nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಜಾತ್ರೆ:  ಭಕ್ತರಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ಎಚ್.ಬಿ.ವಿಜಯಕುಮಾರ್ ಸೂಚನೆ
    ಜಿಲ್ಲಾ ಸುದ್ದಿ October 24, 2024

    ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಜಾತ್ರೆ:  ಭಕ್ತರಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ಎಚ್.ಬಿ.ವಿಜಯಕುಮಾರ್ ಸೂಚನೆ

    By adminOctober 24, 2024No Comments3 Mins Read

    ಸರಗೂರು:  ಸಾರ್ವಜನಿಕರು ಮತ್ತು ಭಕ್ತಾದಿಗಳಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್.ಬಿ.ವಿಜಯಕುಮಾರ್ ಸೂಚನೆ ನೀಡಿದರು.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಪ್ರಮುಖ ದೇವಸ್ಥಾನದ ಜಾತ್ರೆಗೆ ಒಂದು ತಿಂಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳು ನೀಡಿದ  ಆದೇಶದ ಮೇರೆಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್. ಬಿ. ವಿಜಯಕುಮಾರ್ ಅಧ್ಯಕ್ಷತೆಯಲ್ಲಿ  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮ್ಮುಖದಲ್ಲಿ ದೇವಸ್ಥಾನ ಪರಿಶೀಲನೆ ನಡೆಸಿ ನಂತರ ಹೆಡಿಯಾಲ ಉಪವಲಯ ಕಚೇರಿಯ ಸಭಾಂಗಣದಲ್ಲಿ ಗುರುವಾರ  ಅಧಿಕಾರಿ ಸಭೆ ನಡೆಸಲಾಯಿತು .


    Provided by

    ನಂತರ ಮಾತನಾಡಿದ ಅವರು,  ಕಂದಾಯ ಮತ್ತು ಆರೋಗ್ಯ ಮತ್ತು ನೀರು ನೈರ್ಮಲ್ಯ,  ಅರಣ್ಯ, ಪೋಲೀಸ್ ಇಲಾಖೆ ಅಧಿಕಾರಿಗಳಿಗೆ  ದೇವಸ್ಥಾನಕ್ಕೆ ಬರುವ ಭಕ್ತರಿಗಳಿಗೆ ಹಾಗೂ ಸಾರ್ವಜನಿಕರು ತೊಂದರೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು . ಕಳೆದ ವರ್ಷ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಅದೇ ತರಹದ ಧಾರ್ಮಿಕ ಪೂಜೆ ಗಳಿಗೆ ತೊಂದರೆ ನೀಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಬೆಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನವು ಹಿಂದೂ ಕ್ಯಾಲೆಂಡರ್‌ ನ ಕೊನೆಯ ಸೋಮವಾರದೊಂದಿಗೆ ಕಾರ್ತಿಕ ಮಾಸದ ಸಂದರ್ಭದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತದೆ. ಯಾವ ಯಾವ ಕಡೆಯಿಂದ  ದೇವಸ್ಥಾನಕ್ಕೆ ಜನರು ಬರುತ್ತಾರೆ. ಬಸ್ ವ್ಯವಸ್ಥೆ ಕಲ್ಪಿಸಬೇಕು. ಜೇನ್ ಗೇಟ್ ಮುಂಭಾಗದಲ್ಲಿ ಅಂಗಡಿ ಮುಂಗಟ್ಟುಗಳಿಗೆ ಹಾಗೂ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ರಸ್ತೆಗಳ ಬದಿಯಲ್ಲಿ ಗಿಡಗಂಟಿಗಳು ಬೆಳೆದುಕೊಂಡಿರುವ ಹಾಗೂ ರಸ್ತೆಯಲ್ಲಿ ಗುಂಡಿಗಳಿಗೆ ಮಣ್ಣು ಮುಚ್ಚಬೇಕು ಎಂದು ಸೂಚನೆ ನೀಡಿದರು.

    ಮೂರು ದಿನ ಕಾಲ ಜಾತ್ರಾ ನಡೆಯುವ ಕಾರಣ ರಸ್ತೆಯಲ್ಲಿ  ಧೂಳು ಬರುತ್ತದೆ. ಧೂಳು ಹರಡದಂತೆ ನೀರು ಹಾಕಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಲು ಟ್ಯಾಂಕ್ ನ್ನು ನಿರ್ಮಾಣ ಮಾಡಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಬೇಕು.  ಏಕೆಂದರೆ ಯಾವುದೇ ಈತ ಘಟನೆ ನಡೆದಿದೆ ನೋಡಿಕೊಳ್ಳಬೇಕು. ಕಂದಾಯ ಇಲಾಖೆ ತಹಶೀಲ್ದಾರ್ ರುಕಿಯಾ ಬೇಗಂ ಜಾತ್ರಾ ಮಹೋತ್ಸವದ ರೂಪುರೇಷೆ ನೋಡಿಕೊಳ್ಳ ಬೇಕು ಎಂದು ತಿಳಿಸಿದರು.

    ಮುಜರಾಯಿ ಧಾರ್ಮಿಕ ದತ್ತಿ ಇಲಾಖೆ ಇಓ ರಘು ರವರು ಈ ಭಾಗದ ಟ್ರಸ್ಟ್ ಸಮಿತಿ ಹಾಗೂ ಎಲ್ಲಾ ಗ್ರಾಮಗಳ ಮುಖಂಡರು ಹಾಗೂ ಯಜಮಾನರು ಮುಂದಿನ ಬುಧವಾರ ದಂದು ಸಭೆಯನ್ನು ನಡೆಸಿ. ಎಲ್ಲಾ ಮುಖಂಡರನ್ನು ವಿಶ್ವಾಸ ತೆಗೆದುಕೊಂಡು ಸಭೆ ಮಾಡಬೇಕೆಂದು ಸೂಚನೆ ನೀಡಿದರು.

    ಮುಖಂಡರು ಒತ್ತಾಯ:

    ದೇವಸ್ಥಾನದಲ್ಲಿ ದೇವರಿಗೆ ಪೂಜೆ ಪುನಸ್ಕಾರ ಮಾಡಲು ಅನುಮತಿ ಇಲ್ಲದೆ, ದೇವರು ಅನಾಥ ವಾಗಿದೆ. ಜಾತ್ರಾ ಮಾಡುವ ಸಂದರ್ಭದಲ್ಲಿ ಟ್ರಸ್ಟ್ ಸಮಿತಿಯಿಂದ ದೇವಸ್ಥಾನಕ್ಕೆ ಸುಣ್ಣ ಬಣ್ಣ ಬಳಿದು ಹಾಗೂ ಗಿಡಗಂಟಿಗಳ ಕಡಿದು ಸ್ವಚ್ಚತೆ ಮಾಡಿಕೊಂಡು ಬರುವ ಭಕ್ತರಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದೆವು. ಆದರೆ ಮುಜರಾಯಿ ಇಲಾಖೆಗೆ ಸೇರಿದ ಮೇಲೆ ಯಾವುದೇ ನಡೆಯುತ್ತಿಲ್ಲ. ಈ ಬಾರಿ ಜಾತ್ರಾ ಮಹೋತ್ಸವ  ನಡೆಯುವ ಸಂದರ್ಭದಲ್ಲಿ ಮಂಗಳವಾದ್ಯ. ವಿದ್ಯುತ್ ಹಾಗೂ ನಾಕೈದು ಊರುಗಳಿಂದ ತೇರು ಬರುತ್ತಿದ್ದವು ಅವನನ್ನು ಒಳಗಡೆ ಬಿಡಲು ಅವಕಾಶ ನೀಡಬೇಕೆಂದು ತಿಳಿಸಿದರು.

    ಹಾಗೂ ಕಳೆದ ಒಂದು ತಿಂಗಳ ಹಿಂದೆ ದೇವಸ್ಥಾನದಲ್ಲಿ ನಿರಂತರವಾಗಿ ಪೂಜೆ ಮಾಡಿಕೊಂಡು ಬರುತ್ತಿರುವ ಪೂಜಾರಿಗೆ ನಮ್ಮ ಟ್ರಸ್ಟ್ ವತಿಯಿಂದ ಒಂದು ಕೊಠಡಿಯನ್ನು ಮಾಡಿಕೊಟ್ಟಿದ್ದೆವು. ಅದರೆ ಮುಜರಾಯಿ ಇಲಾಖೆ ಸೇರಿದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೇವಸ್ಥಾನಕ್ಕೆ ಪೂಜೆ ಮಾಡಲು ಅವಕಾಶವನ್ನು ನೀಡದೇ ಪೂಜಾರಿಯನ್ನು  ಕಳಿಸಿ ಬಿಟ್ಟಿದ್ದಾರೆ ಅದರಿಂದ ತಾವುಗಳು ಅನುಮತಿ ನೀಡಬೇಕು ಎಂದು ಈ ಭಾಗದ ಸಾರ್ವಜನಿಕರು ಹಾಗೂ ಮುಖಂಡರು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಸರಗೂರು ತಾಲೂಕು ತಹಶೀಲ್ದಾರ್ ರುಕಿಯಾ ಬೇಗಂ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಧರನೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಎ ಸಿ ಎಫ್ ಸತೀಶ್, ಧಾರ್ಮಿಕ ದತ್ತಿ ಇಲಾಖೆ ಇಓ ರಘು, ರಾಕೇಶ್ ,ಆರ್ ಎಫ್ ಓ ವಿವೇಕ್, ಅಮೃತ, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ಗೋವಿಂದ ನಾಯ್ಕ, ಕೆಇಬಿ ಎಇಇ ದೀಪಿಕ್, ಪಿಡಿಒಗಳು ಚಿನ್ನಸ್ವಾಮಿ, ಪರಮೇಶ್, ಕಂದಾಯ ಇಲಾಖೆ ಸಿಬ್ಬಂದಿಗಳು ರವಿಂದ್ರ, ಮುಜೀಬ್, ಶ್ರೀನಿವಾಸ, ಗ್ರಾಪಂ ಸದಸ್ಯರು ಗಂಗಾಧರ್, ಶಿವಕುಮಾರ್,ಮುಖಂಡರು ನಾಗೇಂದ್ರ, ಇನ್ನೂ ಮುಖಂಡರು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.