nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್‌ ಗೆ ಸ್ಮಾರ್ಟ್ ಸಿಟೀಸ್ ಇಂಡಿಯಾ ಪ್ರಶಸ್ತಿ
    ತುಮಕೂರು March 22, 2025

    ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್‌ ಗೆ ಸ್ಮಾರ್ಟ್ ಸಿಟೀಸ್ ಇಂಡಿಯಾ ಪ್ರಶಸ್ತಿ

    By adminMarch 22, 2025No Comments2 Mins Read
    smart cities

    ತುಮಕೂರು:  ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ನ ಪ್ರಮುಖ ಯೋಜನೆಯಾದ ಸಮಗ್ರ ನಗರ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್  CMCCC–Integrated City Management Command and Control Centreಗೆ ಪ್ರಥಮ ಪ್ರಶಸ್ತಿ ಲಭಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.

    ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಮಿಷನ್ ಯೋಜನೆಯಡಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗಿದೆ.


    Provided by
    Provided by

    ಕೇಂದ್ರದ ನಗರಾಭಿವೃದ್ಧಿ ಸಚಿವಾಲಯದಿಂದ ಆಯೋಜಿತ ಮಾರ್ಚ್ 19 ರಿಂದ 21ರವದರೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ದೇಶದ 100 ಸ್ಮಾರ್ಟ್ ಸಿಟಿ ಭಾಗವಹಿಸಿದ್ದ 10ನೇ ಸ್ಮಾರ್ಟ್ ಸಿಟೀಸ್ ಇಂಡಿಯಾ-2025 ಮತ್ತು 32ನೇ ಕನ್ವರ್‌ ಜೆನ್ಸ್ ಇಂಡಿಯಾ 2025 ಎಕ್ಸ್ಪೋ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

    ತುಮಕೂರು ನಗರವು ಕರ್ನಾಟಕದ ಸ್ಮಾರ್ಟ್ ಸಿಟಿಗಳಲ್ಲಿ ಐಸಿಎಂಸಿಸಿಯನ್ನು ಸ್ಥಾಪಿಸಿ ಕಾರ್ಯಾರಂಭ ಮಾಡಿದ ಪ್ರಥಮ ಸ್ಮಾರ್ಟ್ ನಗರವಾಗಿದ್ದು, ಇ–ಆಡಳಿತದ ಗುರಿಯೊಂದಿಗೆ ನಗರದ ಕಾರ್ಯಾಚರಣೆಗಳು, ಸಂಚಾರ ನಿಯಮ ಉಲ್ಲಂಘನೆಗಾಗಿ ಇ–ಚಲನಿಂಗ್ ವ್ಯವಸ್ಥೆ, ಘನ ತ್ಯಾಜ್ಯ ಸಂಗ್ರಹಣಾ ವಾಹನಗಳ ಸಮರ್ಥ ಸ್ಥಳ ಟ್ರ್ಯಾಕಿಂಗ್ ವ್ಯವಸ್ಥೆಯಿಂದ ಪರಿಣಾಮಕಾರಿ ಕಸ ಸಂಗ್ರಹಣೆ, ದಿನದ 24 ಗಂಟೆಗಳಲ್ಲಿ ನಗರದ ನಿಗಾವಣೆಗಾಗಿ ಮೊಬೈಲ್ ಕಣ್ಗಾವಲು ವಾಹನಗಳು(MSVಗಳು), ಸಾರ್ವಜನಿಕ ಪ್ರಕಟಣೆಗಳು/ಎಚ್ಚರಿಕೆಗಳಿಗಾಗಿ ಸಾರ್ವಜನಿಕ ವಿಳಾಸ ವ್ಯವಸ್ಥೆ(PAS) ಜೊತೆಗೆ ಡ್ಯಾಶ್ ಬೋರ್ಡ್ ಕ್ಯಾಮೆರಾಗಳು ಮತ್ತು Pan Tilt Zoom (PTZ) ಕ್ಯಾಮೆರಾಗಳು ತ್ವರಿತ ಸೇವೆಗಳನ್ನು ಹತೋಟಿಗೆ ತಂದಿವೆ.

    ಐಸಿಎಂಸಿಸಿ ಕೇಂದ್ರವು ತುರ್ತು ಪ್ರತಿಕ್ರಿಯೆ ವ್ಯವಸ್ಥೆ, ಚುರುಕು ಸಂದೇಶ ರವಾನೆ, ವ್ಯತ್ಯಯಗೊಳಿಸಬಹುದಾದ ಸಂದೇಶ ರವಾನೆ ವ್ಯವಸ್ಥೆ, ಸಾರ್ವಜನಿಕ ಪ್ರಕಟಣೆಗಳು, ಪರಿಸರ ಮೇಲ್ವಿಚಾರಣಾ ವ್ಯವಸ್ಥೆಯನ್ನು ತುಮಕೂರು ಒನ್ ವ್ಯವಸ್ಥೆಯೊಂದಿಗೆ ಪೂರೈಸುತ್ತದೆ. ಅಲ್ಲದೆ ನಗರದ ಆಡಳಿತ ಕಚೇರಿ/ಪ್ರಾಧಿಕಾರಗಳಿಗೆ ಅವುಗಳ ದೈನಂದಿನ ಕಾರ್ಯಚಟುವಟಿಕೆಗಳ ಸಮಯದಲ್ಲಿ ಹಾಗೂ ತುರ್ತು ಸಂದರ್ಭಗಳಲ್ಲಿ ಬೆಂಬಲ ವ್ಯವಸ್ಥೆಯಾಗಿ ಈ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಐಸಿಎಂಸಿಸಿ ವ್ಯವಸ್ಥೆಯಡಿ ವಿಶೇಷವಾಗಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಗರದಾದ್ಯಂತ ನಿಗಾವಹಿಸಲಾಗುತ್ತಿದೆ.

    ಐಸಿಎಂಸಿಸಿ ವ್ಯವಸ್ಥೆಯಿಂದ ಇತ್ತೀಚೆಗೆ ನಗರದ ಪ್ರಮುಖ ವೃತ್ತದಲ್ಲಿ ರಾತ್ರಿ ವೇಳೆಯಲ್ಲಿ ಬಸ್‌ಗಾಗಿ ಕಾಯ್ದು ಕುಳಿತಿದ್ದ ದಂಪತಿಗಳೊಂದಿಗೆ ಮತ್ತೊಬ್ಬ ವ್ಯಕ್ತಿಯನ್ನು ಅನುಚಿತವಾಗಿ ವರ್ತಿಸುತ್ತಿರುವುದನ್ನು ಸಿಸಿಟಿವಿ ಮೂಲಕ ಗಮನಿಸಿದ ಕೂಡಲೇ ಅವರಿಗೆ ಸಾರ್ವಜನಿಕ ಪ್ರಕಟಣೆ ಮೂಲಕ ಯಾವುದೇ ತುರ್ತು ಸಂದರ್ಭ ಎದುರಾಗಿದ್ದಲ್ಲಿ ಎಸ್‌ ಓಎಸ್ ಬಟನ್ ಒತ್ತುವಂತೆ ಸೂಚನೆ ನೀಡಿ ಅವರಿಗೆ ನಗರವು ಸುರಕ್ಷಿತವಾಗಿದೆ ಎಂದು ಮನದಟ್ಟು ಮಾಡಿದ ಘಟನೆಯನ್ನು ಇಲ್ಲಿ ಸ್ಮರಿಸಬಹುದಾಗಿದೆ.

    ಇತ್ತೀಚೆಗೆ ನಗರದ ಶಿರಾಗೇಟ್ ರಸ್ತೆಯಲ್ಲಿ ಅನಾರೋಗ್ಯ ಪೀಡಿತ ದಾರಿಹೋಕರೊಬ್ಬರು ಅಸ್ವಸ್ಥರಾಗಿ ನರಳಾಡುತ್ತಿರುವುದನ್ನು ಸಿಸಿಟಿವಿ ಸರ್ವೆಲೆನ್ಸ್ ಮೂಲಕ ಗಮನಿಸಿದ ಐಸಿಎಂಸಿಸಿ ಸಿಬ್ಬಂದಿ ಆರೋಗ್ಯ ಇಲಾಖೆಯ 108 ಆಂಬುಲೆನ್ಸ್ಗೆ ಮಾಹಿತಿ ನೀಡಿ ಕೂಡಲೇ ಸ್ಥಳಕ್ಕೆ ಕಳುಹಿಸುವ ಮೂಲಕ ಅಗತ್ಯ ತುರ್ತು ಚಿಕಿತ್ಸೆಗೆ ನೆರವಾಗಿರುವುದು, ಮರಳೂರು ದಿಣ್ಣೆಯಲ್ಲಿ ಕೌಟುಂಬಿಕ ಕಲಹದಿಂದ ಗೃಹಿಣಿಯೊಬ್ಬರು ಎಸ್‌ಓಎಸ್ ಪ್ಯಾನಿಕ್ ಬಟನ್ ಮೂಲಕ ಐಸಿಎಂಸಿಸಿಯನ್ನು ಸಂಪರ್ಕಿಸಿ ಸೂಕ್ತ ರಕ್ಷಣೆ ಕೋರಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಪೋಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ಸುರಕ್ಷತೆಗೆ ಧಾವಿಸಿರುವುದನ್ನು ಉದಾಹರಿಸಬಹುದು.

    ಪ್ರಶಸ್ತಿ ಸ್ವೀಕಾರ:

    ನಗರದಲ್ಲಿ ತನ್ನ ಕಾರ್ಯಾಚರಣೆಗಳೊಂದಿಗೆ ವಾಸ್ತವಿಕವಾಗಿ ನಗರವನ್ನು ‘ಸ್ಮಾರ್ಟ್” ಆಗುವಂತೆ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಿರುವ ನಗರದ ಸುರಕ್ಷತೆ ಮತ್ತು ಭದ್ರತೆಗೆ ವಿವಿಧ ರೀತಿಯಲ್ಲಿ ಕಾರ್ಯಾಚರಣೆಗೊಳಿಸುತ್ತಿರುವ ಐಸಿಎಂಸಿಸಿಗೆ ಪ್ರಥಮ ಪ್ರಶಸ್ತಿ ಲಭಿಸಿದ್ದು ಮಾರ್ಚ್ 21ರಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್‌ ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ. ಪ್ರಶಸ್ತಿ ಸ್ವೀಕರಿಸಿದ್ದಾರೆ.

    ಪ್ರಶಸ್ತಿ ಪಡೆದ ಬಿ.ವಿ.ಅಶ್ವಿಜ ಅವರು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಅಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು, ನಗರದ ನಾಗರಿಕರು, ಸಿಬ್ಬಂದಿ ವರ್ಗದವರಿಗೆ ಮತ್ತು ನಗರದ ಸುವ್ಯವಸ್ಥೆಗೆ ಸಹಕರಿಸುತ್ತಿರುವ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

    January 9, 2026

    ಶಬರಿಮಲೆ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: 7 ವರ್ಷದ ಮಗು ಸೇರಿ ನಾಲ್ವರು ದುರ್ಮರಣ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ನಮ್ಮ ಜೀವನದಲ್ಲಿ ನಾನಾ ರೀತಿಯ ವ್ಯಕ್ತಿಗಳು ಎದುರಾಗುತ್ತಾರೆ. ಕೆಲವರು ಸೌಮ್ಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ನಮ್ಮ ತಾಳ್ಮೆಯನ್ನು ಪರೀಕ್ಷಿಸುವಂತಿರುತ್ತಾರೆ. ಕಚೇರಿಯಲ್ಲಿ…

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.