nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025
    Facebook Twitter Instagram
    ಟ್ರೆಂಡಿಂಗ್
    • ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ
    • ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ
    • ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು
    • ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು
    • ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನ ಬಂಧನ: ಆಟೋ ವಶ
    • ಮಹಿಳೆಯ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
    • ಸಿಎಂ ನಿವಾಸದ ಮುಂಭಾಗದಲ್ಲೇ ಧರೆಗುರುಳಿದ ಮರ: ವಾಹನಗಳಿಗೆ ಹಾನಿ
    • ಬೆಂಗಳೂರು ಮೆಟ್ರೋದಲ್ಲಿ ನಂದಿನಿ ಬದಲು ಗುಜರಾತ್ ನ ಅಮುಲ್ ಗೆ ಜಾಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ಹೊಣೆಗೇಡಿತನ:  ಬಿಜೆಪಿಯಿಂದ ಪ್ರತಿಭಟನೆ
    ತುಮಕೂರು June 6, 2025

    ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ಹೊಣೆಗೇಡಿತನ:  ಬಿಜೆಪಿಯಿಂದ ಪ್ರತಿಭಟನೆ

    By adminJune 6, 2025No Comments2 Mins Read
    bjp

    ತುಮಕೂರು:   ಬೆಂಗಳೂರಿನಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಸರ್ಕಾರ ಹೊಣೆಗೇಡಿತನದಿಂದ  ನಡೆದುಕೊಂಡಿದೆ ಎಂದು  ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

    ನಗರದ ಟೌನ್ ಹಾಲ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ನೇತೃತ್ವದಲ್ಲಿ  ಜಮಾಯಿಸಿದ ಬಿಜೆಪಿ ಪಕ್ಷದ ಕಾರ್ಯಕರ್ತರು, ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಅಧಿಕಾರಿಗಳನ್ನು ಅಮಾನತು ಮಾಡುವಂತಹ ನಿರ್ಧಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.


    Provided by

    ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಆರ್‌ ಸಿಬಿ ವಿಜಯೋತ್ಸವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದರೂ ಅದನ್ನು ಲೆಕ್ಕಿಸದೆ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ದುರಂತಕ್ಕೆ ಕಾರಣವಾಗಿದೆ ಎಂದು ದೂರಿದರು.

    ಸಿಎಂ ಭಾವಚಿತ್ರಕ್ಕೆ ಬೆಂಕಿ:

    ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ 11 ಮಂದಿ RCB ಅಭಿಮಾನಿಗಳು ಮೃತಪಟ್ಟ ಘಟನೆಗೆ  ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

    ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಭಾವಚಿತ್ರಗಳಿಗೆ ಬೆಂಕಿ ಇಟ್ಟರು.   RCB ವಿಜಯೋತ್ಸವದ ಸಂದರ್ಭದಲ್ಲಿ ಗುಪ್ತಚರ ಇಲಾಖೆ ವರದಿ ಇದ್ದರೂ ಕೂಡ ಅದಕ್ಕೆ ಪೂರಕವಾಗಿ ಭದ್ರತೆ ಕೈಗೊಳ್ಳದೆ, ಸರ್ಕಾರ ನಿರ್ಲಕ್ಷ ವಹಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾ ಕರವಿ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಬಳಿ ಕಾರ್ಯಕ್ರಮ ಮಾಡುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಾಗಿಲು ಹಾಕಿದ್ದರು. ಆ ವೇಳೆ ಬಾಗಿಲು ತೆಗೆದಿದ್ದರೆ ಅಭಿಮಾನಿಗಳು ಕ್ರೀಡಾಂಗಣದ ಒಳಗೆ ಹೋಗಿರುತ್ತಿದ್ದರು ಆಗ ಈ ರೀತಿಯಾದ ಘಟನೆ ನಡೆಯುತ್ತಿರಲಿಲ್ಲ ಎಂದರು.

    ಇದೊಂದು ದುರಾದೃಷ್ಟ ಕರವಾದ ಘಟನೆ ಭಾರತೀಯ ಜನತಾ ಪಕ್ಷ ಇದನ್ನು ಅತಿ ಉಗ್ರವಾಗಿ ಖಂಡಿಸುತ್ತದೆ ಎಂದರು.

    ಮುಖ್ಯವಾಗಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು, ಉಪಮುಖ್ಯಮಂತ್ರಿಗಳು ಇದರ ಹೊಣೆ ಹೊರಬೇಕಿದ್ದು ಅವರು ತಕ್ಷಣ ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಬೇಕಿದೆ ಎಂದು ಆಗ್ರಹಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025

    ಜೆಡಿಎಸ್ ನ ಮಿಸ್ಡ್ ಕಾಲ್ ಅಭಿಯಾನದಲ್ಲಿ ಉತ್ಸಾಹದಿಂದ ಯುವಕರು ಪಾಲ್ಗೊಳ್ಳುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    June 17, 2025
    Our Picks

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೆಳಗಾವಿ: ಬಸ್ ಗಳಲ್ಲಿ ಪ್ರಯಾಣದ ವೇಳೆ ಕಿಟಕಿ ಸೀಟ್ ಬಳಿ ಕುಳಿತುಕೊಳ್ಳುವುದು ಎಲ್ಲರಿಗೂ ಇಷ್ಟವಾದ ವಿಚಾರ, ಇಲ್ಲೊಂದು ಕಡೆ ಕಿಟಕಿ…

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.