nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025
    Facebook Twitter Instagram
    ಟ್ರೆಂಡಿಂಗ್
    • ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!
    • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
    • ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ
    • ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ
    • ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ
    • ಬಮೂಲ್​​ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್​
    • ಸರೋಜಾದೇವಿ ಎಂದ ತಕ್ಷಣ ಚೆನ್ನಮ್ಮ, ಬಬ್ರುವಾಹನ ನೆನಪಾಗುತ್ತದೆ: ಸಿಎಂ ಸಂತಾಪ
    • ಅಭಿನಯ ಸರಸ್ವತಿ ಬಿ.ಸರೋಜಾದೇವಿ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರ್ಸ್ ದಿನ, ಶಿಕ್ಷಕರ ದಿನಾಚರಣೆ: ಉತ್ತಮ ಶಿಕ್ಷಕರಿಗೆ ಪ್ರಶಸ್ತಿ
    ತುಮಕೂರು October 1, 2024

    ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರ್ಸ್ ದಿನ, ಶಿಕ್ಷಕರ ದಿನಾಚರಣೆ: ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

    By adminOctober 1, 2024No Comments2 Mins Read
    shri sidhartha

    ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನ’ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಎಸ್‌ ಎಸ್‌ ಐಟಿ ಕ್ಯಾಂಪಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್‌ ಎಮ್ ವಿಂಡ್ ಪವರ್‌ ನ ಹಿರಿಯ ಸ್ಥಾವರ ನಿರ್ದೇಶಕ ರಾಜೇಶ್ ಲೋಬೊ ಮಾತನಾಡಿ, ‘ಶಿಕ್ಷಕರ ದಿನಾಚರಣೆ ಜೊತೆಗೆ ಇಂಜಿನಿಯರ್ಸ್ ದಿನವನ್ನುಆಚರಿಸುತ್ತಿರುವುದು ಖುಷಿಯ ಸಂಗತಿ. ವಿದ್ಯಾದಾನದ ಮೂಲಕ ದೇಶಕ್ಕೆ ನಿಜವಾದ ಸೇವೆಯನ್ನು ಸಲ್ಲಿಸುತ್ತಿರುವ ಶಿಕ್ಷಕರ ದಿನವನ್ನು ದಿನಕ್ಕೆ ಮಾತ್ರ ಸೀಮಿತವಲ್ಲದೆ ಪ್ರತಿದಿನವು ಶಿಕ್ಷಕರ ದಿನವೆಂದು ಭಾವಿಸಬೇಕು ಎಂದರು.


    Provided by
    Provided by

    ವಿಶ್ವೇಶ್ವರಯ್ಯನವರ ಇಂಜಿನಿಯರ್ ಆಗಿ ನಾಡಿಗೆ ಕೊಟ್ಟ ಕೊಡುಗೆ ಅಪಾರ. ಕೆಆರ್‌ಎಸ್ ಅಣೆಕಟ್ಟು ಕಟ್ಟುವುದರ ಮೂಲಕ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿದ್ದಾರೆ. ಇಂತಹ ಮಹನೀಯ ರೀತಿಯಲ್ಲಿ ನಮ್ಮ ನಾಡಿಗೆ ನಾವು ಕೊಡುಗೆ ನೀಡುವ ಕೆಲಸ ನಿರ್ವಹಿಸಬೇಕಿದೆ ಎಂದು ರಾಜೇಶ್ ಲೋಬೊ ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಮಾತನಾಡಿದ ಸಾಹೇ ಉಪಕುಲಪತಿ ಡಾ.ಕೆ.ಬಿ ಲಿಂಗೇಗೌಡ ಅವರು, ಶಿಕ್ಷಕ ವೃತ್ತಿ ಎಂಬುದು ಮೌಲ್ಯಯುತವಾದುದ್ದು, ಮುಂದಿನ ದಿನಗಳಲ್ಲಿ ಅದರ ಮಹತ್ವ ಇನ್ನು ಹೆಚ್ಚಾಗಲಿದೆ. ಸಮಾಜದಲ್ಲಿ ಶಿಕ್ಷಕರನ್ನು ಉತ್ತಮ ವ್ಯಕ್ತಿಗಳಾಗಿ ಗುರುತಿಸುತ್ತೇವೆ. ಹಾಗೇಯೇ ಇಂಜಿನಿಯರ್ಸ್  ದಿನದದಂದು ವಿಶ್ವೇಶ್ವೇರಯ್ಯನವರನ್ನು ನೆನಪುಮಾಡಿಕೊಳ್ಳಬೇಕು. ಅವರ ಕೊಡುಗೆ ನಮ್ಮ ನಾಡಿಗೆ ಅಪಾರವಾದದ್ದು ಎಂದು ನುಡಿದರು.

    ಇನ್ನೋರ್ವ ಅತಿಥಿಯಾದ ಶಿಕ್ಷಕ ಟಿ.ಎಸ್.ರವಿಶಂಕರ್ ಮಾತನಾಡಿ, ಸರ್ವಪಲ್ಲಿ ರಾಧಕೃಷ್ಣನ್ ಮತ್ತು ವಿಶ್ವೇಶ್ವರಯ್ಯ ಅವರಂತ ಮೇಧಾವಿಗಳ ಸ್ಮರಿಸುವುದು ಇಂದಿನ ಅಗತ್ಯವಾಗಿದೆ. ಶಿಕ್ಷಕರು ಹೆಚ್ಚು ಬುದ್ಧಿಶಕ್ತಿಯನ್ನು ಹೆಚ್ಚು ಬಳಸಿದರೆ ಇನ್ನುಷ್ಟು ಸಂಶೋಧನೆಗಳು ಆಗಬಹುದು. ತಂತ್ರಜ್ಞಾನದ ಜೊತೆಗೆ ಜಗತ್ತು ಕೂಡ ಅತಿ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಹಾಗಾಗಿ ಮಕ್ಕಳಿಗೆ ಹೊಸ ಹೊಸ ವಿಷಯವನ್ನು ತಿಳಿಸುವುದು ಸೂಕ್ತ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ಐಎಸ್‌ ಟಿಇ ವಿಭಾಗದ ವತಿಯಿಂದ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಪ್ರಾಧ್ಯಾಪಕರಾದ ಪ್ರೊ. ಸುನಿಲ್ ಮತ್ತು ಪ್ರೊ. ಜಯಪ್ರಕಾಶ್ ಅವರನ್ನು ಗುರುತಿಸಿ `ಉತ್ತಮ ಶಿಕ್ಷಕ’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶ್ರೀ ಸಿದ್ಧಾರ್ಥ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಮ್. ಎಸ್ ರವಿಪ್ರಕಾಶ್ ಮಾತನಾಡಿದರು. ಸಾಹೇ ವಿವಿ ರಿಜಿಸ್ಟ್ರಾರ್ ಡಾ.ಎಂ.ಝಡ್. ಕುರಿಯನ್, ಡೀನ್ ಡಾ.ರೇಣುಕಲತಾ ಎಸ್, ಐಎಸ್‌ ಟಿಇ ವಿಭಾಗದ ಕಾರ್ಯದರ್ಶಿ ಡಾ.ಪುನಿತ್ ಕುಮಾರ್, ಖಚಾಂಚಿ ಡಾ. ಶೋಭ ಸೇರಿದಂತೆ ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಕಿ ಡಾ. ರಶ್ಮಿ ಎಚ್ ಸಿ ಕಾರ್ಯಕ್ರಮ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    July 11, 2025

    ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ: ಮಾಜಿ ಸಚಿವ ಹೇಳಿಕೆ

    July 9, 2025
    Our Picks

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ…

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.