ್ರದ್ಧೆ, ಅರ್ಪಣಾ ಮನೋಭಾವನೆ ಹಾಗೂ ಮತ್ತೆಲ್ಲದಕ್ಕಿಂತ ಮಿಗಿಲಾಗಿ ಮಾನವೀಯತೆಯ ಮೌಲ್ಯಗಳನ್ನು ಅನುಷ್ಠಾನರೂಪಕ್ಕೆ ತರಲು ಸ್ವಾಮೀಜಿಯವರು ಅಹರ್ನಿಷಿ ದುಡಿಯುತ್ತಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು

    July 10, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ…

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025

    ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ

    July 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.