nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026
    Facebook Twitter Instagram
    ಟ್ರೆಂಡಿಂಗ್
    • ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
    • ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ: ಆ.26ರಂದು ಶ್ರೀ ಕೃಷ್ಣ ಜಯಂತಿ
    ತುಮಕೂರು August 13, 2024

    ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ: ಆ.26ರಂದು ಶ್ರೀ ಕೃಷ್ಣ ಜಯಂತಿ

    By adminAugust 13, 2024No Comments2 Mins Read
    tumakuru

    ತುಮಕೂರು:  ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಕುಳುವ ಸಮಾಜದ ಮುಖಂಡರ ಮನವಿ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಯಿತು.

    ಕಾರ್ಯಕ್ರಮಕ್ಕೆ ರಾಜ್ಯ ಸಚಿವರು ಪಾಲ್ಗೊಳ್ಳಲಿರುವುದರಿಂದ ಆಗಸ್ಟ್ 19ರಂದು ಆಚರಿಸಬೇಕಿದ್ದ ಜಿಲ್ಲಾ ಮಟ್ಟದ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ಬೆಳಿಗ್ಗೆ 11:30 ಗಂಟೆಗೆ ಆಚರಿಸಲು ಅನುವು ಮಾಡಿಕೊಡಬೇಕೆಂದು  ಕುಳುವ ಸಮಾಜ ಮುಖಂಡರೆಲ್ಲ ಒಮ್ಮತದಿಂದ ಸಭೆಗೆ ಮನವಿ ಮಾಡಿದರು.

    ಮನವಿಗೆ ಒಪ್ಪಿಗೆ ಸೂಚಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ವೃತ್ತದಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಶ್ರೀ ನುಲಿಯ ಚಂದಯ್ಯ ಅವರ  ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಬೇಕು.  ಮೆರವಣಿಗೆಯಲ್ಲಿ ಅತ್ಯುತ್ತಮ ಕಲಾ ಪ್ರದರ್ಶನ ನೀಡುವ ತಂಡಗಳನ್ನು ನಿಯೋಜಿಸಬೇಕು.  ಶ್ರೀ ನುಲಿಯ ಚಂದಯ್ಯ ಅವರ ಬಗ್ಗೆ ಉತ್ತಮ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದರು.

    ಶ್ರೀ ನುಲಿಯ ಚಂದಯ್ಯ  ಜಯಂತಿ ಕಾರ್ಯಕ್ರಮವನ್ನು ಎಲ್ಲ ತಾಲೂಕುಗಳಲ್ಲಿಯೂ ಕಡ್ಡಾಯವಾಗಿ ಆಚರಿಸಿ ಅವರ ವಚನಾಮೃತದ ಸಾರವನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ   ಸಮುದಾಯದ 5 ಮಂದಿ ಸಾಧಕರನ್ನು ಗುರುತಿಸಿ ಗೌರವಿಸಬೇಕು. ಅತೀ ಹೆಚ್ಚು ಅಂಕಗಳಿಸಿದ ಎಸ್‌ಎಸ್‌ ಎಲ್‌ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪುರಸ್ಕರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ, ಕುಳುವ ಸಮಾಜದ ವಿವಿಧ ಮುಖಂಡರು ಹಾಜರಿದ್ದರು.

    ಆ.26ರಂದು ಶ್ರೀ ಕೃಷ್ಣ ಜಯಂತಿ:

    ನಂತರ ಜರುಗಿದ ಆಗಸ್ಟ್ 26ರ  ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ  ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ಜಯಂತಿ ಕಾರ್ಯಕ್ರಮವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಯಂತಿ ಅಂಗವಾಗಿ ಆಗಸ್ಟ್ 26ರ ಬೆಳಿಗ್ಗೆ 11 ಗಂಟೆಗೆ ಟೌನ್ ಹಾಲ್ ವೃತ್ತದಿಂದ ರಂಗಮಂದಿರದವರೆಗೆ ಶ್ರೀ ಕೃಷ್ಣನ ಭಾವಚಿತ್ರ ಮೆರವಣಿಗೆ, ಮೆರವಣಿಗೆಗೆ ಕಲಾತಂಡ ನಿಯೋಜನೆ, ಮಧ್ಯಾಹ್ನ 1 ಗಂಟೆಗೆ ವೇದಿಕೆ ಕಾರ್ಯಕ್ರಮ, ಉಪನ್ಯಾಸ, ಸಮಾಜದ ಹಿರಿಯ 5 ಮಂದಿಗೆ ಸನ್ಮಾನಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

    ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಕಗ್ಗದ ಪದ, ಹೆತ್ತಪ್ಪ-ಜುಂಜಪ್ಪ ಪದ, ಕೋಲಾಟದ ಪದ, ಸೋಬಾನೆ ಪದಗಳನ್ನು ಹಾಡುವ ಕಾಡುಗೊಲ್ಲ ಕಲಾವಿದರಿಗೆ ಅವಕಾಶ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದರು.

    ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ, ಯಾದವ ಸಮಾಜದ ವಿವಿಧ ಮುಖಂಡರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

    July 24, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮನುಷ್ಯನ ಜೀವನದ ಕೊನೆಯ ದಿನಗಳಲ್ಲಿ ದೇಹ ಮತ್ತು ಮನಸ್ಸು ಕೆಲವು ವಿಶಿಷ್ಟ ಬದಲಾವಣೆಗಳಿಗೆ ಒಳಗಾಗುತ್ತದೆ. ವೈದ್ಯಕೀಯ ಅಧ್ಯಯನಗಳು ಹಾಗೂ ಪಾಲಿವೇಟಿವ್…

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.