nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಗಂಗಾ ಕ್ಷೇತ್ರ : ವೈವಿಧ್ಯಮಯ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಲು ಸೂಚನೆ
    ತುಮಕೂರು December 18, 2024

    ಶ್ರೀ ಸಿದ್ಧಗಂಗಾ ಕ್ಷೇತ್ರ : ವೈವಿಧ್ಯಮಯ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಲು ಸೂಚನೆ

    By adminDecember 18, 2024No Comments2 Mins Read
    siddaganga

    ತುಮಕೂರು: ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು.

    ಶ್ರೀ ಸಿದ್ಧಗಂಗಾ ಮಠದಲ್ಲಿ ಬುಧವಾರ ಸಂಜೆ ನಡೆದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಸ್ತುಪ್ರದರ್ಶನವು ಜಿಲ್ಲೆಯ ಸಮಗ್ರ ಚಿತ್ರಣವನ್ನು ನೀಡುವಂತಿರಬೇಕು. ಕೃಷಿ, ಅರಣ್ಯ, ತೋಟಗಾರಿಕೆ, ಆರೋಗ್ಯ, ಕೈಗಾರಿಕೆ, ಪಶುವೈದ್ಯ, ರೇಷ್ಮೆ, ಮೀನುಗಾರಿಕೆ, ಶಿಕ್ಷಣ, ಜವಳಿ ಮತ್ತು ಕೈಮಗ್ಗ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡಾ, ಪ್ರವಾಸೋದ್ಯಮ, ಕಾರ್ಮಿಕ, ವಾರ್ತಾ ಇಲಾಖೆಗಳು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳು, ಕೃಷಿಕರು, ಕೈಗಾರಿಕೋದ್ಯಮಿಗಳು, ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖೆಗಳು ನೀಡುವ ಸವಲತ್ತುಗಳ ಬಗ್ಗೆ ಜನಪರ ಮಾಹಿತಿಯನ್ನು ಈ ವಸ್ತುಪ್ರದರ್ಶನದಲ್ಲಿ ನೀಡಬೇಕು ಎಂದು ತಿಳಿಸಿದರು.


    Provided by
    Provided by

    ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, ಅನಾನುಕೂಲವಾಗದಂತೆ ಕುಡಿಯುವ ನೀರು, ರಾತ್ರಿ ವೇಳೆಯಲ್ಲಿ ಬೆಳಕಿನ ವ್ಯವಸ್ಥೆ ಸೇರಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಲ್ಲದೆ, ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಮೈದಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೋಹನ್ ಅವರಿಗೆ ಸೂಚನೆ ನೀಡಿದರು.

    ವಸ್ತುಪ್ರದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುವಂತಹ ಗಣಿತ, ವಿಜ್ಞಾನ, ಕ್ರೀಡೆಗಳನ್ನು ಏರ್ಪಡಿಸಬೇಕು. ಕೈಮಗ್ಗ ಉತ್ಪನ್ನ, ಕಲಾಕೃತಿಗಳು, ಕರಕುಶಲ ವಸ್ತುಗಳು ಮತ್ತು ದೇಶೀಯ ವಸ್ತುಗಳ ಈ ಪ್ರದರ್ಶನವು ಜಾತ್ರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಬೇಕು. ಯಶಸ್ವಿ ಕೈಗಾರಿಕೋದ್ಯಮಿಗಳು ಮತ್ತು ಮಹಿಳಾ ಉದ್ಯಮಿಗಳು ಭಾಗವಹಿಸುವಂತೆ ಉತ್ತೇಜಿಸಬೇಕು ಎಂದರಲ್ಲದೆ, ಕೃಷಿ ಕ್ಷೇತ್ರದ ತಾಂತ್ರಿಕತೆ, ಆಧುನಿಕತೆ, ವೈವಿಧ್ಯಮಯ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ಸಮಗ್ರ ಬೆಳೆ ನಿರ್ವಹಣೆ, ಕೃಷಿ ಉಪಕರಣಗಳು, ಇತ್ತೀಚಿನ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಹಾಗೂ ಕಡಿಮೆ ನೀರಿನಲ್ಲಿ ಹೆಚ್ಚಿನ ಇಳುವರಿ ಬೆಳೆಯುವ ಬೆಳೆ, ತಂತ್ರಜ್ಞಾನ ಆಧಾರಿತ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

    ವಸ್ತುಪ್ರದರ್ಶನದಲ್ಲಿ ಪ್ರತಿ ದಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆಗಳು ಕ್ರಮವಹಿಸಬೇಕೆಂದು ತಿಳಿಸಿದರಲ್ಲದೆ, ವಸ್ತುಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಮಾಹಿತಿ ನೀಡಲು ಅನುವಾಗುವಂತೆ ಇಲಾಖೆಗಳ ಮಳಿಗೆಗಳಿಗೆ ಪಾಳಿ ಆಧಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ನಿರ್ದೇಶನ ನೀಡಿದರು.

    ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ವಿವಿಧ ಇಲಾಖೆಗಳ ಅಧಿಕಾರಿಗಳು ವಸ್ತುಪ್ರದರ್ಶನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

    ಶ್ರೀ ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಟ್ರಸ್ಟ್ನ ಜಂಟಿ ಕಾರ್ಯದರ್ಶಿ ಎಸ್.ಶಿವಕುಮಾರ್ ಸ್ವಾಗತಿಸಿದರು. ಶ್ರೀ ಸಿದ್ಧಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಕಾರ್ಯದರ್ಶಿ ಡಿ. ಗಂಗಾಧರಯ್ಯ, ಜಂಟಿ ಕಾರ್ಯದರ್ಶಿ ಕೆ.ಬಿ. ರೇಣುಕಯ್ಯ, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.