nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ

    April 29, 2026

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ಧರಾಮಯ್ಯ ಕೇವಲ ಕಾಫೀ – ತಿಂಡಿ – ಬಿಸ್ಕೆಟ್‍ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ: ಎನ್.ಆರ್.ರಮೇಶ್ ಆರೋಪ
    Uncategorized March 7, 2023

    ಸಿದ್ಧರಾಮಯ್ಯ ಕೇವಲ ಕಾಫೀ – ತಿಂಡಿ – ಬಿಸ್ಕೆಟ್‍ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ: ಎನ್.ಆರ್.ರಮೇಶ್ ಆರೋಪ

    By adminMarch 7, 2023No Comments3 Mins Read
    ramesh

    ಸಿದ್ಧರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಕೇವಲ ಕಾಫೀ – ತಿಂಡಿ – ಬಿಸ್ಕೆಟ್‍ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

    ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಈ ಸಂಬಂಧ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಎನ್.ಆರ್ ರಮೇಶ್, ಸಿದ್ಧರಾಮಯ್ಯ ಮತ್ತು ಅವರ ಕಛೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ಬೃಹತ್ ಹಗರಣ ನಡೆದಿದೆ. 2013-14 ರಿಂದ 2017-18 ರವರೆಗಿನ 05 ವರ್ಷಗಳ ಅವಧಿಯಲ್ಲಿ – ಮುಖ್ಯಮಂತ್ರಿಗಳ ಕಛೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಛೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ / ಗಣ್ಯರ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ. ಈ 05 ವರ್ಷಗಳ ಅವಧಿಯಲ್ಲಿ ಕೇವಲ ಮುಖ್ಯಮಂತ್ರಿಗಳ ಕಛೇರಿಯ ಕಾರ್ಯಗಳಿಗೆ ಕಾಫೀ – ಟೀ – ತಿಂಡಿ – ಸ್ನಾಕ್ಸ್ – ಉಪಹಾರ ಪೂರೈಕೆ ಕಾರ್ಯಗಳಿಗೆಂದು ವೆಚ್ಛ ಮಾಡಿರುವ ಒಟ್ಟು ಮೊತ್ತ ₹. 200,62,93,027/- ಗಳು. ನಂಬಲ ಸಾಧ್ಯವಾದರೂ ಸಹ ಇದು ಸತ್ಯ ಎಂದು ಹೇಳಿದರು.


    Provided by
    Provided by

    ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು RTI ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಆಘಾತಕಾರಿ ಮಾಹಿತಿಗಳು ಬಯಲಾಗಿದೆ. 5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ಪ್ರತಿಯೊಂದು ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಛ. 410 ರಜಾ ದಿನಗಳನ್ನು ಹೊರತುಪಡಿಸಿದರೆ ಪ್ರತಿಯೊಂದು ದಿನಕ್ಕೆ ಸರಾಸರಿ 14 ಲಕ್ಷ ರೂಪಾಯಿ ವೆಚ್ಛವಾಗಿದೆ ಎಂದು ದೂರಿದರು.

    ಐದು ವರ್ಷಗಳ ಅವಧಿ ಎಂದರೆ ಒಟ್ಟು 1,825 ದಿನಗಳು. 52 ಭಾನುವಾರಗಳು, 12 ಎರಡನೇ ಶನಿವಾರಗಳು ಮತ್ತು 20 ಕ್ಕೂ ಹೆಚ್ಚು ಸರ್ಕಾರ ರಜಾ ದಿನಗಳು ಸೇರಿದಂತೆ ಪ್ರತೀ ವರ್ಷಕ್ಕೆ 82 ದಿನಗಳಂತೆ, ಐದು ವರ್ಷಗಳಿಗೆ ಸುಮಾರು 410 ದಿನಗಳು ಸರ್ಕಾರೀ ರಜಾ ದಿನಗಳು ಆಗುತ್ತವೆ. ಆದರೂ, ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಛೇರಿಯು ಒಂದು ದಿನವೂ ರಜೆಯಿಲ್ಲದೆ ಎಲ್ಲಾ ಭಾನುವಾರಗಳು, ಎರಡನೇ ಶನಿವಾರಗಳು ಮತ್ತು ಎಲ್ಲಾ ಸರ್ಕಾರೀ ರಜಾ ದಿನಗಳಲ್ಲೂ ಕಾರ್ಯ ನಿರ್ವಹಿಸಿದೆಯೆಂದು ಭಾವಿಸಿದರೂ ಸಹ ಐದು ವರ್ಷಗಳ ಅವಧಿಯ ಒಟ್ಟು 1,825 ದಿನಗಳಲ್ಲಿ ಸಿದ್ಧರಾಮಯ್ಯ ಅವರ ಅಧಿಕೃತ ಕಛೇರಿಯ ಸಭೆಗಳಲ್ಲಿ ಮತ್ತು ಅತಿಥಿ ಗಣ್ಯರ ಉಪಚಾರಗಳ ಹೆಸರಿನಲ್ಲಿ ಕಾಫೀ – ತಿಂಡಿ – ಸ್ನಾಕ್ಸ್ – ಉಪಹಾರಗಳಿಗೆಂದು ಪ್ರತೀ ದಿನವೊಂದಕ್ಕೆ ಸರಾಸರಿ ₹. 10,99,339/- ಗಳನ್ನು ವೆಚ್ಛ ಮಾಡಲಾಗಿದೆ. ಇದು ಕೇಳಲು ಹಾಸ್ಯ ಪ್ರಸಂಗದಂತಿದ್ದರೂ ಸಹ ದಾಖಲೆಗಳು ಅಸಲೀ ಸತ್ಯವನ್ನು ಬಿಚ್ಚಿಡುತ್ತಿವೆ. ಈ ನಂಬಲಸಾಧ್ಯವಾದಂತಹ ದಾಖಲೆಗಳಿಂದ 2013-14 ರಿಂದ 2017-18 ರವರೆಗಿನ ಐದು ವರ್ಷಗಳಲ್ಲಿ ನಕಲಿ ದಾಖಲೆಗಳನ್ನು ತಯಾರಿಸಿ ಒಟ್ಟು ₹. 200,62,93,027/- ಗಳನ್ನು ಲೂಟಿ ಮಾಡಿರುವುದು ಬಟಾಬಯಲಾಗಿದೆ ಎಂದು ಎನ್. ಆರ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.

    ಅಂದಿನ ಮುಖ್ಯಮಂತ್ರಿಗಳ ಕಛೇರಿಯ ಈ ನಂಬಲಸಾಧ್ಯವಾದ ವೆಚ್ಛಗಳ ಬಗ್ಗೆ Office of the Principal Accountant General, Karnataka ದವರು ನೀಡಿರುವ ಲೆಕ್ಕ ಪರಿಶೋಧನಾ ವರದಿಯಲ್ಲಿ ತಮ್ಮ ತೀವ್ರ ಆಕ್ಷೇಪಣೆಗಳನ್ನು ಅತ್ಯಂತ ಸ್ಪಷ್ಟವಾಗಿ ದಾಖಲಿಸಿವೆ.

    ಆದರೂ, ಭ್ರಷ್ಟಾಚಾರದ ಪಿತಾಮಹ ಸಿದ್ಧರಾಮಯ್ಯ ಅವರು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವ ಮೂಲಕ ತಾವೆಂಥ ಭಂಢ ರಾಜಕಾರಣಿ ಎಂಬುದನ್ನು ಜಗಜ್ಜಾಹೀರುಪಡಿಸಿದ್ದಾರೆ. ಕಳೆದ 75 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ 25 ಮಂದಿ ಮುಖ್ಯಮಂತ್ರಿಗಳ ಪೈಕಿ, ಬೇರೆ ಇನ್ಯಾವ ಮುಖ್ಯಮಂತ್ರಿಗಳ ಅವಧಿಯಲ್ಲೂ ಸಹ ನಡೆಯದ “ಅತಿಥಿ ಉಪಚಾರ”ದ ಹೆಸರಿನ ಇಂತಹ ಭ್ರಷ್ಟಾಚಾರ ಸಿದ್ಧರಾಮಯ್ಯನವರ ಅವಧಿಯಲ್ಲಿ ನಡೆದಿದೆ. ಹಾಸಿಗೆ – ದಿಂಬು, ಇಂದಿರಾ ಕ್ಯಾಂಟೀನ್ ತಿಂಡಿ, ನೆಲದಡಿಯ ಕಸದ ಡಬ್ಬಗಳು ಮತ್ತು LED ದೀಪಗಳ ಅಳವಡಿಕೆಯಂತಹ ಯೋಜನೆಗಳ ಹೆಸರಿನಲ್ಲೂ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ ಕೇವಲ ಮುಖ್ಯಮಂತ್ರಿಗಳ ಕಛೇರಿಯ ಕಾರ್ಯಗಳಿಗೆ ಕಾಫೀ – ತಿಂಡಿ – ಬಿಸ್ಕೇಟ್ ಪೂರೈಕೆ ಹೆಸರಿನಲ್ಲೂ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವುದನ್ನು ನೋಡಿದರೆ, ಇಂತಹ ಬೃಹತ್ ಭ್ರಷ್ಟಾಚಾರಗಳ ಸರ್ಕಾರ ದೇಶದಲ್ಲಿ ಮತ್ತೊಂದಿಲ್ಲ ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ಸರ್ಕಾರದ ಯಾವೊಂದು ಯೋಜನೆಗಳನ್ನೂ ಬಿಡದೆ, ಎಲ್ಲದರಲ್ಲೂ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆಸಿದ್ದ ಸಿದ್ಧರಾಮಯ್ಯನವರ ಸರ್ಕಾರವು – ಕೊನೆಗೆ ಕಾಫೀ – ತಿಂಡಿ – ಉಪಹಾರದ ಹೆಸರಿನಲ್ಲೂ ಬೃಹತ್ ಮೊತ್ತದ ವಂಚನೆ ಎಸಗಿದೆ.

    ಮುಖ್ಯಮಂತ್ರಿಗಳ ಕಛೇರಿಯ ಸಭೆಗಳು ಮತ್ತು ಅವರ ಕಛೇರಿಗೆ ಆಗಮಿಸಿರುವ ಅತಿಥಿ , ಗಣ್ಯರ ಉಪಚಾರ ಕಾರ್ಯಗಳಿಗೆ ಕಾಫೀ – ತಿಂಡಿ – ಸ್ನಾಕ್ಸ್ – ಉಪಹಾರ ಪೂರೈಕೆಯ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವ ಈ ಬೃಹತ್ ಹಗರಣವನ್ನು CBI ಅಥವಾ CID ತನಿಖೆಗೆ ವಹಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಎನ್,ಆರ್ ರಮೇಶ್ ಆಗ್ರಹಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ

    April 29, 2026

    ತುಮಕೂರು: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಪುನರ್ ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸುವ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಕರ್ನಾಟಕ…

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.