ತುರುವೇಕೆರೆ: ತಾಲ್ಲೂಕಿನ ತಾಳ್ಕೆರೆಯಲ್ಲಿ ಶುದ್ಧ ನೀರಿನ ಘಟಕವಿದ್ದರೂ , ಸಾರ್ವಜನಿಕರು ಸರಿಯಾಗಿ ಅದರ ಪ್ರಯೋಜನ ಪಡೆದುಕೊಳ್ಳಲು ಹೆಣಗಾಡುವ ರೀತಿ ಆಗಿದೆ.
ತಾಳ್ಕೆರೆ ಪಂಚಾಯ್ತಿ ಪಕ್ಕದಲ್ಲೇ ಇರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕಾಯಿನ್ ಬಾಕ್ಸ್ ಇಲ್ಲದೇ ನೀರು ತುಂಬಿಕೊಳ್ಳಲು ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನೀರು ಬಿಡಲು ಯಾರೋ ಒಬ್ಬ ವ್ಯಕ್ತಿಯನ್ನು ನೇಮಿಸಿದ್ದಾರೆ ಮತ್ತು ಅವರು ಬರುವವರೆಗೂ ನೀರು ಸಿಗುವುದಿಲ್ಲ.
ಇದರೊಂದಿಗೆ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಮತ್ತು ಸಂಜೆ 4 ಗಂಟೆಯ ಮೇಲೆ ಮಾತ್ರ ನೀರಿನ ಲಭ್ಯತೆ ಇದೆ ಎಂದು ಬೋರ್ಡ್ ಕೂಡ ಹಾಕಲಾಗಿದೆ. ಇದ್ಯಾವುದೂ ಪಂಚಾಯ್ತಿಯ ಗಮನಕ್ಕೆ ಬಂದಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಪರಿಹಾರ ನೀಡಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB