ತುಮಕೂರು: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ಟಾಪರ್ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ ಇಬ್ಬರು ವಿದ್ಯಾರ್ಥಿ ಗಳು ಸೇರಿದ್ದಾರೆ.
ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಿಂದ ತಲಾ ಒಬ್ಬರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ತುಮಕೂರಿನ ಚೇತನ ವಿದ್ಯಾ ಮಂದಿರ ಶಾಲೆಯ ಮಹಮದ್ ಮಸ್ತೂರ್ ಅದಿಲ್ 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿದ್ದಾರೆ. ಇವರು ಮನ್ಸೂರ್ ಆದಿಲ್ ಹಾಗೂ ಅಫ್ರೋಜ್ ಜಹಾನ್ ದಂಪತಿಯ ಪುತ್ರರಾಗಿದ್ದಾರೆ.
ಯಶ್ವಿತಾ ರೆಡ್ಡಿ :
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲೂ ರಾಜ್ಯದಲ್ಲೆ ವಿದ್ಯಾರ್ಥಿನಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಧುಗಿರಿಯ ಚಿರಾಕ್ ಪಬ್ಲಿಕ್ ಶಾಲೆಯ ಯಶ್ವಿತಾ ರೆಡ್ಡಿ ಕೆ.ಬಿ. ರಾಜ್ಯ ಟಾಪರ್ ಲಿಸ್ಟ್ ನಲ್ಲಿ 21 ನೇ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಕೆ.ವಿ.ಬಾಬು ರೆಡ್ಡಿ ಹಾಗೂ ಸಂದ್ಯಾ ರೆಡ್ಡಿ ಪುತ್ರಿಯಾಗಿದ್ದಾರೆ.
ಇಬ್ಬರು ವಿದ್ಯಾರ್ಥಿಗಳು ಕೂಡ 625 ಕ್ಕೆ 625 ಅಂಕಗಳಿಸಿ ರಾಜ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ತುಮಕೂರು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತುಮಕೂರು ಶೈಕ್ಷಣಿಕ ಜಿಲ್ಲೆ ಶೇ 67.03 ಗಳಿಸಿ 20 ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಭಾರಿ ತುಮಕೂರು ಜಿಲ್ಲೆ 16 ನೇ ಸ್ಥಾನದಲ್ಲಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW