nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    ಜಿಲ್ಲಾ ಸುದ್ದಿ March 11, 2026

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    By adminMarch 11, 2026No Comments3 Mins Read

    ವಿಜಯಪುರ: ಇದೇ ಮಾರ್ಚ್ 18 ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಸೂಚನೆ ನೀಡಿದರು.

    ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಜಿಲ್ಲಾ ಮಟ್ಟದ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಹಾಗೂ ನಿರ್ವಹಣೆ ಕುರಿತ ಸಲಹೆ ನೀಡಿದರು.


    Provided by
    Provided by

    ಸಿಸಿಟಿವಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ತನ್ಮೂಲಕ  ಪರೀಕ್ಷೆಯ ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದರು.

    ಬಿಇಒ,  ತಹಶೀಲ್ದಾರ್ ಅವರು ತಾಲೂಕಿನಲ್ಲಿ ಸಭೆ ನಡೆಸಿ ಅಗತ್ಯ ಸೂಚನೆ ನೀಡಬೇಕು. ಮೈಕ್ರೊ ಪ್ಲ್ಯಾನಿಂಗ್ ಮಾಡಿಕೊಳ್ಳಬೇಕು ಪರೀಕ್ಷಾ ಪ್ರಕ್ರಿಯೆಯಲ್ಲಿ ಲೋಪ-ದೋಷಗಳಾಗಬಾರದು.‌ ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು ಎಂದರು.

    ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದೂ ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.   ಯಾವುದೇ ತಾಂತ್ರಿಕ ಸಮಸ್ಯೆಗಳು ಉದ್ಭವಿಸದಂತೆ ಪರಿಹಾರ ಸೌಲಭ್ಯ ಕಲ್ಪಿಸಿರುವುದನ್ನು ಮೇಲಾಧಿಕಾರಿಗಳು ಮುಂಚೆಯೇ ಖಚಿತ ಪಡಿಸಿಕೊಳ್ಳಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಪೂರೈಕೆಯಾಗುವ ನಿಟ್ಟಿನಲ್ಲಿ ಕ್ರಮವಹಿಸಬೇಕು.ಯಾವುದೇ ಗೊಂದಲಕ್ಕೆ ಒಳಗಾಗದೇ ಕಾರ್ಯನಿರ್ವಹಿಸಬೇಕು ಎಂದರು.

    ಪಾರದರ್ಶಕವಾಗಿ ಪರೀಕ್ಷೆ ನಡೆಸುವ ಹಿತದೃಷ್ಟಿಯಿಂದ ಮುಂಜಾಗ್ರತಾ  ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮಿ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗುವುದು. ತುರ್ತು ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಜಿಲ್ಲಾ ಪಂಚಾಯತಿಯ ಮುಖ್ಯ‌ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರ ಕಾರ್ಯ ಗುರುತರವಾಗಿದೆ. ನಮ್ಮ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ  ನಿಯೋಜಿತ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಹೊಣೆಗಾರಿಕೆಯಿಂದ  ಕಾರ್ಯನಿರ್ವಹಿಸಬೇಕು ಎಂದರು.

    ಪರೀಕ್ಷೆ ನಿಯಮಗಳನ್ವಯ ಕಾರ್ಯ ನಿರ್ವಹಿಸಿ, ತಮ್ಮ ನಿಯೋಜಿತ ಪರೀಕ್ಷಾ ಕೇಂದ್ರಗಳಲ್ಲಿ ಮಾಡಿಕೊಂಡಿರುವ ಪೂರ್ವ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಬೇಕು. ಮುಂಚೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಯಾವುದೇ ಸೌಲಭ್ಯಗಳಿಲ್ಲ ಎಂಬ ದೂರುಗಳು ಬಾರದಂತೆ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

    ಪರೀಕ್ಷೆ ಆರಂಭಗೊಳ್ಳಲಿಕ್ಕೆ‌ಇನ್ನೂ ಸಾಕಷ್ಟು ಸಮಯವಿದೆ. ಹಾಗಾಗಿ‌ ಪರೀಕ್ಷೆಗೆ ಮುನ್ನವೇ ಯಾವುದೇ ತಾಂತ್ರಿಕ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.‌ ಕೊಠಡಿಯಲ್ಲಿ ವಿದ್ಯುತ್,  ಸಿಸಿಟಿವಿ ವ್ಯವಸ್ಥೆ, ಶೌಚಾಲಯ, ಸಾಕಷ್ಟು ಕುಡಿಯುವ ನೀರು ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದರು.

    ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಕಲ್ಪಿಸಿರುವ ವ್ಯವಸ್ಥೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಯಾವುದೇ ಸಮಸ್ಯೆಗಳು ಉದ್ಭವವಾದಲ್ಲಿ ತಕ್ಷಣಕ್ಕೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕು. ಪರೀಕ್ಷಾ ಮಾರ್ಗ ಸೂಚಿಗಳಂತೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಈ ವಿಷಯದಲ್ಲಿ ಆಯಾ‌ ಬಿಇಒಗಳು ಜವಾಬ್ದಾರಿ ಮಹತ್ತರವಾಗಿದ್ದು, ಕುಂಟು ನೆಪ ಹೇಳದೇ ಪಾರದರ್ಶಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

    ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ ಮಾತನಾಡಿ, ಎಸ್ ಎಸ್ ಎಲ್‌ಸಿ‌  ಪರೀಕ್ಷೆ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ‌ 137  ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ‌ಕಲ್ಪಿಸಲಾಗುವುದು ಎಂದರು.

    ಜಮಖಂಡಿಯ ಸರ್ಕಾರಿ ಶಿಕ್ಷಕರ ಶಿಕ್ಷಣ  ಮಹಾವಿದ್ಯಾಲಯದ ಪ್ರಾಚಾರ್ಯರು ಆದ ಜಿಲ್ಲಾ ನೋಡಲ್ ಅಧಿಕಾರಿಗಳಾದ ಮಂಗಳಾ ನಾಯಕ ಮಾತನಾಡಿ,  ಜೂನ್ ತಿಂಗಳಿಂದಲೇ ಪರೀಕ್ಷಾ ಸಿದ್ದತೆ ನಡೆದಿದೆ. ಹಾಗಾಗಿ ಎಲ್ಲರೂ‌  ಪಾರದರ್ಶಕ ಪರೀಕ್ಷೆಗೆ ಸಹಕರಿಸಬೇಕು ಎಂದರು. ಪ್ರಶ್ನೆ ಪತ್ರಿಕೆಯನ್ನು ನಿಗದಿತ ವೇಳೆಗೆ ವಿತರಿಸುವಂತೆ ನೋಡಿಕೊಳ್ಳುವುದು

    ಪರೀಕ್ಷಾ ಮುಖ್ಯಸ್ಥರು ಜವಾಬ್ದಾರಿಯಾಗಿದೆ ಎಂದರು. ಪರೀಕ್ಷೆ ಸಂಬಂಧಿಸದೇ ಇರುವವರು ಪರೀಕ್ಷಾ ಕೇಂದ್ರದಲ್ಲಿ ತೆರಳದಂತೆ ನೋಡಿಕೊಳ್ಳಬೇಕು. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಶಿಸ್ತುಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.

    ಶಾಲಾ ಶಿಕ್ಷಣ ಮತ್ತು‌ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ ಮಾತನಾಡಿ, ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 42,450 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. 137 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಭೆಗೆ ವಿವರಿಸಿದರು.

    ಈ ಸಂದರ್ಭದಲ್ಲಿ  ಡೈಟ್‌ ಪ್ರಾಚಾರ್ಯರಾದ ಉಮಾದೇವಿ ಸೊನ್ನದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಅಧಿಕಾರಿ ರಾಹುಲ್ ಭಾವಿದೊಡ್ಡಿ, ವಿಷಯ ಪರಿವೀಕ್ಷಕ ಶಿವಾನಂದ ಬ್ಯಾಹಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪರೀಕ್ಷೆಗೆ ನಿಯೋಜಿತ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ತುಮಕೂರು: ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ…

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.