nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    ತಿಪಟೂರು June 29, 2026

    SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ

    By adminJune 29, 2026No Comments2 Mins Read

    ತಿಪಟೂರು: ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಇಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಂತರ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ ಎದುರಾಗಿದೆ ಎಂದು ಜಾಗೃತ ಕರ್ನಾಟಕದ ಡಾ. ಹೆಚ್.ವಿ. ವಾಸು ಆತಂಕ ವ್ಯಕ್ತಪಡಿಸಿದರು.

    ಗಾಂಧಿ ನಗರದ ಮಸ್ಜಿದ್—ಎ–ಮಹಾಜರೀನ್, ಜನಸ್ಪಂದನ ಟ್ರಸ್ಟ್ ಹಾಗೂ ಸೌಹಾರ್ದ ತಿಪಟೂರು ಸಹಯೋಗದಲ್ಲಿ ಎಸ್‌ ಇಆರ್ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೂನ್ 30 ರಿಂದ ಮನೆ ಮನೆಗೆ ಅಧಿಕಾರಿಗಳು ತೆರಳಿ, ಎಸ್‌ ಇಆರ್ ಅರ್ಜಿಗಳನ್ನು ವಿತರಿಸಲಿದ್ದಾರೆ. ಈ ಹಿಂದೆ ಎಷ್ಟು ಬಾರಿ ಮತ ಚಲಾಯಿಸಿದ್ದವರೂ ಸೇರಿದಂತೆ, ಎಲ್ಲರೂ ಮತ್ತೆ ದಾಖಲೆಗಳನ್ನು ಸಲ್ಲಿಸಿ, ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದಲ್ಲಿ ಮತದಾನದ ಹಕ್ಕು ದೀರ್ಘ ಹೋರಾಟದ ಫಲವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಎಲ್ಲಾ ಸಮುದಾಯಗಳ ತ್ಯಾಗದ ಪ್ರತಿಫಲವಾಗಿ ಸಂವಿಧಾನ ಜಾರಿಗೆ ಬಂದ ಮೊದಲ ದಿನದಿಂದಲೇ ಸಾರ್ವತ್ರಿಕ ಮತದಾನದ ಹಕ್ಕು ನೀಡಲಾಗಿದೆ. ಮಹಿಳೆಯರು, ದಲಿತರು, ಆದಿವಾಸಿಗಳು, ಅಲೆಮಾರಿ ಸಮುದಾಯಗಳು ಹಾಗೂ ಅಲ್ಪಸಂಖ್ಯಾತರು ದಾಖಲೆಗಳ ತಾಂತ್ರಿಕ ಸಮಸ್ಯೆಯಿಂದ ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು ಎಂದರು.

    ಮೃತಪಟ್ಟವರ ಹಾಗೂ ವಿದೇಶಿ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದು ಅಗತ್ಯವೇ ಸರಿ. ಆದರೆ ಅನರ್ಹರನ್ನು ಹೊರಗಿಡುವ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ದೇಶದ ಸುಮಾರು 14 ರಾಜ್ಯಗಳಲ್ಲಿ ಈಗಾಗಲೇ ಆರು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಅವರಲ್ಲಿ ಬಹುಪಾಲು ಜೀವಂತ ನಾಗರಿಕರೇ ಆಗಿದ್ದಾರೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

    | ಡಾ.ಹೆಚ್.ವಿ.ವಾಸು, ಜಾಗೃತ ಕರ್ನಾಟಕ.

    ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ (ಟೂಡಾ) ಮಾತನಾಡಿ, ಮತದಾನದ ಹಕ್ಕಿನ ಸಂರಕ್ಷಣೆಗಾಗಿ ಬೂತ್ ಮಟ್ಟದ ಏಜೆಂಟ್‌ಗಳು ಮಹತ್ವದ ಪಾತ್ರ ವಹಿಸಬೇಕಿದ್ದು, ಮೊದಲು ತಮ್ಮ ಮನೆಯವರು ಹಾಗೂ ನೆರೆಹೊರೆಯವರ ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಪರಿಶೀಲಿಸಿ, ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಸರ್ಕಾರ ಅಥವಾ ಚುನಾವಣಾ ಆಯೋಗವೇ ಎಲ್ಲವನ್ನೂ ಮಾಡುತ್ತದೆ ಎಂದು ಕಾಯದೆ ನಾಗರಿಕರು ಸ್ವತಃ ಎಚ್ಚರಿಕೆ ವಹಿಸಬೇಕಾಗಿದೆ. ಬೆರಳೆಣಿಕೆಯ ಅನರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದ ಕೋಟ್ಯಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದನ್ನು ಈ ದೇಶದ ಕಾನೂನು ಒಪ್ಪುವುದಿಲ್ಲ.

    ಅರಿವು ಕಾರ್ಯಕ್ರಮದಲ್ಲಿ ಜಾಗೃತ ಕರ್ನಾಟಕದ ಆದಂ ಖಾನ್ ಎಸ್‌ಇಆರ್ ಪ್ರಕ್ರಿಯೆ ಕುರಿತು, ಪ್ರೊಜೆಕ್ಟರ್ ಮೂಲಕ ಪರದೆಯ ಮೇಲೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿಐಟಿಯು ಮುಖಂಡ ಎನ್.ಕೆ.ಸುಬ್ರಹ್ಮಣ್ಯ, ಹಜ್ರತ್ ಫಾರೂಕ್, ಜಲೀಲ್, ಸೌಹಾರ್ದದ ಅಲ್ಲಾಬಕಾಶ್, ಬೆಲೆ ಕಾವಲು ಸಮಿತಿಯ ಶ್ರೀಕಾಂತ್ ಕೆಳಹಟ್ಟಿ, ನಗರಸಭೆ ಮಾಜಿ ಸದಸ್ಯ ಮಹಮದ್ ಗೌಸ್ ಮತ್ತು ಸೈಯದ್ ಸಾದತ್ ಸೇರಿದಂತೆ ಮಸೀದಿಯ ಮುತವಲ್ಲಿಗಳು, ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.