ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿರುವ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸದ್ಯ, ಜಿಲ್ಲಾಧಿಕಾರಿ ಜಗದೀಶ್ ನೀಡಿದ್ದ ನೋಟಿಸ್ಗೆ ಸಂಬಂಧಿಸಿದಂತೆ ಅವರು ತನಿಖೆಗೆ ಹಾಜರಾಗಿ ಪ್ರಶ್ನೆ ಗೆ ಉತ್ತರ ನೀಡಿ ಅವರು ತೆರಳಿದಿದ್ದಾರೆ.
ಜಿಲ್ಲಾಧಿಕಾರಿಗಳು ಬಿ ದಯಾನಂದ ಅವರಿಗೆ, ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿಮಗೆ ಮಾಹಿತಿ ನೀಡಿದ್ದಾರಾ?. ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಬರುತ್ತಾರೆ ಎಂದು ನಿರೀಕ್ಷೆ ಇತ್ತಾ? ಒಂದು ವೇಳೆ ನಿರೀಕ್ಷೆ ಇಟ್ಟಿದ್ದಾರೆ ಯಾಕೆ ನೀವು ಸರಿಯಾದ ರೀತಿ ಬಂದೋಬಸ್ ಮಾಡಲಿಲ್ಲ?. ನೀವು ಆರ್ ಸಿಬಿ ತಂಡಕ್ಕೆ ಅಥವಾ ಡಿಎನ್ ಎ ತಂಡಕ್ಕೆ ನೋಟಿಸ್ ನೀಡಿದ್ದೀರಾ?. ನಿಮಗೆ ಸಾವಿನ ಬಗ್ಗೆ ಯಾವಾಗ ತಿಳಿಯಿತು? ಎಂದೆಲ್ಲಾ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಮುಂದುವರೆದು ಮಧ್ಯಾಹ್ನ 3 ಗಂಟೆಗೆ ಸಂಭ್ರಮಾಚರಣೆ ಆಯೋಜನೆ ಮಾಡಲಾಗಿತ್ತು. ಆದ್ರೆ, ಬೆಳಗ್ಗೆ ಯಾಕೆ ಬಂದೋಬಸ್ತ್ ಮಾಡಲು ತಡವಾಯಿತು ಎಂದು ಕೂಡ ಪ್ರಶ್ನಿಸಿದ್ದಾರೆ. ಸದ್ಯ ತನಿಖಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಉತ್ತರ ನೀಡಿ ವಾಪಾಸ್ ತೆರಳಿದ್ದಾರೆ. ಈ ವೇಳೆ ಯಾವುದೇ ರೀತಿಯ ಮಾಧ್ಯಮದವರಿಗೆ ಹೇಳಿಕೆ ನೀಡದೆ ಕಾರಿನಲ್ಲಿ ಮಾಜಿ ಪೊಲೀಸ್ ಆಯುಕ್ತ ದಯಾನಂದ್ ಅವರು ತೆರಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW