ತುಮಕೂರು: ನಾವು ನ್ಯಾಯ ಮತ್ತು ಧರ್ಮಕ್ಕೆ ಹೆಸರಾದ ಶ್ರೀರಾಮನ ಯಾವ ಗುಣಗಳನ್ನು ಪಾಲಿಸುತ್ತಿದ್ದೇವೆ ಎಂಬ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಹಾಗೂ ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸವ್ಯಸಾಚಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಚಿಕಾಗೋ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮೀ ವಿವೇಕಾನಂದರು ಪ್ರತಿಪಾದಿಸಿದ, ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಿಂದೂ ಧರ್ಮವಾಗಿ ಈಗ ಉಳಿದಿದೆಯೇ ಎಂಬುದನ್ನು ನಾವು ಹಿಂದಿರುಗಿ ನೋಡಬೇಕಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಪಾದಿಸಿದ ಸಮಾನತೆ, ಸಾಮರಸ್ಯ, ಬಾತೃತ್ವವನ್ನು ಒಳಗೊಂಡ ಧರ್ಮದ ಅಗತ್ಯವಿದೆ ಎಂದರು.
ಭಾರತ ಒಂದು ಕಾಲದಲ್ಲಿ ಪಾಶ್ಚಿಮಾತ್ಯರಿಗೆ ಮಾದರಿಯಾಗಿದ್ದ ದೇಶ. ನಳಂದ, ತಕ್ಷಶಿಲೆಯಂತಹ ವಿಶ್ವವಿದ್ಯಾಲಯಗಳಿಗೆ ದೇಶ, ವಿದೇಶಗಳ ಜನರು ಕಲಿಯಲು ಬರುತ್ತಿದ್ದರು.ಸಹಿಷ್ಣತೆ ಮತ್ತು ಶಾಂತಿ ಭಯಸುವ ಭಾರತ ಇಂದಿಗೆ ಅಗತ್ಯವಾಗಿದೆ. ವಿನೋಧ ಭಾವೆಯವರ ಒಂದು ಮಾತಿಗೆ ಬೆಲೆ ಕೊಟ್ಟು,ಶಿಕ್ಷಣದಿಂದ ಬದಲಾವಣೆ ಸಾಧ್ಯ ಎಂದು ನಂಬಿ ನನ್ನ ತಂದೆ ೬೪ ವರ್ಷಗಳ ಹಿಂದೆ ಶಿಕ್ಷಣ ಸಂಸ್ಥೆ ಪ್ರಾರಂಭಿಸಿದರು. ಆನಂತರ ನನ್ನ ಸಹೋದರರು ಈ ಸಂಸ್ಥೆಯನ್ನು ಕಷ್ಟಪಟ್ಟು ಬೆಳೆಸಿದರು. ಅವರ ಶ್ರಮವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಮುಂದಿನ ದಿನಗಳಲಿ ಅನೇಕ ಸೇವೆಗಳನ್ನು ನೀಡಬೇಕೆಂಬ ಉದ್ದೇಶದಿಂದ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದೇನೆ.ನಿಮ್ಮೆಲ್ಲರ ಸಹಕಾರದಿಂದ ಸಕಾರಗೊಳಿಸುತ್ತೇನೆ ಎಂಬ ನಂಬಿಕೆ ನನಗಿದೆ.ನಾನು ಮೃಧು ಧೋರಣೆ ಇರುವ ವ್ಯಕ್ತಿ ಇರಬಹುದು.ಆದರೆ ನಾನು ತೆಗೆದುಕೊಳ್ಳುವ ನಿರ್ಧಾರ ಅತ್ಯಂತ ಕಠಿಣವಾಗಿರುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy