nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?
    • ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದ್ಯಪಾನ ಬಿಡಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರ ಸಹಕಾರಿ: ಡಾ.ಶ್ರೀಶಿವಾನಂದಶಿವಾಚಾರ್ಯಸ್ವಾಮೀಜಿ
    Uncategorized August 12, 2024

    ಮದ್ಯಪಾನ ಬಿಡಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರ ಸಹಕಾರಿ: ಡಾ.ಶ್ರೀಶಿವಾನಂದಶಿವಾಚಾರ್ಯಸ್ವಾಮೀಜಿ

    By adminAugust 12, 2024No Comments2 Mins Read
    Dharamsthala project

    Provided by
    Provided by

    ತುಮಕೂರು: ಮದ್ಯಪಾನ ಬಿಟ್ಟು ತಮ್ಮ ಕುಟುಂಬದ ಸದಸ್ಯರೊಂದಿಗೆ ಹೊಸ ಜೀವನ ಪ್ರಾರಂಭಿಸಿ, ಡಾ.ಡಿ.ವಿರೇಂದ್ರ ಹೆಗ್ಗಡೆರವರು ಸಮಾಜವನ್ನು ದೃಷ್ಟಿಯಲ್ಲಿಟ್ಟುಕೊಂಡು ಮದ್ಯ ಸೇವಿಸಿ ತಮ್ಮ ಜೀವನವನ್ನು ಹಾಳುಮಾಡಿಕೊಂಡ ಜನರನ್ನು ಒಂದೆಡೆ ಸೇರಿಸಿ 8 ದಿನಗಳ ಕಾಲ ಸಾರ್ವಜನಿಕರು, ದಾನಿಗಳ ಸಹಕಾರದೊಂದಿಗೆ ಶಿಬಿರ ಏರ್ಪಡಿಸಿ ಕುಡಿತವನ್ನು ಬಿಡಿಸಿ ಲಕ್ಷಾಂತರ ಜನರಿಗೆ ಉತ್ತಮ ಜೀವನವನ್ನು ಕಟ್ಟಿಕೊಟ್ಟವರು.

    ಜೀವನದಲ್ಲಿ ಆರೋಗ್ಯವೇ ಭಾಗ್ಯ, ಎಲ್ಲರೂ ಸೇವಾ ಕಾರ್ಯಗಳನ್ನು ಸದಾ ಮಾಡುತ್ತಿರಿ, ಈ ಶಿಬಿರದಿಂದ ಮಾನಸಿಕವಾಗಿ ಪರಿವರ್ತನೆ ಆಗಿದ್ದೀರಿ, ಈ ದೇಶಕ್ಕೆ ಆಸ್ತಿಯಾಗಿ ಉತ್ತಮ ಜೀವನವನ್ನು ನಡೆಸಿ ತಂದೆ ತಾಯಿಗೆ ಉತ್ತಮ ಮಗನಾಗಿ, ಹೆಂಡತಿಗೆ ಒಳ್ಳೆಯ ಜವಾಬ್ದಾರಿ ಗಂಡನಾಗಿ, ತಂದೆಯಾಗಿ ತಮ್ಮ ಮಕ್ಕಳೊಂದಿಗೆ ಜೀವನ ನಡೆಸಿ ಎಂದು ಹಿರೇಮಠದ ಡಾ.ಶ್ರೀ ಶ್ರೀ ಶಿವನಾಂದಶಿವಾಚಾರ್ಯಸ್ವಾಮೀಜಿಗಳು ಆಶೀರ್ವದಿಸಿದರು.

    ಭೀಮಸಂದ್ರ ಗಣಪತಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ೧೮೩೩ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಬಸವಾರಾಧ್ಯರವರು ಎಲ್ಲರೂ ಜೀವನದಲ್ಲಿ ಮದ್ಯಪಾನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಆರ್ಥಿಕ ಸಾಮಾಜಿಕ ಜೀವನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮುಂದಿನ ಜೀವನ ನಡೆಸಿ ಎಂದು ಕಿವಿಮಾತು ಹೇಳಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಪ್ರಾದೇಶಿಕ ನಿರ್ದೇಶಕರಾದ ಎಂ.ಶೀನಪ್ಪ, ನವರು ಪೂಜ್ಯ ವೀರೇಂದ್ರ ಹೆಗ್ಗಡೆರವರ ದೂರದೃಷ್ಠಿತ್ವದಿಂದ ಸಮಾಜದಲ್ಲಿ ಹಲವಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಮದ್ಯವರ್ಜನ ಶಿಬಿರದಿಂದ ಇಲ್ಲಿವರೆವಿಗೂ ೧.೩ಲಕ್ಷ ಜನ ಕುಡಿತ ಬಿಟ್ಟು ಉತ್ತಮ ದಾರಿಯಲ್ಲಿ ಸಾಗುತ್ತಿದ್ದಾರೆ. ಸ್ವಾಭಿಮಾನದಿಂದ ಬದುಕಿ ತೋರಿಸಿ, ನೀವೆಲ್ಲರೂ ಸಮಾಜದ ಮುಖ್ಯ ವಾಹಿನಿಗೆ ಬರಬೇಕು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಸಾರ್ವಜನಿಕರಿಗೆ ಸರ್ಕಾರದ ಎಲ್ಲ ಯೋಜನೆಗಳನ್ನು ತಲುಪಿಸುತ್ತಿದ್ದೇವೆ, ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿಯಿಂದ ತಲಾ ೧ ಸಾವಿರ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ನೂರಾರು ಯೋಜನೆಯ ಮೂಲಕ ರಾಜ್ಯದ ಎಲ್ಲ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಕಳಕಳಿ ಇಟ್ಟುಕೊಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸೇವೆ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

    ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಮಾತನಾಡುತ್ತಾ, ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜನರಿಗೆ ಅಭಯದಾನ, ಶಿಕ್ಷಣ ದಾನ, ಅನ್ನದಾನ, ಔಷಧ ದಾನ ಹೀಗೆ ನಾನಾ ದಾನಗಳನ್ನು ನೀಡುತ್ತಾ ಬರುತ್ತಿದ್ದಾರೆ, 8 ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ಶಿಬಿರಾರ್ಥಿಯಾಗಿ ಪಾಲ್ಗೊಂಡ ಗಂಡನನ್ನು ಇಂದು ಹೆಂಡತಿಗೆ ಒಪ್ಪಿಸುತ್ತಿದ್ದೇವೆ, ಅನ್ಯೋನ್ಯವಾಗಿ ಮುಂದಿನ ಜೀವನ ನಡೆಸಿ ಎಂದು ದಂಪತಿಗಳಿಗೆ ತಿಳಿಸಿದರು.

    ವೇದಿಕೆಯಲ್ಲಿ ಮುರಳೀಧರ ಹಾಲಪ್ಪ, ಅಮರನಾಥಶೆಟ್ಟಿ, ಈಶ್ವರಯ್ಯ, ಉಪ್ಪಾರಹಳ್ಳಿ ಕುಮಾರ್, ಗಣೇಶ್ ಪ್ರಸಾದ್, ತಿಮ್ಮಯ್ಯ ನಾಯಕ್ ಮುಂತಾದವರು ಉಪಸ್ಥಿತರಿದ್ದರು. ತಾಲ್ಲೂಕು ಯೋಜನಾಧಿಕಾರಿ ಪಿ.ಬಿ.ಸಂದೇಶ್ ರವರು ಸ್ವಾಗತಿಸಿ,ಹೇಮಂತ್ ಕುಮಾರ್ ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    ಮಧುಗಿರಿ: ತೋಟಗಾರಿಕೆ ಇಲಾಖೆ ವತಿಯಿಂದ 2026-27 ನೆ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್/ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ತೋಟಗಾರಿಕೆಯಲ್ಲಿ…

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.