nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೊರಗುತ್ತಿದೆ ಸುವರ್ಣ ವಿಧಾನ ಸೌಧ, ಇಲಾಖೆಗಳನ್ನು ಸ್ಥಳಾಂತರಿಸುವಲ್ಲಿ ಸರ್ಕಾರ ವಿಫಲ
    ರಾಜ್ಯ ಸುದ್ದಿ November 18, 2022

    ಸೊರಗುತ್ತಿದೆ ಸುವರ್ಣ ವಿಧಾನ ಸೌಧ, ಇಲಾಖೆಗಳನ್ನು ಸ್ಥಳಾಂತರಿಸುವಲ್ಲಿ ಸರ್ಕಾರ ವಿಫಲ

    By adminNovember 18, 2022No Comments3 Mins Read
    belagavi

    ಸುಮಾರು ಒಂದು ದಶಕದ ಹಿಂದೆ ಬರೋಬ್ಬರಿ ಅಂದಾಜು ರೂ.೪೫೦ ಕೋಟಿ ವೆಚ್ಚದಲ್ಲಿ ಅಂದಿನ ಸರ್ಕಾರದ ವತಿಯಿಂದ ನಿರ್ಮಾಣ ಮಾಡಿದಂತಹ ಬೆಳಗಾವಿಯ ಸುವರ್ಣ ವಿಧಾನ ಸೌಧ ಸರ್ಕಾರದ ಬೊಕ್ಕಸದ ಪಾಲಿಗೆ ಒಂದು ಬಿಳಿ ಆನೆ ಆದಂತಾಗಿದೆ. ಏಕೆಂದರೆ ಅಂದಿನಿಂದ ಈವರೆಗೆ ಬಂದು ಹೋಗಿರುವಂತಹ ವಿವಿಧ ಸರ್ಕಾರಗಳು ಸಚಿವಾಲಯ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರಿಸುವಲ್ಲಿ ವಿಫಲವಾಗಿವೆ.

    ರಾಜಕಾರಣಿಗಳ ಆರೋಪವೇನೆಂದರೆ ಇದೊಂದು ಕೇವಲ ಗೋಡೌನ್ ರೀತಿಯಿರುವ ಕಟ್ಟವಾಗಿದ್ದು, ಸಚಿವಾಲಯ ಮಟ್ಟದ ಕಚೇರಿಗಳನ್ನು ಸ್ಥಾಪಿಸುವ ಯಾವುದೇ ಸೂಕ್ತ ಸೌಲಭ್ಯಗಳಿಲ್ಲವಂತೆ. ಜೊತೆಗೆ, ಹಿರಿಯ ಅಧಿಕಾರಿಗಳು ಬೆಳಗಾವಿಗೆ ಸ್ಥಳಂತಾರವಾಗಲು ನಿರಾಕರಿಸುತ್ತಿರುವರಂತೆ. ಅದರೆ ಇದಕ್ಕೆ ತದ್ವಿರುದ್ಧ ಎನ್ನುವಂತೆ ಅಧಿಕಾರಿಗಳ ಆರೋಪವೇನೆಂದರೆ, ರಾಜಕಾರಣಿಗಳಿಗೆ ಅಧಿಕಾರಿಗಳು ಬೆಂಗಳೂರಿನಲ್ಲೇ ಇರಬೇಕು ಎನ್ನುವುದು ಮತ್ತು ವಿವಿಧ ಸಚಿವಾಲಯಗಳ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಂತಾರಿಸುವಲ್ಲಿ ಇರುವ ರಾಜಕೀಯ ಇಚ್ಛಾಶಕ್ತಿಯ ಕೊರತೆಗಳೇ ಸುವರ್ಣ ವಿಧಾನ ಸೌಧದ ಸಂಪೂರ್ಣ ಬಳಕೆಗೆ ಎದುರಾಗಿರುವ ಮುಖ್ಯ ಕಾರಣಗಳಂತೆ.

    ರಾಜ್ಯ ಸರ್ಕಾರ ಸುವರ್ಣ ವಿಧಾನ ಸೌಧದ ನಿರ್ವಹಣೆಗಾಗಿಯೇ ವಾರ್ಷಿಕ ಬರೋಬ್ಬರಿ ರೂ.೫ ಕೋಟಿ ವೆಚ್ಚ ಮಾಡುತ್ತಿದೆ. ಈ ನಾಲ್ಕು ಅಂತಸ್ತುಗಳ ಕಟ್ಟಡವನ್ನು ೬೦,೩೯೮ ಚದರ ಮಿ.ಗಳ ಪ್ರದೇಶ ವ್ಯಾಪ್ತಿಯಲ್ಲಿ (ಅಂದಾಜು ೧೫,೦೦೦ ಚದರ ಮೀಟರ್, ಅಮದರೆ ವಿಧಾನ ಸೌಧಕ್ಕಿಂತಲೂ ಹೆಚ್ಚಿನ ವಿಸ್ತೀರ್ಣ) ನಿರ್ಮಾಣ ಮಾಡಲಾಗಿದೆ. ಆದರೆ ಕೇವಲ ಚಳಿಗಾಲದ ಅಧಿವೇಶನವನ್ನು ಮಾತ್ರ ನಡೆಸಲು ಮೀಸಲಾಗಿಸಲಾಗಿದೆ. ಈ ಸುವರ್ಣ ವಿಧಾನ ಸೌಧದಲ್ಲಿ ಅಸೆಂಬ್ಲಿ ಹಾಗೂ ಪರಿಷತ್ ಹಾಲ್‌ ಗಳ ಜೊತೆಗೆ, ೩೮ ಸಚಿವಾಲಯ ಚೇಂಬರ್‌ ಗಳು ಹಾಗೂ ೧೪ ಸಮಾವೇಶ ಕೊಠಡಿಗಳಿವೆ.

    ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷ ಬಸವರಾಜ್ ಹೊರಟ್ಟಿ ಅವರ ಪ್ರಕಾರ, ಈ ಸುವರ್ಣ ವಿಧಾನ ಸೌಧವನ್ನು ಥೇಟ್ ವಿಧಾನ ಸೌಧದ ರೀತಿಯಲ್ಲೇ ಅಂದರೆ ಅಲ್ಲಿರುವಂತಹ ಸೌಲಭ್ಯಗಳ ಪ್ರಕಾರವೇ ನಿರ್ಮಾಣ ಮಾಡಬೇಕಿತ್ತು. “ಆದರೆ ಈ ಸುವರ್ಣ ವಿಧಾನ ಸೌಧ ಕೇವಲ ಒಂದು ಗೋಡೌನ್ ರೀತಿ ಕಾಣುತ್ತದೆ. ಇಲ್ಲಿ ಸಚಿವಾಲಯ ಹಾಗೂ ಅಧಿಕಾರಿಗಳಿಗೆ ಅನುಕೂಲವಾಗುವಂತ ಯಾವುದೇ ಸೂಕ್ತ ವ್ಯವಸ್ಥೆಗಳಿಲ್ಲ. ಮೂಲಭೂತಸೌಕರ್ಯಗಳೇ ಇಲ್ಲ,” ಎಂದರು. ಜೊತೆಗೆ, ಮೂಲಸೌಕರ್ಯಗಳ ಕೊರತೆ ಇದೆ ಎನ್ನುವುದು ಹಾಗೂ ಇಲಾಖೆಗಳನ್ನು ಇಲ್ಲಿಗೆ ಸ್ಥಳಾಂತರಿಸುವಲ್ಲಿ ವಿಳಂಬ ನೀತಿಯೇ ಕಾರಣ ಎಂದು ಹಿರಿಯ ಅಧಿಕಾರಿಗಳು ಆರೋಪಿಸುತ್ತಾರೆ.

    ತಮ್ಮ ಗುರುತನ್ನು ಬಹಿರಂಗಗೊಳಿಸಲು ಬಯಸದೇ ಇರುವಂತಹ ಆಡಳಿತ ಪಕ್ಷದ ಕನಿಷ್ಠ ಎರಡು ಎಂಎಲ್‌ ಎಗಳು ಈ ಕಟ್ಟಡ ಬಹಳ ಇಕ್ಕಟ್ಟಾಗಿದ್ದು, ಎಲ್ಲಾ ಇಲಾಖೆಗಳನ್ನೂ ಒಳಗೊಳ್ಳುವಷ್ಟು ಸಾಮರ್ಥ್ಯ ಹೊಂದಿಲ್ಲ ಎಂದರು. ಜೊತೆಗೆ, ಅಧಿವೇಶನಗಳು ನಡೆಯುವಾಗಲೂ ಸಹ ಇಲ್ಲಿ ಸ್ಥಳಾವಕಾಶದ ಕೊರತೆ ಎದುರಾಗುತ್ತದೆ ಎಂದರು.

    “ಇಲ್ಲಿರುವ ಕೊಠಡಿಗಳನ್ನು ಸಚಿವರು ಹಾಗೂ ಅಧಿಕಾರಿಗಳ ಕ್ಯಾಬಿನ್‌ ಗಳಾಗಿ ವಿಭಜಿಸಲು ಆಗುವುದಿಲ್ಲ. ಮೇಲಾಗಿ, ಬೆಂಗಳೂರಿನಲ್ಲಿರುವ ರಾಜ್ಯ ಆಡಳಿತ ಮೂರು ಕಟ್ಟಡಗಳಲ್ಲಿವೆ; ಆದರೆ ಇಲ್ಲಿ ಎಲ್ಲವನ್ನೂ ಕೇವಲ ಒಂದೇ ಕಟ್ಟಡದಲ್ಲಿ ಸೇರಿಸಲಾಗಿದೆ,” ಎನ್ನುವುದು ಎಂಎಲ್‌ ಎಗಳ ಅಭಿಪ್ರಾಯವಾಗಿದೆ.

    ೨೦೨೦ರಲ್ಲಿ ಯಡಿಯೂರಪ್ಪ ಮುಂದಾಳತ್ವದ ಸರ್ಕಾರ ಒಂಬತ್ತು ಸಚಿವಾಲಯ ಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನ ಸೌಧಕ್ಕೆ ಸ್ಥಳಾಂತರಿಸಲು ಆದೇಶಿಸಿತು. ಆದರೆ ಎರಡು ವರ್ಷಗಳಾದರೂ ಸಹ ಅದು ಇನ್ನೂ ಕಾರ್ಯಗತವಾಗಿಲ್ಲ. ಕೇವಲ ರಾಜ್ಯ ಮಾಹಿತಿ ಆಯೋಗ ಹೊರತುಪಡಿಸಿದರೆ, ಮತ್ಯಾವುದೇ ಇಲಾಖೆ ಬೆಳಗಾವಿಗೆ ಸ್ಥಳಾಂತರಗೊಂಡಿಲ್ಲ.

    ಸುವರ್ಣ ವಿಧಾನ ಸೌಧದ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿರುವ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭೀಮಾ ನಾಯಕ್ ಅವರು ತಿಳಿಸಿದಂತೆ ಪ್ರಸ್ತುತ ಅಲ್ಲಿ ಕೇವಲ ಒಂದೇ ಒಂದು ಸಚಿವಾಲಯ ಮಟ್ಟದ ಕಚೇರಿ ಕಾರ್ಯನಿರ್ವಹಿಸುತ್ತಿದೆ. “ಕಳೆದ ವರ್ಷ ಸರ್ಕಾರ, ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತಹ ೨೬ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಿತು. ಆ ಪೈಕಿ ೨೩ ತಾಲ್ಲೂಕು-ಮಟ್ಟದ ಕಚೇರಿಗಳು,” ಎಂದರು.

    ಸರ್ಕಾರದ ಈ ನಿಲುವು ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ. ಏಕೆಂದರೆ, ಅವರು ಒಂದು ಸಣ್ಣ ಕೆಲಸಕ್ಕೂ ಸಹ ೧೪ ಕಿ.ಮೀ.ಗಳಷ್ಟು ದೂರ ಕ್ರಮಿಸಬೇಕಾಗಿದೆ.

    ವಿಜಯಪುರ ಮೂಲದ ರೈತ ನಾಯಕರಾದ ಜಿ.ಸಿ. ಮುಟ್ಟಲದಿನ್ನಿ ಅವರು ಕೆಬಿಜೆಎನ್‌ ಎಲ್‌ ನ ಸಚಿವಾಲಯ ಕಚೇರಿಯನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಬೇಕೆಂದು ಹೋರಾಟ ನಡೆಸುತ್ತಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬೆಂಗಳೂರಿನಲ್ಲಿ ಏಕಿರಬೇಕು ಎಂದು ಪ್ರಶ್ನಿಸುತ್ತಾರೆ. “ರೈತರು ಹಾಗೂ ಸ್ಥಳೀಯರು ಆಲಮಟ್ಟಿ ಯೋಜನೆಗೆ ಸಂಬಂಧಪಟ್ಟಂತಹ ವಿವಿಧ ಕ್ಲೇಮುಗಳ ಇತ್ಯರ್ಥಕ್ಕೆ ಬೆಂಗಳೂರಿಗೆ ಹೋಗಬೇಕಾಗಿದೆ,” ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.