ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಹೊಸಹಳ್ಳಿಯ ಶ್ರೀ ಬೀರಲಿಂಗೇಶ್ವರ ಸ್ವಾಮಿಯವರ ನೂತನ ದೇವಾಲಯ ಪ್ರವೇಶ ಮತ್ತು ಗೋಪುರದ ಕಳಶ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಧಾರ್ಮಿಕ ಸಮಾರಂಭ ಫೆಬ್ರವರಿ 28ರಿಂದ ಮಾರ್ಚ್ 1ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಪಂ ಸದಸ್ಯ ಹೆಚ್.ಎಸ್. ವಿಶ್ವನಾಥ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ, ಪತ್ರಿಕಾಗೋಷ್ಠಿಯಲ್ಲಿ ಕುರಿತು ಮಾತನಾಡಿದ ವಿಶ್ವನಾಥ್, ಕೆರಗೋಡಿ-ರಂಗಪುರ ಸುಕ್ಷೇತ್ರಾ ಧ್ಯಕ್ಷರಾದ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿರವರು, ಕನಕ ಗುರು ಪೀಠ ಕಾಗಿನೆಲೆ ಶ್ರೀ ಗುರು ರೇವಣಸಿದ್ದೇಶ್ವರ ಸಿಂಹಾಸನ ನಿರಂಜನಂದ ಪುರಿ ಮಹಾಸ್ವಾಮೀಜಿಯವರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಕೃಪಾಶೀರ್ವಾದದೊಂದಿಗೆ ಕಾರ್ಯಕ್ರಮ ನೆರವೇರಲಿದೆ ಎಂದರು.
ಧಾರ್ಮಿಕ ಸಮಾರಂಭದಲ್ಲಿ ಸಚಿವರು, ಮಾಜಿ ಸಚಿವರು, ಶಾಸಕರು ಚುನಾಯಿತ ಜನಪ್ರತಿನಿಧಿಗಳು, ಜನಾಂಗದ ಮುಖಂಡರುಗಳು ವಿವಿಧ ಪಕ್ಷದ ಮುಖಂಡರುಗಳು,ನೌಕರವರ್ಗ ಸೇರಿದಂತೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಲಿದ್ದು, ಮೂರು ದಿನಗಳ ಕಾಲ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದೇವಾಲಯದ ಗೌರವಾಧ್ಯಕ್ಷರಾದ ನಿವೃತ್ತ ಪ್ರಾಂಶುಪಾಲ ಹೆಚ್.ಎಸ್. ಶಂಕರಲಿಂಗಯ್ಯ,ಗುಡಿಗೌಡ ಶಿವಲಿಂಗಪ್ಪ,ಗ್ರಾಮಸ್ಥರಾದ ಪಾಲಾಕ್ಷ ಮತ್ತು ಶಿವಶಂಕ್ರಪ್ಪ ಸೇರಿದಂತೆ ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA