ತುಮಕೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್.ಎಸ್.ಎಲ್.ಸಿ. ಪರೀಕ್ಷೆ–2ನ್ನು ಮೇ 26 ರಿಂದ ಜೂನ್ 2ರವರೆಗೆ ನಡೆಸಲು ವೇಳಾ ಪಟ್ಟಿಯನ್ನು ಪ್ರಕಟಿಸಿದೆ.
ಜಿಲ್ಲೆಯಲ್ಲಿ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ–1ರಲ್ಲಿ ತುಮಕೂರಿನ 6,929 ಹಾಗೂ ಮಧುಗಿರಿಯ 4715 ಸೇರಿ 11,644 ವಿದ್ಯಾರ್ಥಿಗಳು ಉತ್ತೀರ್ಣ ಅಂಕಗಳನ್ನು ಪಡೆದಿರುವುದಿಲ್ಲ. ಉತ್ತೀರ್ಣ ಅಂಕಗಳನ್ನು ಪಡೆಯದಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ–2ಕ್ಕೆ ನೋಂದಾಯಿಸಲು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ.
ಉತ್ತೀರ್ಣ ಅಂಕಗಳನ್ನು ಪಡೆಯದಿರುವ ವಿದ್ಯಾರ್ಥಿಗಳು ಮೇ 10ರೊಳಗಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಈವರೆಗೂ ತುಮಕೂರಿನ 6,251 ಹಾಗೂ ಮಧುಗಿರಿಯ 4064 ಸೇರಿ 10,315 ವಿದ್ಯಾರ್ಥಿಗಳು ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಉಳಿದ 1,329 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಳ್ಳುವಂತೆ ಪೋಷಕರಿಗೆ ಮನವರಿಕೆ ಮಾಡುವಂತೆ ಶಾಲಾ ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು. ಅಲ್ಲದೆ ಪರೀಕ್ಷೆ 1ರ ಫಲಿತಾಂಶದಲ್ಲಿ ಉತ್ತಮಿಕೆಗೆ ಅವಕಾಶವಿರುವುದರಿಂದ ಆಸಕ್ತ ವಿದ್ಯಾರ್ಥಿಗಳು ಸಹ ಉತ್ತಮಿಕೆಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————