nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ಪತ್ರೆ ಗೋಡೌನ್ ನಲ್ಲಿ ಕೊಳೆಯುತ್ತಿರುವ ‘ಶುಚಿ’ ಸ್ಯಾನಿಟರಿ ಪ್ಯಾಡ್!
    ಕೊರಟಗೆರೆ May 17, 2022

    ಆಸ್ಪತ್ರೆ ಗೋಡೌನ್ ನಲ್ಲಿ ಕೊಳೆಯುತ್ತಿರುವ ‘ಶುಚಿ’ ಸ್ಯಾನಿಟರಿ ಪ್ಯಾಡ್!

    By adminMay 17, 2022No Comments2 Mins Read
    shuchi

    ಕೊರಟಗೆರೆ: ಸರ್ಕಾರದಿಂದ ಶಾಲಾ ಕಾಲೇಜುಗಳ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಮಾಡಲಾಗಿದ್ದರೆ, ಇತ್ತ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿಕೆ ಮಾಡದೇ ಗೋಡಾನ್ ನಲ್ಲಿ ಕೊಳೆಯಲು ಹಾಕಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

    ಕೊರಟಗೆರೆ ತಾಲೂಕಿನ ವೈದ್ಯಾಧಿಕಾರಿ ವಿಜಯ್ ಕುಮಾರ್ ಅವರ ನಿರ್ಲಕ್ಷ್ಯದಿಂದಾಗಿ ಬಡ ಹೆಣ್ಣುಮಕ್ಕಳಿಗೆ ಸೇರಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳು ಆಸ್ಪತ್ರೆ ವಠಾರದಲ್ಲಿರುವ ಗೋಡಾನ್ ನಲ್ಲಿ ಕೊಳೆಯುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ.


    Provided by
    Provided by

    ಸರ್ಕಾರದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ, ಬಡ ಹೆಣ್ಣು ಮಕ್ಕಳಿಗೆ ಈ ಕೊಡುಗೆ ನೀಡಿದೆ. ಆದರೆ, ಇದು ಫಲಾನುಭವಿಗಳಿಗೆ ದೊರಕದೇ ಈ ರೀತಿಯಾಗಿ ಗೋಡಾನ್ ನಲ್ಲಿ ಕೊಳೆಯುತ್ತಿರುವುದು ದುರದೃಷ್ಟಕರವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ತಕ್ಷಣವೇ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

    ಪಾಳು ಬಿದ್ದಿರುವ ಸ್ಥಿತಿಯಲ್ಲಿರುವ ಗೋಡಾನ್ ನಲ್ಲಿ ಸ್ಯಾನಿಟರಿ ಪ್ಯಾಡ್ ಗಳು ಕಂಡು ಬಂದಿದ್ದು, “ಶುಚಿ” ಎಂದು ಬರೆಯಲಾಗಿರುವ ರಟ್ಟಿನ ಬಾಕ್ಸ್ ಗಳಲ್ಲಿ ಸರ್ಕಾರ ಉಚಿತವಾಗಿ ನೀಡುತ್ತಿರುವ ಸ್ಯಾನಿಟರಿ ಪ್ಯಾಡ್ ಗಳು ಕಂಡು ಬಂದಿವೆ. ಹೆಣ್ಣು ಮಕ್ಕಳಿಗೆ ವಿತರಿಸಬೇಕಾದ ಸ್ಯಾನಿಟರಿ ಪ್ಯಾಡ್ ಗಳು ಇಲ್ಲೇಕೆ ಕೊಳೆಯುತ್ತಿವೆ ಎನ್ನುವುದು ತಿಳಿದು ಬಂದಿಲ್ಲ. ಆದರೆ, ಇಷ್ಟೊಂದು ಪ್ರಮಾಣದಲ್ಲಿ ಸರ್ಕಾರಿ ಸವಲತ್ತುಗಳು ವ್ಯರ್ಥವಾಗುತ್ತಿವೆ. ಇದನ್ನು ಸಬ್ದಳಕೆ ಮಾಡಲು ಯಾಕೆ ಕ್ರಮಕೈಗೊಳ್ಳಲಾಗುತ್ತಿಲ್ಲ ಎನ್ನುವ  ಪ್ರಶ್ನೆಗಳಿಗೆ ಕಾರಣವಾಗಿದೆ.

    ಎಷ್ಟೋ ಬಡವರ ಮನೆಗಳಲ್ಲಿ ಹೆಣ್ಣು ಮಕ್ಕಳು ಸ್ಯಾನಿಟರಿ ಪ್ಯಾಡ್ ಇಲ್ಲದೇ ತಮ್ಮ ಮುಟ್ಟಿನ ಅವಧಿಯಲ್ಲಿ ಸಾಕಷ್ಟು ತೊಂದರೆಗೀಡಾಗುತ್ತಾರೆ. ಹಳ್ಳಿಗಳಲ್ಲಿ ಎಷ್ಟೋ ಮನೆಗಳಲ್ಲಿ ಇನ್ನು ಕೂಡ  ಸ್ಯಾನಿಟರಿ ಪ್ಯಾಡ್ ಕೊಳ್ಳಲು ಸಾಧ್ಯವಾಗದ ಹೆಣ್ಣು ಮಕ್ಕಳು ಎಷ್ಟೋ ಸಂಖ್ಯೆಯಲ್ಲಿದ್ದಾರೆ. ಇಂತಹವರಿಗೆ ಸದ್ಬಳಕೆಯಾಗಬೇಕಿರುವ ಸರ್ಕಾರದ ಸೌಲಭ್ಯಗಳು ಆಸ್ಪತ್ರೆಗಳ ಗೋಡೌನ್ ಗಳಲ್ಲಿ ಕೊಳೆಯುತ್ತಿರುವುದು ದುರದೃಷ್ಟಕರವಾಗಿದೆ.

    ಈ ಘಟನೆಯ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಗಮನ ಹರಿಸಬೇಕು, ಮಾತ್ರವಲ್ಲದೇ ಇಡೀ ರಾಜ್ಯದಲ್ಲಿ ಈ ಸ್ಯಾನಿಟರಿ ಪ್ಯಾಡ್ ಗಳನ್ನು ವ್ಯರ್ಥ ಮಾಡುತ್ತಿರುವ ಘಟನೆಗಳ ಕುರಿತು ತನಿಖೆಗೆ ಸಂಬಂಧಪಟ್ಟವರು ಮುಂದಾಗಬೇಕು ಎನ್ನುವುದೇ ನಮ್ಮತುಮಕೂರು ಸದಾಶಯ.

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.