nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲೆಮಾರಿ ಸಮುದಾಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    ತುಮಕೂರು December 11, 2024

    ಅಲೆಮಾರಿ ಸಮುದಾಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    By adminDecember 11, 2024No Comments2 Mins Read
    alemari

    ತುಮಕೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅನೇಕ ಅಲೆಮಾರಿ ಸಮುದಾಯದವರು ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳಿಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಗ್ರಾಮಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಿ ಅಗತ್ಯ ದಾಖಲೆಗಳನ್ನು ಪಡೆಯುವಂತೆ ಮಾಡಬೇಕು ಎಂದು ಸೂಚಿಸಿದರು.


    Provided by

    ಪ್ರತಿ 3 ತಿಂಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.

    ಅಲೆಮಾರಿ ಸಮುದಾಯದವರಿಗೆ ವಿಶೇಷ ವಸತಿ ಯೋಜನೆಯಡಿ ನಿವೇಶನ ಸೌಲಭ್ಯಕ್ಕಾಗಿ 3.50 ಲಕ್ಷ ರೂ.ಗಳ ಸಹಾಯಧನ ನಿಗದಿಪಡಿಸಲಾಗಿದ್ದರೂ ಸಹ ರಾಜೀವ್ ಗಾಂಧಿ ವಸತಿ ನಿಗಮವು ಕೇವಲ 2 ಲಕ್ಷ ರೂ.ಗಳನ್ನು ನೀಡುತ್ತಿದ್ದು ಮನೆ ನಿರ್ಮಿಸಿಕೊಳ್ಳಲು ಹೆಚ್ಚಿನ ಅನುದಾನ ನೀಡಬೇಕು ಎಂದು ನಿರ್ದೇಶಿಸಿದರು.

    ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ನಿವೇಶನ ನೀಡಿರುವ ಪ್ರದೇಶಗಳಲ್ಲಿ ಕಲ್ಲು ಬಂಡೆಗಳಿದ್ದು, ಜನರು ವಾಸಿಸಲು ಯೋಗ್ಯವಾಗಿಲ್ಲ. ಉತ್ತಮ ನಿವೇಶನವನ್ನು ನೀಡಬೇಕು ಎಂದು ಸಮುದಾಯದ ಮುಖಂಡರು ಸಭೆಗೆ ಬೇಡಿಕೆಯಿಟ್ಟರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಪ್ರದೇಶಗಳು ಮಜಿರೆ ಗ್ರಾಮಗಳಾಗಿದ್ದು ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ನಿವೇಶನಗಳ ಸಮಸ್ಯೆ ಉಂಟಾಗುತ್ತಿದೆ. ಮಜಿರೆ ಗ್ರಾಮಗಳನ್ನು ಶೀಘ್ರವಾಗಿ ಕಂದಾಯ ಗ್ರಾಮಗಳನ್ನಾಗಿಸಿ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಯಿಂದ ಒದಗಿಸುವ ಸೌಲಭ್ಯಗಳಲ್ಲಿ ಅಲೆಮಾರಿ ಸಮುದಾಯಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಆಳಿಸಲು ಜಿಲ್ಲಾ ಮಟ್ಟದಲ್ಲಿ ಕುಂದು ಕೊರತೆ ಸಭೆ ನಡೆಸುತ್ತಿರುವುದು ಅಲೆಮಾರಿ ಸಮುದಾಯಗಳ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿದೆ. ಅಧಿಕಾರಿಗಳು ಮತ್ತು ಅಲೆಮಾರಿ ಸಮುದಾಯಗಳು ಸಮನ್ವತೆ ಕಾಯ್ದುಕೊಂಡಾಗ ಅಲೆಮಾರಿ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ. ಕುಂದು ಕೊರತೆ ಸಭೆಗಳಲ್ಲಿ ವೈಯಕ್ತಿಕ ಸಮಸ್ಯೆಗಳಿಗಿಂತ ಸಮುದಾಯ ಕೇಂದ್ರಿತ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಮುದಾಯದ ಮುಖಂಡರಿಗೆ ಮನವರಿಕೆ ಮಾಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪ ವಿಭಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ, ಗೋಟೂರು ಶಿವಪ್ಪ ಸೇರಿದಂತೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಅಲೆಮಾರಿ ಸಮುದಾಯಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.