ಮುನಿಯೂರು: ರೈತರಿಗೆ ಸಾಲ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯ ವೇಳೆ ಸಹಕಾರ ಸಂಘದ ಕಾರ್ಯದರ್ಶಿ ಗಿಡ್ಡೇಗೌಡ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ತುರುವೇಕೆರೆ ಪೋಲೀಸ್ ಠಾಣಾ ವ್ಯಾಪ್ತಿಗೆ ಬರುವ ಮುನಿಯೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಂತಹದ್ದೊಂದು ಘಟನೆ ನಡೆದಿದ್ದರೂ ಪೊಲೀಸರು ಮೌನವಾಗಿದ್ದಾರೆ ಎನ್ನುವ ಆರೋಪಗಳು ಕೂಡ ಇದೀಗ ಕೇಳಿ ಬಂದಿದೆ.
ಈ ಪ್ರದೇಶದಲ್ಲಿ ಕೆಲವರು ಆಗಾಗ ಮಾರಕಾಸ್ತ್ರಗಳಿಂದ ಬೆದರಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎನ್ನುವ ಆತಂಕದ ಮಾತುಗಳು ಕೂಡ ಕೇಳಿ ಬಂದಿವೆ. ಯಾರೋ ಬೀದಿ ರೌಡಿಗಳ ನ್ಯಾಯ ಇಲ್ಲಿ ನಡೆಯುವುದಾದರೆ, ಪೊಲೀಸ್ ವ್ಯವಸ್ಥೆಗಳೇಕೆ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈ ಘಟನೆ ಸಂಬಂಧ ತಕ್ಷಣವೇ ಪೊಲೀಸರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB