nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಗಂಗಾ ಕ್ಷೇತ್ರ : ವೈವಿಧ್ಯಮಯ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಲು ಸೂಚನೆ
    ತುಮಕೂರು December 18, 2024

    ಶ್ರೀ ಸಿದ್ಧಗಂಗಾ ಕ್ಷೇತ್ರ : ವೈವಿಧ್ಯಮಯ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಲು ಸೂಚನೆ

    By adminDecember 18, 2024No Comments2 Mins Read
    siddaganga

    ತುಮಕೂರು: ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು.

    ಶ್ರೀ ಸಿದ್ಧಗಂಗಾ ಮಠದಲ್ಲಿ ಬುಧವಾರ ಸಂಜೆ ನಡೆದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಸ್ತುಪ್ರದರ್ಶನವು ಜಿಲ್ಲೆಯ ಸಮಗ್ರ ಚಿತ್ರಣವನ್ನು ನೀಡುವಂತಿರಬೇಕು. ಕೃಷಿ, ಅರಣ್ಯ, ತೋಟಗಾರಿಕೆ, ಆರೋಗ್ಯ, ಕೈಗಾರಿಕೆ, ಪಶುವೈದ್ಯ, ರೇಷ್ಮೆ, ಮೀನುಗಾರಿಕೆ, ಶಿಕ್ಷಣ, ಜವಳಿ ಮತ್ತು ಕೈಮಗ್ಗ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡಾ, ಪ್ರವಾಸೋದ್ಯಮ, ಕಾರ್ಮಿಕ, ವಾರ್ತಾ ಇಲಾಖೆಗಳು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳು, ಕೃಷಿಕರು, ಕೈಗಾರಿಕೋದ್ಯಮಿಗಳು, ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖೆಗಳು ನೀಡುವ ಸವಲತ್ತುಗಳ ಬಗ್ಗೆ ಜನಪರ ಮಾಹಿತಿಯನ್ನು ಈ ವಸ್ತುಪ್ರದರ್ಶನದಲ್ಲಿ ನೀಡಬೇಕು ಎಂದು ತಿಳಿಸಿದರು.

    ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, ಅನಾನುಕೂಲವಾಗದಂತೆ ಕುಡಿಯುವ ನೀರು, ರಾತ್ರಿ ವೇಳೆಯಲ್ಲಿ ಬೆಳಕಿನ ವ್ಯವಸ್ಥೆ ಸೇರಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಲ್ಲದೆ, ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಮೈದಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೋಹನ್ ಅವರಿಗೆ ಸೂಚನೆ ನೀಡಿದರು.

    ವಸ್ತುಪ್ರದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುವಂತಹ ಗಣಿತ, ವಿಜ್ಞಾನ, ಕ್ರೀಡೆಗಳನ್ನು ಏರ್ಪಡಿಸಬೇಕು. ಕೈಮಗ್ಗ ಉತ್ಪನ್ನ, ಕಲಾಕೃತಿಗಳು, ಕರಕುಶಲ ವಸ್ತುಗಳು ಮತ್ತು ದೇಶೀಯ ವಸ್ತುಗಳ ಈ ಪ್ರದರ್ಶನವು ಜಾತ್ರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಬೇಕು. ಯಶಸ್ವಿ ಕೈಗಾರಿಕೋದ್ಯಮಿಗಳು ಮತ್ತು ಮಹಿಳಾ ಉದ್ಯಮಿಗಳು ಭಾಗವಹಿಸುವಂತೆ ಉತ್ತೇಜಿಸಬೇಕು ಎಂದರಲ್ಲದೆ, ಕೃಷಿ ಕ್ಷೇತ್ರದ ತಾಂತ್ರಿಕತೆ, ಆಧುನಿಕತೆ, ವೈವಿಧ್ಯಮಯ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ಸಮಗ್ರ ಬೆಳೆ ನಿರ್ವಹಣೆ, ಕೃಷಿ ಉಪಕರಣಗಳು, ಇತ್ತೀಚಿನ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಹಾಗೂ ಕಡಿಮೆ ನೀರಿನಲ್ಲಿ ಹೆಚ್ಚಿನ ಇಳುವರಿ ಬೆಳೆಯುವ ಬೆಳೆ, ತಂತ್ರಜ್ಞಾನ ಆಧಾರಿತ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

    ವಸ್ತುಪ್ರದರ್ಶನದಲ್ಲಿ ಪ್ರತಿ ದಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆಗಳು ಕ್ರಮವಹಿಸಬೇಕೆಂದು ತಿಳಿಸಿದರಲ್ಲದೆ, ವಸ್ತುಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಮಾಹಿತಿ ನೀಡಲು ಅನುವಾಗುವಂತೆ ಇಲಾಖೆಗಳ ಮಳಿಗೆಗಳಿಗೆ ಪಾಳಿ ಆಧಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ನಿರ್ದೇಶನ ನೀಡಿದರು.

    ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ವಿವಿಧ ಇಲಾಖೆಗಳ ಅಧಿಕಾರಿಗಳು ವಸ್ತುಪ್ರದರ್ಶನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

    ಶ್ರೀ ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಟ್ರಸ್ಟ್ನ ಜಂಟಿ ಕಾರ್ಯದರ್ಶಿ ಎಸ್.ಶಿವಕುಮಾರ್ ಸ್ವಾಗತಿಸಿದರು. ಶ್ರೀ ಸಿದ್ಧಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಕಾರ್ಯದರ್ಶಿ ಡಿ. ಗಂಗಾಧರಯ್ಯ, ಜಂಟಿ ಕಾರ್ಯದರ್ಶಿ ಕೆ.ಬಿ. ರೇಣುಕಯ್ಯ, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.