nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    February 17, 2026

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026
    Facebook Twitter Instagram
    ಟ್ರೆಂಡಿಂಗ್
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    • ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಂಪಲ್ ನಾಯಕ ಕೋಟ ಶ್ರೀನಿವಾಸ ಪೂಜಾರಿ 3.5 ಕೋಟಿ ಆಸ್ತಿ ಒಡೆಯ!!
    ರಾಜ್ಯ ಸುದ್ದಿ April 5, 2024

    ಸಿಂಪಲ್ ನಾಯಕ ಕೋಟ ಶ್ರೀನಿವಾಸ ಪೂಜಾರಿ 3.5 ಕೋಟಿ ಆಸ್ತಿ ಒಡೆಯ!!

    By adminApril 5, 2024No Comments2 Mins Read
    Shreenivas poojari

    ಜನ ನಾಯಕ, ಸರಳ-ಸಜ್ಜನಿಕೆಯ ಸಾಮಾನ್ಯ ನಾಯಕ ಎಂದೇ ಖ್ಯಾತಿ ಪಡೆದಿರುವ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮಾರ್ಚ್ 3ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ ಅವರ ಕುಟುಂಬದ ಆಸ್ತಿ ವಿವರವನ್ನೂ ಸಲ್ಲಿಸಿದ್ದಾರೆ.

    ತಾನು ಬಡ ನಾಯಕನಾಗಿದ್ದೇ ಜನ ಸೇವೆ ಮಾಡಿಕೊಂಡಿರುತ್ತೇನೆ ಎಂದು ಹೇಳುವ ಕೋಟ ಶ್ರೀನಿವಾಸ ಪೂಜಾರಿ ಅವರು ಎಷ್ಟು ಆಸ್ತಿ ಹೊಂದಿದ್ದಾರೆ, ಅವರು ಅಷ್ಟೊಂದು ಸಿಂಪಲ್ ಆಗಿರೋದ್ರಿಂದ ಎಷ್ಟು ಹಣ ಅವರ ಬಳಿ ಇರಬಹುದು ಎಂದು ಹಲವರಿಗೆ ಕುತೂಹಲ. ಇದೀಗ ನಾಮಪತ್ರ ಸಲ್ಲಿಸುವ ವೇಳೆ ಕೋಟಾ ಅವರೇ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದು, ಅವರು ಸಲ್ಲಿಸಿದ ಆಸ್ತಿ ವಿವರ ಪ್ರಕಾರ ಕೋಟ ಕುಟುಂಬ ಕೋಟ್ಯಧಿಪತಿ ಅನ್ನೋದು ಗೊತ್ತಾಗಿದೆ.


    Provided by
    Provided by

    ಕೋಟ ಶ್ರೀನಿವಾಸ ಪೂಜಾರಿ, ಅವರ ಪತ್ನಿ ಸಹನಾ ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ಪ್ರಕಾರ ಕೋಟ ಶ್ರೀನಿವಾಸ ಪೂಜಾರಿ ಕುಟುಂಬ 3.5 ಕೋಟಿ ಒಡೆಯ ಎಂದು ತಿಳಿದು ಬಂದಿದೆ. ಸಿಂಪಲ್ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಬಳಿ ಕೋಟಿ ಆಸ್ತಿ ಇರುವುದು ಇದೀಗ ಎಲ್ಲರಿಗೂ ತಿಳಿದಿದ್ದು, ಹಲವರ ಕುತೂಹಲ ತಣಿದಿದೆ.

    ಅಂದಹಾಗೆ ಅಫಿಡವಿಟ್ ನಲ್ಲಿರುವ ಮಾಹಿತಿ ಪ್ರಕಾರ ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ಹಾಗೂ ಚರಾಸ್ತಿಯ ಒಟ್ಟು ಮೌಲ್ಯ 3,58,91,020 ರೂಪಾಯಿ ಆಗಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಪತ್ನಿ ಶಾಂತಾ, ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದು ಕೋಟ ಶ್ರೀನಿವಾಸ ಪೂಜಾರಿ ಅವರ ಕೈಯಲ್ಲಿ 90 ಸಾವಿರ ನಗದು ಹಣ ಇದ್ದು, ಹೆಂಡತಿ ಕೈಯಲ್ಲಿ 20 ಸಾವಿರ ಹಣ ಇದೆ. ಜೊತೆಗೆ ಕೋಟ ಅವರ ಕುಟುಂಬ ಒಟ್ಟು 1,04,44,645 ರೂಪಾಯಿ ಸಾಲ ಹೊಂದಿದೆ.

    ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ವಿವರ ಹೀಗಿದೆ:

    * ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿ 79,95,082 ಎಪ್ಪತ್ತೊಂಬತ್ತು ಲಕ್ಷದ ತೊಂಬತ್ತೈದು ಸಾವಿರದ ಎಂಬತ್ತೆರಡು ರೂಪಾಯಿ

    * ಪತ್ನಿ ಸಹನಾ ಅವರ ಬಳಿ ಇರುವ ಸ್ಥಿರಾಸ್ತಿ 1,62,79,027 ( ಒಂದು ಕೋಟಿಯ ಅರುವತ್ತೆರಡು ಲಕ್ಷದ ಎಪ್ಪತ್ತೋಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ)

    * ಮಗಳು ಸ್ವಾತಿ ಅವರ ಬಳಿ ಇರುವ ಸ್ಥಿರಾಸ್ತಿ 3,70,00 (ಮೂರು ಲಕ್ಷದ ಎಪ್ಪತ್ತು ಸಾವಿರ) ಮಗ ಶಶಿಧರ್ ಬಳಿ ಇರುವ ಸ್ಥಿರಾಸ್ತಿ 47,59,935 (ನಲುವತ್ತೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ)

    * ಮಗಳು ಶೃತಿ ಬಳಿ ಇರುವ ಸ್ಥಿರಾಸ್ಥಿ 66,466 (ಅರುವತ್ತಾರು ಸಾವಿರದ ನಾನೂರ ಅರುವತ್ತಾರು) ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸ್ಥಿರಾಸ್ತಿ ಮೌಲ್ಯ 2,94,70,510 (ಎರಡು ಕೋಟಿ ತೊಂಬತ್ತನಾಲ್ಕು ಲಕ್ಷದ ಎಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿ) ಹೀಗಾಗಿ ಸಿಂಪಲ್ ಮ್ಯಾನ್ ಕೋಟ ಶ್ರೀನಿವಾಸ ಪೂಜಾರಿಯವರ ಕುಟುಂಬ ಕೋಟ್ಯಧಿಪತಿ ಅನ್ನೋದು ಅವರು ಸಲ್ಲಿಸಿದ ಆಸ್ತಿ ವಿವರದಿಂದ ಬಹಿರಂಗವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    February 17, 2026

    ನಮ್ಮ ತುಮಕೂರು, ಡಿಜಿಟಲ್ ಡೆಸ್ಕ್: ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುವ ಪೆರು ದೇಶದ ‘ಕುಸ್ಕೋ’ (Cusco) ಪಟ್ಟಣದಲ್ಲಿರುವ ಮಾರುಕಟ್ಟೆಯು ತನ್ನ ವಿಭಿನ್ನ…

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.