nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    ಕೊರಟಗೆರೆ November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    By adminNovember 22, 2025No Comments2 Mins Read
    koratagere
    ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟ ಶ್ರೀ ಮಠದಲ್ಲಿ ಆಯೋಜಿಸಲಾಗಿದ್ದ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮೀಜಿ ಸೇರಿದಂತೆ ತಾಲ್ಲೂಕಿನ ಪತ್ರಕರ್ತರು ಹಾಜರಿದ್ದರು.

    ಕೊರಟಗೆರೆ : ರಾಜ್ಯದಲ್ಲಿ ಮತ್ತು ಸ್ಥಳೀಯವಾದ ಸಮಸ್ಯೆಗಳು ಬಗ್ಗೆ ಹಾಗೂ ಸಮಾಜದಲ್ಲಿ ಏನಾಗುತ್ತಿದೆ ಎಂದು ಪತ್ರಕರ್ತರ ಸುದ್ದಿಯಿಂದ ತಿಳಿದುಕೊಳ್ಳುವ ಸರ್ಕಾರ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಆಲಿಸದೆ ಇರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಸಿದ್ದರಬೆಟ್ಟ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿ ವಿಷಾದ ವ್ಯಕ್ತ ಪಡಿಸಿದರು.

    ಅವರು ಕೊರಟಗೆರೆ ತಾಲ್ಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರ ಸಿದ್ದರಬೆಟ್ಟ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದಲ್ಲಿ ಆಯೋಜಿಸಲಾಗಿದ್ದ, ತಾಲ್ಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪತ್ರಕರ್ತರಿಗೆ ಹಾಗೂ ಇತ್ತೀಚೆಗೆ ನಡೆದ ಜಿಲ್ಲಾ ಪತ್ರಕರ್ತ ಸಂಘದ ಚುನಾವಣೆಯಲ್ಲಿ ವಿಜೇತರಾದ ಪಧಾದಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಈ ಮೂರು ರಂಗಗಳಿಗೆ ವಿಶೇಷ ಸ್ಥಾನಮಾನ ನೀಡಿರುವ ಸರ್ಕಾರ ಹೆಸರಿಗಷ್ಟೇ ಸೀಮಿತವಾದ ನಾಲ್ಕನೇ ಅಂಗವಾದ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಬಹಳ ಸಮಸ್ಯೆಗಳಾಗುತ್ತಿದ್ದು, ಅದರಲ್ಲೂ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಭದ್ರತೆ ಇಲ್ಲದಂತಾಗಿದೆ ಹಾಗೂ ಪತ್ರಕರ್ತರು ಜೀವನ ನಿರ್ವಹಣೆಯು ಕಷ್ಟಕರವಾಗಿದ್ದು, ಸರ್ಕಾರ ಪತ್ರಕರ್ತರ ಸಮಸ್ಯೆಗಳನ್ನು ಅರಿತು ಪತ್ರಕರ್ತರಿಗೆ ಆರೋಗ್ಯ ವಿಮೆಯೊಂದಿಗೆ ಮಾಸಿಕ ಗೌರವಧನ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ರಾಜಕೀಯ ಪ್ರತಿನಿಧಿಗಳು ಸರ್ಕಾರ ದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.


    Provided by
    Provided by

    ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ಸರ್ಕಾರ ರಾಜ್ಯದ ಮೂರುವರೆ ಕೋಟಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಕರ್ನಾಟಕದಲ್ಲಿ ಎಲ್ಲಿಬೇಕಾದರು ಉಚಿತವಾಗಿ ಸಂಚರಿಸಬಹುದು ಆದರೆ ರಾಜ್ಯದಲ್ಲಿ ಕೇವಲ 8 ರಿಂದ 9 ಸಾವಿರ ಇರುವ ಪತ್ರಕರ್ತರಿಗೆ ನೂರೆಂಟು ಕಾನೂನುಗಳನ್ನು ಹಾಕಿ ಅದು ಕೇವಲ ಜಿಲ್ಲಾ ವ್ಯಾಪ್ತಿಯಲ್ಲಿ ಮಾತ್ರ ಓಡಾಡಲು ಅದೇಶ ಮಾಡಿದೆ ಆದರೆ, ಇದರಿಂದ ಪತ್ರಕರ್ತರಿಗೆ ಯಾವುದೇ ಪ್ರಯೋಜನವು ಆಗುತ್ತಿಲ್ಲಾ ಸರ್ಕಾರ ಈಗಲಾದರೂ ಈ ತಾರತಮ್ಯ ತೆಗೆದು ಎಲ್ಲಾ ಪತ್ರಕರ್ತರನ್ನು ಒಂದೇ ಎಂದು ಭಾವಿಸಿ ಸರ್ಕಾರ ಮುಕ್ತವಾಗಿ ಸಹಾಯ ಹಸ್ತ ನೀಡಬೇಕಾಗಿದೆ ಎಂದು ತಿಳಿಸಿದ ಅವರು ಪ್ರತಿ ವರ್ಷ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ಶ್ರೀ ಮಠದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದಿಸುತ್ತಿರುವುದು ಶ್ಲಾಘನೀಯವಾಗಿದ್ದು ಪತ್ರಕರ್ತರ ಪರವಾಗಿ ಶ್ರೀ ಗಳಿಗೆ ಕೃತಜ್ಞತೆ ಸಲ್ಲಿಸಿದರು.

    ಪತ್ರಕರ್ತ ಪದ್ಮರಾಜು ಮಾತನಾಡಿ, ಒಬ್ಬ ಪತ್ರಕರ್ತನಿಗೆ ತಮ್ಮ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಅರಿವಿದ್ದು ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಗಮನ ಹರಿಸುವಂತೆ ಕಾರ್ಯ ಮಾಡುತ್ತಿರುವ ಪತ್ರಕರ್ತರಿಗೆ ಸರ್ಕಾರ ಯಾವುದೇ ಸೌಲತ್ತುಗಳನ್ನು ನೀಡುತ್ತಿಲ್ಲಾ, ಮಾಧ್ಯಮಗಳು ಸುದ್ದಿ ಮಾಡಿದರೆ ಮಾಧ್ಯಮದವರು ಟಿ.ಆರ್.ಪಿ.ಗಾಗಿ ಸುದ್ದಿ ಮಾಡುತ್ತಿದ್ದಾರೆ ಎಂದು ದೂರುವರು ಮಾಧ್ಯಮಗಳು ಟಿ.ಆರ್.ಪಿ. ಯಿಂದಲೇ ಮಾಧ್ಯಮಗಳು ನಿಲ್ಲಬೇಕಾಗಿದೆ ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳನ್ನು ಕೊಂಡು ಓದುವ ಹವ್ಯಾಸ ಕಡಿಮೆಯಾಗಿದೆ, ಈ ರೀತಿಯಾದರೆ ಪತ್ರಿಕಾ ಮಾಧ್ಯಮ ನಡೆಯುವುದು ಹೇಗೆ ಸರ್ಕಾರ ಪತ್ರಕರ್ತರಿಗೂ ಜೀವನ ಇದೆ ಅವರಿಗೂ ಕುಟುಂಬ ಇದೆ ಎಂದು ಅರಿತು ಸರ್ಕಾರ ಪತ್ರಕರ್ತರಿಗೆ ಸವಲತ್ತು ನೀಡಬೇಕಾಗಿದೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಪತ್ರಕರ್ತರರಾದ ಯಶಸ್ಸ್ ಕೆ. ಪದ್ಮನಾಭ್, ಶಿವಾನಂದ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಮಾತನಾಡಿದರೆ, ಇದೇ ವೇದಿಕೆಯಲ್ಲಿ ತಾಲ್ಲೂಕು ಕನ್ನಡ ರಾಜ್ರೋತ್ಸವ ಪ್ರಶಸ್ತಿ ಪುರಸ್ಕೃತರಾ ಅಗ್ರಹಾರ ಸತೀಶ್, ಬಾಬುನಾಯ್ಕ, ಸಾಹಿತಿ ಹನುಮಂತು ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ವಿಜೇತರಾದ ಕೆ.ವಿ.ಪುರುಷೋತ್ತಮ್, ಯಶಸ್ಸ್ ಕೆ.ಪದ್ಮನಾಭ್ ರವರನ್ನು ಶ್ರೀ ಗಳು ಸನ್ಮಾನಿಸಿ ಗೌರವಿಸಿದರು.

    ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎನ್.ಪದ್ಮನಾಭ್, ಶಿವಾನಂದ್, ಚಿದಂಬರ್, ರಾಘವೇಂದ್ರ, ಎನ್.ಮೂರ್ತಿ, ನಾಗರಾಜು, ನವೀನ್‌ ಕುಮಾರ್, ಹರೀಶ್ ಬಾಬು, ಮಂಜುನಾಥ್, ಮಂಜುಸ್ವಾಮಿ ಎಂ ಎನ್, ವಿಜಯಶಂಕರ್,ಲಕ್ಷ್ಮೀಶ, ಲಕ್ಷ್ಮಿಕಾಂತ,ಕಾಮಣ್ಣ,ನಾಗೇಂದ್ರ, ಮುತ್ತುರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.