ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಮುದ್ದೇನೇರಳೆಕೆರೆ ಗ್ರಾಮದಲ್ಲಿ ಎನ್.ಗಂಗಪ್ಪ ಎಜುಕೇಶನಲ್ ಅಂಡ್ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ವತಿಯಿಂದ 2021-22 ನೇ ಶೈಕ್ಷಣೀಕ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ಅತ್ಯುತ್ತಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನಿವೃತ್ತ ಅಪರ ಕೃಷಿ ನಿರ್ದೇಶಕರಾದ ಎನ್ ಗಂಗಪ್ಪ, ವಿದ್ಯಾರ್ಥಿಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡದೇ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಬೇಕು ಎಂದರು.
ವಿದ್ಯಾರ್ಥಿಗಳ ಬೆನ್ನು ತಟ್ಟುವ ಕಾರ್ಯವನ್ನು ಸಂಘಸಂಸ್ಥೆಗಳು ಮಾಡಿದಾಗ ವಿದ್ಯಾರ್ಥಿಗಳಿಗೆ ಸಾಧನೆ ಮಾಡುವಲ್ಲಿ ಶಕ್ತಿದಾಯಕವಾಗಿ ಬೆಳೆಯುತ್ತದೆ ಎಂದರು. ಮಾತ್ರವಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲೂ ಬೆಳೆಯುತ್ತಿದ್ದು, ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿ ಇರುತ್ತದೆ ಎಂದರು.
ಸೊಸೈಟಿಯ ಕಾರ್ಯದರ್ಶಿ ತಿಪ್ಪೇಸ್ವಾಮಿ ಎಂ.ಕೆ. ಮಾತನಾಡಿ, ಶಿಕ್ಷಣದ ಹಾದಿಯಲ್ಲಿ ವಿದ್ಯಾರ್ಥಿಗಳು ಮೇರು ಶಿಖರ ಮುಟ್ಟಬೇಕು. ವಿದ್ಯಾರ್ಥಿಗಳಲ್ಲಿ ಅದಮ್ಯ ಶಕ್ತಿಯಿದ್ದ ಪ್ರತಿಭೆಗಳು ಪ್ರತಿಮೆಗಳಾಗಿ ಹೊರಹೊಮ್ಮಬೇಕು ಪೋಷಕರು ಉತ್ತಮ ಪೋಷಣೆ ಕೊಟ್ಟಾಗ ವಿದ್ಯಾರ್ಥಿಗಳು ಹೆಮ್ಮರವಾಗಿ ಬೆಳೆಯುತ್ತಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಡಾ.ಚಂದ್ರಶೇಖರ್ ರವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ, ನಾರಯಣಮೂರ್ತಿ, ಅನಂತರಾಜು, ವೀರನಾಗಪ್ಪ, ಉಪಾಧ್ಯಕ್ಷರಾದ ಮಂಜುನಾಥ, ಶಿಕ್ಷಕರಾದ ಹನುಮಂತರಾಯಪ್ಪ, ಮೋಹನ್ ಕುಮಾರ್ ಹಾಗೂ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ: ತಿಪ್ಪೇಸ್ವಾಮಿ ಎಂ.ಕೆ., ಮುದ್ದೇನೆರಳೆಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5