ತುಮಕೂರು:ತುಮಕೂರಿನಲ್ಲಿ ರಂಗೇರಿದ ಲೋಕಸಭೆ ಚುನಾವಣಾ ಅಖಾಡ ರಂಗೇರಿದೆ. ಎನ್ ಡಿ ಎ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಇಂದು ಸಾವಿರಾರು ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ ಮಾಡಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು.
ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಯ ಮೂಲಕ ಬಿಜಿ ಪಾಳ್ಯ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಸಾಗಿತು.ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಜನಾರ್ದನ ರೆಡ್ಡಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಚಿವ ಬಿ ಸಿ ನಾಗೇಶ್, ಜಿಲ್ಲೆಯ ಜೆಡಿಎಸ್ ಬಿಜೆಪಿ ಪ್ರಮುಖರು ಭಾಗಿಯಾಗಿದರು.
ರೋಡ್ ಶೋದಲ್ಲಿ ಆರ್.ಅಶೋಕ್ ಮಾತನಾಡಿ ಅವರು ರಾಮಮಂದಿರ ಕಟ್ಟೋಕೆ 100 ವರ್ಷ ಆಯ್ತು. ಯಾರು ಕಟ್ಟೋಕೆ ಆಗಿಲ್ಲಾ.ಮೋದಿನೇ ಬರಬೇಕಾಯ್ತು. ನಮ್ಮ ಬೆಂಬಲಮೋದಿಗೆ ಎಂದರು.
ಕಾಂಗ್ರೆಸ್ ಕಾಶ್ಮೀರವನ್ನ ಬಿಟ್ಟುಬಿಟ್ರು,ಆದರೇ ಮೋದಿ ನಮ್ಮದಾಗಿಸಿಕೊಂಡ್ರು. ರಾಹುಲ್ ಗಾಂಧಿ,ಮೋದಿಗೆ ಸರಿಸಮನಾಗಿ ನಿಲ್ಲೋಕೆ ಆಗುತ್ತಾ. ಯಾವಾಗ ಫಾರಿನ್ ಗೆ ಓಡೋಗ್ತಾರೋ ಗೊತ್ತಿಲ್ಲಾ ಎಂದರು.
ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಭೀಕರ ಬರಗಾಲ ಇತ್ತು ಆಮೇಲೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಕ್ಯಾಬಿನೇಟ್ ನಲ್ಲಿ ಕೂತ್ರು. ಇಡೀ ರಾಜ್ಯದಲ್ಲೆಲ್ಲಾ ಮಳೆ ಬಂತು. ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ ಎಂದರು.ಬಿಜೆಪಿಸರ್ಕಾರ ಬಂದಾಗ ಮಳೆ ಕಾಂಗ್ರೆಸ್ ನವರ ದರಿದ್ರ ಕಾಲುಗುಣದಿಂದ ಬರಗಾಲ ಬಂದಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA