ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ವೈ.ಎನ್.ಹೊಸಕೋಟೆ ಪುಟ್ ಬಾಲ್ ಕ್ಲಬ್ ನ ವತಿಯಿಂದ ಮೂರನೇ ವರ್ಷದ ಹೊನಲು ಬೆಳಕಿನ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪಂದ್ಯಾವಳಿಯನ್ನು ನಿವೃತ್ತ ದೈಹಿಕ ಶಿಕ್ಷಕರಾದ ಫಕೃದ್ಧೀನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೈಮನಸ್ಸುಗಳನ್ನು ಮರೆಸಿ ಆರೋಗ್ಯವನ್ನು ನೀಡುವುದು ಆರೋಗ್ಯ ಕ್ಷೇತ್ರ. ಕ್ರೀಡಾಪಟುಗಳು ಸಹಜವಾಗಿ ಆರೋಗ್ಯವಂತರಾಗಿರುತ್ತಾರೆ ಮತ್ತು ಮಾನಸಿಕವಾಗಿ ಸಧೃಢರಾಗಿರುತ್ತಾರೆ. ತಾವು ಬೆಳೆಯುತ್ತಾ ಗ್ರಾಮಕ್ಕೆ ನಾಡಿಗೆ ದೇಶಕ್ಕೆ ಕೀರ್ತಿ ತಂದು ಕೊಡುವ ಶಕ್ತಿಯನ್ನು ಹೊಂದುತ್ತಾರೆ ಎಂದರು.
ಗ್ರಾಮದಲ್ಲಿ ನಡೆಯುತ್ತಿರುವ ಪುಟ್ ಬಾಲ್ ಕ್ರೀಡಾಕೂಟದಲ್ಲಿ ಅನೇಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿನ ತೊಡಗಿಸಿಕೊಳ್ಳುವ ಗುಣವನ್ನು ತೋರಿಸುತ್ತದೆ. ಜೊತೆಗೆ ಪಂದ್ಯಾವಳಿಗಳ ಮೂಲಕ ನೋಡುಗರಿಗೆ ಮನೋರಂಜನೆಯನ್ನು ಉತ್ಸಾಹವನ್ನು ತುಂಬುತ್ತದೆ ಎಂದರು.
ಹಿರಿಯ ಕ್ರೀಡಾಪಟು ಅಬ್ದುಲ್ ಶುಕೂರ್ ಮಾತನಾಡಿ, ತಾಲ್ಲೂಕಿನಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಹೆಸರು ಗಳಿಸಿರುವುದು ವೈ.ಎನ್.ಹೊಸಕೋಟೆಯಾಗಿದ್ದು, ತಾಲ್ಲೂಕಿನ ಕ್ರೀಡಾ ತವರು ಆಗಿದೆ. ಇಲ್ಲಿ ತಲೆಮಾರುಗಳಿಂದ ವಾಲಿಬಾಲ್, ಕಬಡ್ಡಿ, ಖೋಖೋ ಇತ್ಯಾದಿ ಪಂದ್ಯಾವಳಿಗಳನ್ನು ಆಡುತ್ತಾ ಜನಮನ್ನಣೆ ಗಳಿಸಿವೆ. ಅದರಂತೆ ಪ್ರಸ್ತುತ ವರ್ಷಗಳಲ್ಲಿ ಪುಟ್ ಬಾಲ್ ಪಂದ್ಯಾವಳಿಗಳು ನಡೆಯುತ್ತಿದ್ದು, ಗ್ರಾಮದ ಕ್ರೀಡಾ ಇತಿಹಾಸದಲ್ಲಿ ಸೇರ್ಪಡೆಯಾಗುತ್ತಿದೆ. ಜನತೆ ಈ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಕ್ರೀಡಾಪಟುಗಳಾದ ಹೆಚ್.ಜಿ.ಮಂಜುನಾಥ, ಶಿಕ್ಷಕರಾದ ಹನುಮಂತರಾಯಪ್ಪ, ಮನೋಜ್ ಕುಮಾರ್ ಇನ್ನಿತರೆ ಕ್ರೀಡಾಪಟುಗಳು ಮತ್ತು ಕ್ರೀಡಾಪ್ರೇಮಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA