nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಜಾತ್ರೆ:  ಭಕ್ತರಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ಎಚ್.ಬಿ.ವಿಜಯಕುಮಾರ್ ಸೂಚನೆ
    ಜಿಲ್ಲಾ ಸುದ್ದಿ October 24, 2024

    ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಜಾತ್ರೆ:  ಭಕ್ತರಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ಎಚ್.ಬಿ.ವಿಜಯಕುಮಾರ್ ಸೂಚನೆ

    By adminOctober 24, 2024No Comments3 Mins Read

    ಸರಗೂರು:  ಸಾರ್ವಜನಿಕರು ಮತ್ತು ಭಕ್ತಾದಿಗಳಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್.ಬಿ.ವಿಜಯಕುಮಾರ್ ಸೂಚನೆ ನೀಡಿದರು.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಪ್ರಮುಖ ದೇವಸ್ಥಾನದ ಜಾತ್ರೆಗೆ ಒಂದು ತಿಂಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳು ನೀಡಿದ  ಆದೇಶದ ಮೇರೆಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್. ಬಿ. ವಿಜಯಕುಮಾರ್ ಅಧ್ಯಕ್ಷತೆಯಲ್ಲಿ  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮ್ಮುಖದಲ್ಲಿ ದೇವಸ್ಥಾನ ಪರಿಶೀಲನೆ ನಡೆಸಿ ನಂತರ ಹೆಡಿಯಾಲ ಉಪವಲಯ ಕಚೇರಿಯ ಸಭಾಂಗಣದಲ್ಲಿ ಗುರುವಾರ  ಅಧಿಕಾರಿ ಸಭೆ ನಡೆಸಲಾಯಿತು .


    Provided by
    Provided by

    ನಂತರ ಮಾತನಾಡಿದ ಅವರು,  ಕಂದಾಯ ಮತ್ತು ಆರೋಗ್ಯ ಮತ್ತು ನೀರು ನೈರ್ಮಲ್ಯ,  ಅರಣ್ಯ, ಪೋಲೀಸ್ ಇಲಾಖೆ ಅಧಿಕಾರಿಗಳಿಗೆ  ದೇವಸ್ಥಾನಕ್ಕೆ ಬರುವ ಭಕ್ತರಿಗಳಿಗೆ ಹಾಗೂ ಸಾರ್ವಜನಿಕರು ತೊಂದರೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು . ಕಳೆದ ವರ್ಷ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಅದೇ ತರಹದ ಧಾರ್ಮಿಕ ಪೂಜೆ ಗಳಿಗೆ ತೊಂದರೆ ನೀಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಬೆಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನವು ಹಿಂದೂ ಕ್ಯಾಲೆಂಡರ್‌ ನ ಕೊನೆಯ ಸೋಮವಾರದೊಂದಿಗೆ ಕಾರ್ತಿಕ ಮಾಸದ ಸಂದರ್ಭದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತದೆ. ಯಾವ ಯಾವ ಕಡೆಯಿಂದ  ದೇವಸ್ಥಾನಕ್ಕೆ ಜನರು ಬರುತ್ತಾರೆ. ಬಸ್ ವ್ಯವಸ್ಥೆ ಕಲ್ಪಿಸಬೇಕು. ಜೇನ್ ಗೇಟ್ ಮುಂಭಾಗದಲ್ಲಿ ಅಂಗಡಿ ಮುಂಗಟ್ಟುಗಳಿಗೆ ಹಾಗೂ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ರಸ್ತೆಗಳ ಬದಿಯಲ್ಲಿ ಗಿಡಗಂಟಿಗಳು ಬೆಳೆದುಕೊಂಡಿರುವ ಹಾಗೂ ರಸ್ತೆಯಲ್ಲಿ ಗುಂಡಿಗಳಿಗೆ ಮಣ್ಣು ಮುಚ್ಚಬೇಕು ಎಂದು ಸೂಚನೆ ನೀಡಿದರು.

    ಮೂರು ದಿನ ಕಾಲ ಜಾತ್ರಾ ನಡೆಯುವ ಕಾರಣ ರಸ್ತೆಯಲ್ಲಿ  ಧೂಳು ಬರುತ್ತದೆ. ಧೂಳು ಹರಡದಂತೆ ನೀರು ಹಾಕಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಲು ಟ್ಯಾಂಕ್ ನ್ನು ನಿರ್ಮಾಣ ಮಾಡಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಬೇಕು.  ಏಕೆಂದರೆ ಯಾವುದೇ ಈತ ಘಟನೆ ನಡೆದಿದೆ ನೋಡಿಕೊಳ್ಳಬೇಕು. ಕಂದಾಯ ಇಲಾಖೆ ತಹಶೀಲ್ದಾರ್ ರುಕಿಯಾ ಬೇಗಂ ಜಾತ್ರಾ ಮಹೋತ್ಸವದ ರೂಪುರೇಷೆ ನೋಡಿಕೊಳ್ಳ ಬೇಕು ಎಂದು ತಿಳಿಸಿದರು.

    ಮುಜರಾಯಿ ಧಾರ್ಮಿಕ ದತ್ತಿ ಇಲಾಖೆ ಇಓ ರಘು ರವರು ಈ ಭಾಗದ ಟ್ರಸ್ಟ್ ಸಮಿತಿ ಹಾಗೂ ಎಲ್ಲಾ ಗ್ರಾಮಗಳ ಮುಖಂಡರು ಹಾಗೂ ಯಜಮಾನರು ಮುಂದಿನ ಬುಧವಾರ ದಂದು ಸಭೆಯನ್ನು ನಡೆಸಿ. ಎಲ್ಲಾ ಮುಖಂಡರನ್ನು ವಿಶ್ವಾಸ ತೆಗೆದುಕೊಂಡು ಸಭೆ ಮಾಡಬೇಕೆಂದು ಸೂಚನೆ ನೀಡಿದರು.

    ಮುಖಂಡರು ಒತ್ತಾಯ:

    ದೇವಸ್ಥಾನದಲ್ಲಿ ದೇವರಿಗೆ ಪೂಜೆ ಪುನಸ್ಕಾರ ಮಾಡಲು ಅನುಮತಿ ಇಲ್ಲದೆ, ದೇವರು ಅನಾಥ ವಾಗಿದೆ. ಜಾತ್ರಾ ಮಾಡುವ ಸಂದರ್ಭದಲ್ಲಿ ಟ್ರಸ್ಟ್ ಸಮಿತಿಯಿಂದ ದೇವಸ್ಥಾನಕ್ಕೆ ಸುಣ್ಣ ಬಣ್ಣ ಬಳಿದು ಹಾಗೂ ಗಿಡಗಂಟಿಗಳ ಕಡಿದು ಸ್ವಚ್ಚತೆ ಮಾಡಿಕೊಂಡು ಬರುವ ಭಕ್ತರಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದೆವು. ಆದರೆ ಮುಜರಾಯಿ ಇಲಾಖೆಗೆ ಸೇರಿದ ಮೇಲೆ ಯಾವುದೇ ನಡೆಯುತ್ತಿಲ್ಲ. ಈ ಬಾರಿ ಜಾತ್ರಾ ಮಹೋತ್ಸವ  ನಡೆಯುವ ಸಂದರ್ಭದಲ್ಲಿ ಮಂಗಳವಾದ್ಯ. ವಿದ್ಯುತ್ ಹಾಗೂ ನಾಕೈದು ಊರುಗಳಿಂದ ತೇರು ಬರುತ್ತಿದ್ದವು ಅವನನ್ನು ಒಳಗಡೆ ಬಿಡಲು ಅವಕಾಶ ನೀಡಬೇಕೆಂದು ತಿಳಿಸಿದರು.

    ಹಾಗೂ ಕಳೆದ ಒಂದು ತಿಂಗಳ ಹಿಂದೆ ದೇವಸ್ಥಾನದಲ್ಲಿ ನಿರಂತರವಾಗಿ ಪೂಜೆ ಮಾಡಿಕೊಂಡು ಬರುತ್ತಿರುವ ಪೂಜಾರಿಗೆ ನಮ್ಮ ಟ್ರಸ್ಟ್ ವತಿಯಿಂದ ಒಂದು ಕೊಠಡಿಯನ್ನು ಮಾಡಿಕೊಟ್ಟಿದ್ದೆವು. ಅದರೆ ಮುಜರಾಯಿ ಇಲಾಖೆ ಸೇರಿದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೇವಸ್ಥಾನಕ್ಕೆ ಪೂಜೆ ಮಾಡಲು ಅವಕಾಶವನ್ನು ನೀಡದೇ ಪೂಜಾರಿಯನ್ನು  ಕಳಿಸಿ ಬಿಟ್ಟಿದ್ದಾರೆ ಅದರಿಂದ ತಾವುಗಳು ಅನುಮತಿ ನೀಡಬೇಕು ಎಂದು ಈ ಭಾಗದ ಸಾರ್ವಜನಿಕರು ಹಾಗೂ ಮುಖಂಡರು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಸರಗೂರು ತಾಲೂಕು ತಹಶೀಲ್ದಾರ್ ರುಕಿಯಾ ಬೇಗಂ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಧರನೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಎ ಸಿ ಎಫ್ ಸತೀಶ್, ಧಾರ್ಮಿಕ ದತ್ತಿ ಇಲಾಖೆ ಇಓ ರಘು, ರಾಕೇಶ್ ,ಆರ್ ಎಫ್ ಓ ವಿವೇಕ್, ಅಮೃತ, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ಗೋವಿಂದ ನಾಯ್ಕ, ಕೆಇಬಿ ಎಇಇ ದೀಪಿಕ್, ಪಿಡಿಒಗಳು ಚಿನ್ನಸ್ವಾಮಿ, ಪರಮೇಶ್, ಕಂದಾಯ ಇಲಾಖೆ ಸಿಬ್ಬಂದಿಗಳು ರವಿಂದ್ರ, ಮುಜೀಬ್, ಶ್ರೀನಿವಾಸ, ಗ್ರಾಪಂ ಸದಸ್ಯರು ಗಂಗಾಧರ್, ಶಿವಕುಮಾರ್,ಮುಖಂಡರು ನಾಗೇಂದ್ರ, ಇನ್ನೂ ಮುಖಂಡರು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.