nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    October 7, 2025

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    • ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ
    • ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ
    • ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ
    • ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ
    • ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು
    • ಖಾಸಗಿ ಕಂಪನಿ ಉದ್ಯೋಗ ತೊರೆದು ಏಲಕ್ಕಿ ಬಾಳೆ ಬೆಳೆದು ಲಾಭ ಗಳಿಸಿದ ರೈತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು March 23, 2025

    ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminMarch 23, 2025No Comments2 Mins Read
    tumakuru

    ತುಮಕೂರು:  ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ಶನಿವಾರ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಡಿಐಪಿ(ADIP) ಯೋಜನೆಯಡಿ ಜಿಲ್ಲೆಯ ಕುಣಿಗಲ್, ಶಿರಾ, ಪಾವಗಡ ತಾಲೂಕಿನ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇಕಡಾ 5ರಷ್ಟು ವಿಶೇಷ ಚೇತನರಿದ್ದು, ಸಾಮಾನ್ಯ ಜನರಿಗಿಂತ ಹೆಚ್ಚು ಪ್ರತಿಭೆ, ಬುದ್ದಿವಂತಿಕೆ ಹೊಂದಿದ್ದಾರೆ ಎಂದು ತಿಳಿಸಿದರು.


    Provided by
    Provided by
    Provided by

    ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ. ಸ್ವಾವಲಂಬಿ ಬದುಕಿಗಾಗಿ ಅವರ ಉದ್ಯೋಗ ಕ್ಷೇತ್ರಗಳೂ ಬದಲಾಗುತ್ತಾ, ಹೊಸ ಅವಕಾಶಗಳೂ ದೊರೆಯುತ್ತಿವೆ. ಪ್ರಸ್ತುತ ದಿನಗಳಲ್ಲಿ ವಿಕಲಚೇತನರು ಆಧುನಿಕ ತಂತ್ರಜ್ಞಾನದ ಶಿಕ್ಷಣ ಪಡೆದು ಕಂಪ್ಯೂಟರ್ ಆಪರೇಟರ್, ಡೇಟಾ ಎಂಟ್ರಿ ಆಪರೇಟರ್ ನೌಕರಿ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ ವಿಕಲಚೇತನರಿಗಾಗಿ ಎಲ್ಲ ಇಲಾಖೆಗಳ ಅನುದಾನದಲ್ಲಿ ಶೇಕಡಾ 3ರಷ್ಟು ಮೀಸಲಾತಿ ನೀಡಲಾಗುತ್ತದೆ. ಈ ಅನುದಾನವನ್ನು ಬಳಸಿಕೊಂಡು ವಿಲಚೇತನರಿಗೆ ಸರ್ಕಾರಿ ಸೌಲಭ್ಯಗಳು ಸಿಗುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

    ವಿಶೇಷ ಯೋಜನೆಯಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಗುರುತಿನ ಚೀಟಿ ಹೊಂದಿರಬೇಕು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಿಶೇಷ ಶಿಬಿರಗಳನ್ನು ನಡೆಸಿ ವಿಶೇಷ ಚೇತನರಿಗೆ ಗುರುತಿನ ಚೀಟಿ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ.99ರಷ್ಟು ಯುಡಿಐಡಿ ಕಾರ್ಡುಗಳನ್ನು ನೀಡಲಾಗಿದೆ ಎಂದರು.

    ವಿವಿಧ ವಸತಿ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 10,000 ನಿವೇಶನಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ವಿಶೇಷಚೇತನರಿಗಾಗಿ ಶೇಕಡಾ 3ರಷ್ಟು ಮೀಸಲಾತಿ ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಹತೆಗನುಗುಣವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡಲು ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದರು.

    ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ವಿಕಲಚೇತನರಿಗೂ ಸಮಾನ ಅವಕಾಶಗಳು ದೊರೆಯಬೇಕು. ವಿಕಲಚೇತನರಲ್ಲಿಯೂ ಬಹಳ ಪ್ರತಿಭಾವಂತವರಿದ್ದು, ಉತ್ತೇಜನ ನೀಡುವ ಕಾರ್ಯವನ್ನು ಸರ್ಕಾರದಿಂದ ಮಾಡಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಹೆಚ್.ಎ.ಎಲ್ ಪ್ರತಿನಿಧಿ ಪ್ರಧಾನ ವ್ಯವಸ್ಥಾಪಕ ಕೃಷ್ಣಪ್ಪ, ವಿಕಲ ಚೇತನ ಕಲ್ಯಾಣಾಧಿಕಾರಿ ಚಿದಾನಂದಮೂರ್ತಿ, ಮತ್ತಿತರ ಅಧಿಕಾರಿಗಳು ಇದ್ದರು.

    ಈ ಸಂದರ್ಭದಲ್ಲಿ ಸುಮಾರು 600 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ಮೊಪೆಡ್, ಕೈ ಚಾಲಿತ ಸೈಕಲ್, ಕ್ರಚಸ್(ಊರುಗೋಲು), ವಾಕರ್, ಬ್ರೆöÊಲ್ ಕಿಟ್, ಸ್ಮಾರ್ಟ್ ಫೋನ್, ವ್ಹೀಲ್ ಚೇರ್, ಎಂ.ಆರ್. ಕಿಟ್, ಮತ್ತಿತರ ಸಲಕರಣೆ ಹಾಗೂ ಪಾಲಿಕೆ ವ್ಯಾಪ್ತಿಯ 3 ವಾರ್ಡು ಮತ್ತು 38 ಗ್ರಾಮ ಪಂಚಾಯತಿಗಳಿಗೆ ಕ್ಷಯರೋಗ ಮುಕ್ತವೆಂದು ಘೋಷಿಸಿ ಸಾಂಕೇತಿಕವಾಗಿ ಪ್ರಮಾಣಪತ್ರಗಳನ್ನು ಸಚಿವರು ವಿತರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    October 7, 2025

    ಸರಗೂರು‌: ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಈ ದಿನ ಜನಿಸಿದರು ಎಂಬುದಕ್ಕಾಗಿ ಈ ದಿನಕ್ಕೆ ವಾಲ್ಮೀಕಿ ಜಯಂತಿ ಎನ್ನುವ ಹೆಸರು…

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.