nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೂಟ್‌ ಕೇಸ್‌ ತುಂಬಿಕೊಂಡು ಶ್ರೀಲಂಕಾ ತೊರೆದ್ರಾ ಅಧ್ಯಕ್ಷ ಗೋತಬಯ ರಾಜಪಕ್ಸೆ..?
    ಸ್ಪೆಷಲ್ ನ್ಯೂಸ್ July 10, 2022

    ಸೂಟ್‌ ಕೇಸ್‌ ತುಂಬಿಕೊಂಡು ಶ್ರೀಲಂಕಾ ತೊರೆದ್ರಾ ಅಧ್ಯಕ್ಷ ಗೋತಬಯ ರಾಜಪಕ್ಸೆ..?

    By adminJuly 10, 2022No Comments1 Min Read
    rajapakse

    ಕೊಲೊಂಬೋ: ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಅವರ ನಿವಾಸಕ್ಕೆ ನುಗ್ಗಿದ ಬೆನ್ನಲ್ಲೇ ಈಗ ಅವರು ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದಾರೆ.

    ಗೋತಬಯ ರಾಜಪಕ್ಸೆ ಈಗಾಗಲೇ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಘೋಷಿಸುವುದಾಗಿ ಹೇಳಿರುವ ಬೆನ್ನಲ್ಲೇ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ,ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ ಈ ಸೂಟ್ ಕೇಸ್ ಗಳೆಲ್ಲವೂ ಕೂಡ ಅಧ್ಯಕ್ಷ ರಾಜಪಕ್ಸೆ ಅವರಿಗೆ ಸೇರಿದ್ದು ಎನ್ನಲಾಗಿದೆ.


    Provided by
    Provided by

    ವೈರಲ್ ಆಗಿರುವ ವಿಡಿಯೋಗಳಲ್ಲಿ ಎಸ್‌ಎಲ್‌ಎನ್‌ಎಸ್ ಗಜಬಾಹು ಹಡಗಿನಲ್ಲಿ ಮೂವರು ವ್ಯಕ್ತಿಗಳು ಬೃಹದಾಕಾರದ ಸೂಟ್‌ಕೇಸ್‌ಗಳನ್ನು ಹೊತ್ತೊಯ್ಯುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದಾಗಿದೆ.ಈ ಮೂವರು ವ್ಯಕ್ತಿಗಳು ಅವಸರದಲ್ಲಿ ಸೂಟ್ ಕೇಸ್ ಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ನ್ಯೂಸ್ 1 ಚಾನೆಲ್ ವರದಿ ಮಾಡಿದೆ. ಅಷ್ಟೇ ಅಲ್ಲದೆ ಈ ಹಡಗುಗಳನ್ನು ಹತ್ತಿದವರ ಬಗ್ಗೆ ವಿವರ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ ಎಂದು ಈ ಚಾನೆಲ್ ವರದಿ ಮಾಡಿದೆ.

    ಕಳೆದ ರಾತ್ರಿ ಅಧ್ಯಕ್ಷ ರಾಜಪಕ್ಷೆ ಅವರನ್ನು ಸೇನಾ ಪ್ರಧಾನ ಕಛೇರಿಗೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲವೊಂದು ತಿಳಿಸಿದೆ.ಇಂದು ಶ್ರೀಲಂಕಾದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧ್ಯಕ್ಷರಿಗೆ ಸೇರಿದ ವಾಹನದ ಬೆಂಗಾವಲು ಪಡೆ ಹಾಜರಾಗಿತ್ತು, ಆದರೆ ಅವರು ಶ್ರೀಲಂಕಾ ದೇಶವನ್ನು ತೊರೆದಿದ್ದಾರೆಯೇ ಎನ್ನುವುದರ ಬಗ್ಗೆ ಯಾವುದೇ ಖಚಿತತೆ ಇಲ್ಲ ಎನ್ನಲಾಗಿದೆ.

    ಸದ್ಯ ರಾಜಪಕ್ಸೆ ಪ್ರಸ್ತುತ ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ ಮತ್ತು ಆದರೆ ಪ್ರತಿಭಟನಾಕಾರರು ಮಾತ್ರ ಈಗ ಅವರ ಕಚೇರಿ ಮತ್ತು ಅಧಿಕೃತ ನಿವಾಸ ಎರಡನ್ನೂ ಆಕ್ರಮಿಸಿಕೊಂಡಿದ್ದಾರೆ.

    ಶ್ರೀಲಂಕಾ ದೇಶವು ಇದೆ ಮೊದಲ ಬಾರಿಗೆ ತೀವ್ರ ಆರ್ಥಿಕ ಕುಸಿತವನ್ನು ಕಂಡಿದ್ದು, ಆರ್ಥಿಕ ಸಹಾಯಕ್ಕಾಗಿ ಈಗ ಅದು ಭಾರತ,ಚೀನಾ ಹಾಗೂ ವಿಶ್ವಬ್ಯಾಂಕ್ ಗಳಿಗೆ ಆರ್ಥಿಕ ನೆರವಿಗಾಗಿ ಮನವಿ ಮಾಡಿದೆ.ಈಗ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಆಮದಿನ ಪಾವತಿಗಾಗಿ ಹೆಣಗಾಡುತ್ತಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಹಾಗೂ ಹವಾಮಾನ ಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು…

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.