ಕಾಡೆಮ್ಮೆಯನ್ನು ಶೂಟ್ ಮಾಡಿ ಕೊಂದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಮಾಂಸಕ್ಕಾಗಿ ಶೂಟ್ ಮಾಡಿದ್ದು,ಅದನ್ನು ತಿನ್ನುತ್ತಿರುವ ವೇಳೆಯೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಐವರು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.
ಹೊಸೂರು ಎಸ್ಟೇಟ್ನ ಉಮೇಶ್, ರವಿ ಬಂಧಿತ ಆರೋಪಿಗಳು. ಸಕಲೇಶಪುರ ತಾಲೂಕಿನ ಹೊಸೂರು ಎಸ್ಟೇಟ್ನಲ್ಲಿ ಘಟನೆ ನಡೆದಿತ್ತು. ಹೊಸೂರು ಎಸ್ಟೇಟ್ ಸಮೀಪ ಮಾಂಸಕ್ಕಾಗಿ ಬಂದೂಕಿನಿಂದ ಕಾಡೆಮ್ಮೆ ಮೇಲೆ ಉಮೇಶ್ ಹಾಗೂ ರವಿ ಶೂಟ್ ಮಾಡಿದ್ದರು.
ನಂತರ ಕಾಡೆಮ್ಮೆಯನ್ನು ಕತ್ತರಿಸಿ ಮಾಂಸ ಸೇವನೆ ಮಾಡುವಾಗ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಶಿಲ್ಪಾ ನೇತೃತ್ವದ ತಂಡ ದಾಳಿ ಮಾಡಿದೆ. ಕಾಡೆಮ್ಮೆಯ ಸುಮಾರು 10 ಕೆಜಿ ಮಾಂಸ ವಶವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮಧು, ಆಕಾಶ್, ಅಜೀಜ್, ಸೋಮಣ್ಣ, ಇಕ್ಕೀಲ್ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA