ಬೆಂಗಳೂರು: ರಾಜ್ಯಪಾಲರು ನೀಡಿದ ಬರೀ ನೋಟಿಸ್ ಗೆ ಗಡಗಡ ನಡುಗುತ್ತಿದ್ದೀರಾ. ಇನ್ನೂ ಅನುಮತಿ ಕೊಟ್ಟರೆ ನಿಮ್ಮ ಕತೆ ಏನಾಗಬಹುದು? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ–ಜೆಡಿಎಸ್ ಜಂಟಿ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಅವರು ಹೇಳಿದರು.
ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ದೊಡ್ಡ ಹೋರಾಟವಿದು. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದು ನಡೆಯದ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗಾಗಿ ನಮ್ಮ ಹೋರಾಟ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296