ತುಮಕೂರು: ಕೇಂದ್ರ ಸರ್ಕಾರದ 290 ಕೋಟಿ ಹಾಗೂ ರಾಜ್ಯ ಸರ್ಕಾರದ 297 ಕೋಟಿ ರೂ. ಅನುದಾನದಲ್ಲಿ ನಗರದಲ್ಲಿ ಅನುಷ್ಠಾನಗೊಂಡಿರುವ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಮುಂದಿನ ದಿನ ಗಳಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಮಾಜಿ ಶಾಸಕ ಡಾ.ಎಸ್. ರಫೀಕ್ ಅಹಮದ್ ಎಚ್ಚರಿಕೆ ನೀಡಿದರು.
ನಗರದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದ ಇಲಾಖೆಯವರಿಗೆ ಪತ್ರ ಬರೆದು ಮಾಹಿತಿ ಕೇಳಿದರೆ ಪೂರ್ಣ ಮಾಹಿತಿಯನ್ನು ಕೊಟ್ಟಿಲ್ಲ. ಬಂದಿರುವ ಅನುದಾನ ಖರ್ಚಾಗಿರುವುದೆಷ್ಟು, ಕಾಮ ಗಾರಿಗಳ ಪ್ರಗತಿಗೆ ಸಂಬಂಧಿ ಸಿದಂತೆ ಅಪೂರ್ಣ ಮಾಹಿತಿ ನೀಡಿದ್ದು, ಇದರ ವಿರುದ್ಧ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಗ್ರಂಥಾಲಯ, ಕ್ರೀಡಾಂಗಣ, ಟ್ರಾಮಸೆಂಟರ್ ಇತ್ಯಾದಿ ಕಾಮಗಾರಿಗಳ ಜೊತೆಗೆ ಅಲ್ಲಲ್ಲಿ ಗಿಡಗಳನ್ನು ನೆಟ್ಟು ಬೆಳೆಸುತ್ತಿದ್ದು, ಈ ಎಲ್ಲ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿ ಸಿದರು.
ರಾಷ್ಟ್ರಮಟ್ಟದ ಗುತ್ತಿಗೆ ದಾರ ಕಂಪನಿಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ನೀಡಿದ್ದರೆ ಗುಣಮಟ್ಟವನ್ನು ನಿರೀಕ್ಷಿಸಬಹುದಿತ್ತು, ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿ ನೀಡಿರುವುದರಿಂದ ದುಪ್ಪಟ್ಟು ಹಣ ಖರ್ಚು ಮಾಡಿ ಕಳಪೆ ಕೆಲಸ ಮಾಡಿರುವುದು ಕಂಡು ಬರುತ್ತಿದೆ ಎಂದರು.
ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ನೀಡಿ, ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿಸಿದ ವಿವರಗಳನ್ನು ಸ್ಮಾರ್ಟ್ಸಿಟಿ ಇಲಾಖೆಯ ವೆಬ್ ಸೈಟ್ ಗೆ ಹಾಕುವ ಮೂಲಕ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದರು.
ನಗರದಲ್ಲಿ 2ನೇ ಹಂತದ ಯುಜಿಡಿ ಕಾಮಗಾರಿ, 24×7 ನಿರಂತರ ನೀರು ಸರಬರಾಜು ಯೋಜನೆ, ಮನೆಮನೆಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ ಇತ್ಯಾದಿ ಕಾಮಗಾರಿಗಳನ್ನು ಅಸಮರ್ಪಕ ರೀತಿಯಲ್ಲಿ ನಿರ್ವಹಿಸಲಾಗಿದೆ ಎಂದರು.
ಮುಖಂಡರಾದ ನಯಾಜ್ ಅಹಮದ್, ಮೆಹಬೂಬ್ ಪಾಷ, ಜೆ.ಕುಮಾರ್, ಮಹೇಶ್, ಆಟೋ ರಾಜು, ಪ್ರಭಾವತಿ ಸುಧೀಶ್ವರ್, ರ್ಹಾಬೇಗಂ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.
ವರದಿ: ಮಾರುತಿ ಪ್ರಸಾದ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB