ತುಮಕೂರು: ಮೈಸೂರಿಗೆ ದಸರಾ ಹಬ್ಬ ಹೇಗೆ ಭೂಷಣವೋ, ಹಾಗೆಯೇ ಕಲ್ಪತರು ನಾಡಿಗೆ ಸಿದ್ದಗಂಗಾ ಮಠ ಜಾತ್ರೆ ಕೂಡ ಪ್ರಮುಖ ಹಬ್ಬವಾಗಿದೆ. ಈ ಜಾತ್ರೆಯ ಸಂದರ್ಭದಲ್ಲಿ ಮಠದಲ್ಲಿ ಭಕ್ತರಿಗೆ ವಿತರಿಸಲಾಗುವ ಪ್ರಸಾದ ಕೂಡ ವಿಶೇಷತೆಯಿಂದ ಕೂಡಿದೆ.
ಕೊರೊನಾದಿಂದ ಕಳೆಗುಂದಿದ್ದ ಜಾತ್ರೆಯನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಜಾತ್ರೆಗೆ ಆಗಮಿಸುತ್ತಿರುವ ಭಕ್ತರಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ಶಿವರಾತ್ರಿ ಅಂಗವಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ತಂಬಿಟ್ಟು ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಕಡ್ಲೆ, ಶೇಂಗಾ, ಅಕ್ಕಿ, ಎಳ್ಳು, ಕೊಬ್ಬರಿ, ಏಲಕ್ಕಿಯಂತಹ ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿಸಲಾಗಿದೆ.
ಈ ವಿಶೇಷ ಸಂದರ್ಭದಲ್ಲಿ ಮಾತನಾಡಿದ ಸಿದ್ದಗಂಗಾ ಮಠದ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಕೆ.ಎಸ್. ಉಮಾಮಹೇಶ್ , ನಮ್ಮ ಸಿದ್ದಗಂಗಾಮಠವು ಸುಮಾರು ಏಳು ಶತಮಾನವುಳ್ಳ ಮಠವಾಗಿದೆ. ಗ್ರಾಮೀಣ ಪ್ರದೇಶದವರ ಶ್ರೇಯೋಭಿವೃದ್ಧಿಗಾಗಿ ತುಡಿತ ಹೊಂದಿದ್ದ ಲಿಂಗೈಕ್ಯ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು 1964ರಲ್ಲಿ ಸಣ್ಣ ಪ್ರಮಾಣದಲ್ಲಿ ಈ ವಸ್ತು ಪ್ರದರ್ಶನವನ್ನು ಪ್ರಾರಂಭಿಸಿದರು. ಇಂದು ಹೆಮ್ಮರವಾಗಿ ಬೆಳೆದು ನಾಡಿನ ಬೃಹತ್ ಪ್ರಸಿದ್ದ ವಸ್ತು ಪ್ರದರ್ಶನವೆಂದು ಹೆಗ್ಗಳಿಕೆ ಪಡೆದುಕೊಂಡಿದೆ. ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಯ ಅಂಗವಾಗಿ ಕಳೆದ 56 ವರ್ಷಗಳಿಂದ ಪ್ರತಿವರ್ಷ ಈ ವಸ್ತು ಪ್ರದರ್ಶನವು ನಡೆಯುತ್ತಾ ಬಂದಿದ್ದು, 2022 ರ ಈ ವರ್ಷದ ವಸ್ತು ಪ್ರದರ್ಶನವು 58ನೇ ಪ್ರದರ್ಶನವಾಗಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಕೈಗಾರಿಕಾ, ಕೃಷಿ, ಆರೋಗ್ಯ, ತೋಟಗಾರಿಕೆ, ಅರಣ್ಯ, ರೇಷ್ಮೆ, ನೀರಾವರಿ, ಶಿಕ್ಷಣ, ಪಶುಪಾಲನೆ, ಮೀನುಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಉಂಟಾಗಿರುವ ವೈಜ್ಞಾನಿಕ ಬದಲಾವಣೆಗಳನ್ನು ವಸ್ತು ಪ್ರದರ್ಶನಕ್ಕೆ ಭೇಟಿ ನೀಡುವ ಜನರಿಗೆ ಮನವರಿಕೆ ಮಾಡಿಕೊಡುವ ವಸ್ತು ಪ್ರದರ್ಶನ ಉದ್ದೇಶವಾಗಿದೆ. ರಾಜ್ಯ ಸರಕಾರಗಳ ಇಲಾಖೆಗಳಲ್ಲದೇ ಕೇಂದ್ರ ಸರಕಾರದ ಸ್ವಾಮ್ಯಕ್ಕೆ ಒಳಪಟ್ಟ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂತಾದ ಸಂಸ್ಥೆಗಳೂ ಸಹ ಮಳಿಗೆಗಳನ್ನು ತೆರೆದು ತಮ್ಮಲ್ಲಿರುವ ಯೋಜನೆಗಳು ಹಾಗೂ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಖಾಸಗಿ ಸಂಘ- ಸಂಸ್ಥೆಗಳವರೂ ಸಹ ವಸ್ತು ಪ್ರದರ್ಶನದಲ್ಲಿ ನಿತ್ಯ ಬಳಕೆಯ ವಸ್ತುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ವಸ್ತು ಪ್ರದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡುವವರಿಗೆ ಪಾರಿತೋಷಕ ಹಾಗೂ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ. ಪ್ರದರ್ಶನದ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಪ್ರತಿನಿತ್ಯ ಸಂಜೆ ಖ್ಯಾತ ಕಲಾವಿದರುಗಳಿಂದ ಸುಗಮ ಸಂಗೀತ, ವಚನ ಗಾಯನ, ಭರತನಾಟ್ಯ, ಯಕ್ಷಗಾನ, ಮಕ್ಕಳಿಂದ ಸಾಂಸ್ಕ್ರೃತಿಕ ಸಂಜೆ , ನಾಟಕ ಹಾಗೂ ಮುಂತಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರವೇಶದ್ವಾರ ಸಂಚಾಲಕರಾದ ಕೆ ಬಸವಯ್ಯ ಮಾತನಾಡಿ, ನಾನು ೧೯೬೮ ರಲ್ಲಿ ನಾನು ಇಲ್ಲಿಗೆ ಬಡವಿದ್ಯಾರ್ಥಿಯಾಗಿ ಬಂದಿದ್ದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಕೈಗಾರಿಕಾ, ಕೃಷಿ, ಆರೋಗ್ಯ, ತೋಟಗಾರಿಕೆ, ಅರಣ್ಯ, ರೇಷ್ಮೆ, ನೀರಾವರಿ, ಶಿಕ್ಷಣ, ಪಶುಪಾಲನೆ, ಮೀನುಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಉಂಟಾಗಿರುವ ವೈಜ್ಞಾನಿಕ ಬದಲಾವಣೆಗಳನ್ನು ವಸ್ತು ಪ್ರದರ್ಶನಕ್ಕೆ ಜಾತ್ರೆಗೆ ಭೇಟಿ ನೀಡುವ ಜನರಿಗೆ ವಸತಿಗಳಾದ ನೀರು, ಆಹಾರ, ಎಲ್ಲವನ್ನೂ ಸಹ ರೈತ ಕುಟುಂಬಗಳಿಗೆ ಮಾತ್ರವಲ್ಲದೆ ಪ್ರತಿ ಕುಟುಂಬಗಳಿಗೂ ಸಹ ನೀಡುವುದಾಗಿ ತಿಳಿಸಿದರು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ-ತುಮಕೂರು ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB