nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಬಹಿಷ್ಕಾರ ಆರೋಪ: ಸಾಗರೆ ಗ್ರಾಮಕ್ಕೆ ತಹಶೀಲ್ದಾರ್ ಮೋಹನಕುಮಾರಿ ಭೇಟಿ
    ಜಿಲ್ಲಾ ಸುದ್ದಿ October 15, 2025

    ಸಾಮಾಜಿಕ ಬಹಿಷ್ಕಾರ ಆರೋಪ: ಸಾಗರೆ ಗ್ರಾಮಕ್ಕೆ ತಹಶೀಲ್ದಾರ್ ಮೋಹನಕುಮಾರಿ ಭೇಟಿ

    By adminOctober 15, 2025No Comments2 Mins Read
    sagara

    ಸರಗೂರು:  ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎನ್ನಲಾಗುವ ವಿಚಾರ ‘ಸಾಮಾಜಿಕ ಮಾಧ್ಯಮ’ಗಳಲ್ಲಿ ಹೊರಬಂದ ಹಿನ್ನೆಲೆಯಲ್ಲಿ ತಾಲೂಕಿನ ಸಾಗರೆ ಗ್ರಾಮಕ್ಕೆ ತಹಶೀಲ್ದಾರ್ ಮೋಹನಕುಮಾರಿ ಅವರು ಮಂಗಳವಾರ ಭೇಟಿ ನೀಡಿ, ಅಧಿಕಾರಿಗಳು, ಗ್ರಾಮಸ್ಥರೊಂದಿಗೆ ವಿಚಾರಣಾ ಸಭೆ ನಡೆಸಿದರು.

    ಬಳಿಕ ವ್ಯಕ್ತಿಯೊಬ್ಬರಿಗೆ ಹಾಕಲಾಗಿದೆ ಎನ್ನಲಾಗುವ ‘ಬಹಿಷ್ಕಾರ’ ಎಂಬ ಆರೋಪ ಸತ್ಯಕ್ಕೆ ದೂರುವಾದುದು ಎಂಬ ಅಂಶ ಬೆಳಕಿಗೆ ಬಂದಿತು.


    Provided by
    Provided by

    “ಗ್ರಾಮದಲ್ಲಿ ದೊಡ್ಡತಾಯಮ್ಮ, ಎಸ್.ಎಂ.ನಂಜೇಗೌಡ ಎಂಬವರು ವಾಸಿಸುತ್ತಿದ್ದು, ಸರ್ವೇ ನಂ. 436ರ ಸರಕಾರಿ ಖರಾಬು ಜಮೀನಿನಲ್ಲಿ ಅನಧಿಕೃತವಾಗಿ ವಾಸದ ಮನೆ ನಿರ್ಮಿಸಿಕೊಂಡಿರುವುದು ಸರ್ವೇ ಇಲಾಖೆ ನಡೆಸಲಾದ ಆಳತೆಯಲ್ಲಿ ಕಂಡು ಬಂದಿರುತ್ತದೆ. ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಜಾಗ ಬೇಕಾಗಿರುವುದರಿಂದ ಎಸ್.ಎಂ.ನಂಜೇಗೌಡ, ದೊಡ್ಡತಾಯಮ್ಮ ಅವರ ಗಮನಕ್ಕೆ ತಂದಾಗ 3 ತಿಂಗಳ ಕಾಲಾವಧಿ ನೀಡಿ ನಂತರ ಬಿಟ್ಟುಕೊಡುವುದಾಗಿ ಹೇಳಿದರು. 3 ತಿಂಗಳ ಬಳಿಕ ಮನೆ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದು, ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಯ ರಕ್ಷಣೆಗಾಗಿ ‘ಬಹಿಷ್ಕಾರ’ ಎಂಬ ಪದ ಬಳಕೆ ಮಾಡಿಕೊಂಡಿದ್ದಾರೆ” ಎಂದು ತಹಶೀಲ್ದಾರ್ ಮೋಹನಕುಮಾರಿ ಅವರಿಗೆ ಗ್ರಾಮಸ್ಥರು ದೂರಿದರು.

    ಸಭೆಯಲ್ಲಿ ವಾದಿ, ಪ್ರತಿವಾದಿಗಳ ದೂರು ಸ್ವೀಕರಿಸಿದ ತಹಶೀಲ್ದಾರ್ ಮೋಹನಕುಮಾರಿ ಅವರು, “ನಂಜೇಗೌಡ ಕುಟುಂಬಕ್ಕೆ ‘ಸಾಮಾಜಿಕ ಬಹಿಷ್ಕಾರ’ ಹಾಕಲಾಗಿದೆಯೇ ಎಂಬುದರ ಬಗ್ಗೆ ಗ್ರಾಮಸ್ಥರಲ್ಲಿ ಮಾಹಿತಿ ಕಲೆಹಾಕಿದರು. ನಂಜೇಗೌಡ ಕುಟುಂಬದ ಪರ ಸಕಾರಾತ್ಮಕ ಅಭಿಪ್ರಾಯ ಬಾರದ ಹಿನ್ನೆಲೆಯಲ್ಲಿ ‘ಸಾಮಾಜಿಕ ಬಹಿಷ್ಕಾರ’ ಎಂಬ ಆರೋಪ ಸುಳ್ಳು. ಸರಕಾರಿ ಖರಾಬು ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವುದು ಅಪರಾಧ. ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆ ರಕ್ಷಣೆಗಾಗಿ ಬಹಿಷ್ಕಾರ ಎಂಬ ಪದ ಬಳಕೆ ಮಾಡಿಕೊಳ್ಳುವುದೂ ಅಪರಾಧವೇ. ಜಮೀನು ವಿಚಾರ ಸಂಬಂಧ ಈಗಾಗಲೇ ಸರ್ವೇ ಸ್ಕೇಚ್ ಮಾಡಿಸಲಾಗಿದೆ. ಅಲ್ಲದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಈ ಕುರಿತು ಫೈಲ್ ನೀಡಲಾಗಿದ್ದು, ಸಮಗ್ರ ವರದಿ ತರಿಸಿಕೊಳ್ಳಲಾಗುವುದು. ಮನೆ ನಿರ್ಮಾಣದ ಸಂಬಂಧ ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಕ್ರಮವಹಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

    “ಬಹಿಷ್ಕಾರದ ನೆಪವೊಡ್ಡಿ ಕುಡಿಯುವ ನೀರಿಗೆ ಅಡ್ಡಿಪಡಿಸುವುದು. ಅಂಗಡಿಗಳಲ್ಲಿ ಧವಸ ಧಾನ್ಯಗಳನ್ನು ಕೊಡದಿರುವುದು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಯಾರೂ ಕೂಡ ಯಾರ ವಿರುದ್ಧವೂ ಅವಾಚ್ಯ ಶಬ್ದಗಳ ಬಳಕೆ ಸಲ್ಲದು. ಆದರೆ, ಗ್ರಾಮಸ್ಥರು ನಮಗೆ ಗೌರವ ಕೊಟ್ಟಿಲ್ಲ. ಮಾತುಕತೆ ಆಡಿಸುವುದಿಲ್ಲ ಎಂಬುದಕ್ಕೆ ಯಾರೂ ಹೊಣೆಯಲ್ಲ. ನಿಮ್ಮ ಗುಣ, ನಡೆತೆಯನ್ನು ನೋಡಿ ಅವರು ನಿಮಗೆ ಗೌರವ ಕೊಡುತ್ತಾರೆ. ಹೀಗಾಗಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನುವುದು ಸುಳ್ಳು” ಎಂದು ಅವರು ವಿವರಿಸಿದರು. ಬಳಿಕ ಗ್ರಾಮಸ್ಥರಲ್ಲಿ ಮಹಜರು ಪತ್ರ ಬರೆಯಿಸಿಕೊಳ್ಳಲಾಯಿತು.

    ಕರ್ನಾಟಕ ರಾಜ್ಯ ರೈತ ಪರ್ವ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೈ.ಎಲ್.ನವೀನ್‌ಗೌಡ, ಆರ್‌ಐಗಳಾದ ಲಕ್ಷ್ಮಣಶೆಟ್ಟಿ, ಮುಜೀಬ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ತುಮಕೂರು: ನಗರದ ದಿಬ್ಬೂರು ಸರ್ಕಲ್ ನಿಂದ ಶಿರಾ ಗೇಟ್ ಕಡೆಗೆ 80 ಅಡಿ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಬರುತ್ತಿದ್ದ ಯುವಕನನ್ನು…

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.