nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    ತುಮಕೂರು May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    By adminMay 13, 2026No Comments2 Mins Read
    tumakuru

    ತುಮಕೂರು: ರಾಜ್ಯ ಸರ್ಕಾರ 3 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ ಆಯೋಜಿಸಿದ್ದು, ಇದು ಕೇವಲ ಸಾಧನೆಯ ಸಂಭ್ರಮವಲ್ಲ ಕಳೆದ 3 ವರ್ಷಗಳಲ್ಲಿ ರಾಜ್ಯ ಸರ್ಕಾರ ಮಾಡಿರುವ ಅದ್ಯತಾ ಕಾರ್ಯಕ್ರಮಗಳ ಸಾರ್ಥಕ ಸೇವೆಯ ಸಮರ್ಪಣೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

    ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಮಾವೇಶದ ಪೂರ್ವಭಾವಿಯಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರದ ಉತ್ತರದಾಯಿತ್ವದ ದ್ಯೋತಕವಾಗಿ ಮೇ 20ರಂದು ಬುಧವಾರ ಒಂದೂವರೆ ಲಕ್ಷ ಫಲಾನುಭವಿಗಳಿಗೆ ತುಮಕೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಅಗತ್ಯ ಸಿದ್ಧತೆಗಳು ನಡೆಯುತ್ತಿದೆ ಎಂದರು.


    Provided by
    Provided by

    ಫಲಾನುಭವಿಗಳನ್ನು ನಡೆದು ಬರುವಂತೆ ಮಾಡಬೇಡಿ:

    ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಅವರು ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನಿರ್ವಹಿಸುವ ಜವಾಬ್ದಾರಿ ಜಿಲ್ಲಾಡಳಿತದ ಮೇಲಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಮೇ 20ರ ಕಾರ್ಯಕ್ರಮ ಸಾರ್ವಜನಿಕ ಸೇವೆಯ ಸಮರ್ಪಣೆ ಕಾರ್ಯಕ್ರಮ. ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರಿ ಸಮಸ್ಯೆಯಾಗಲಿ ಅಥವಾ ಇನ್ನಾವುದೇ ಅವ್ಯವಸ್ಥೆಯ ಗೊಂದಲಗಳು ಆಗದಂತೆ ನಿಭಾಯಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಫಲಾನುಭವಿಗಳನ್ನು ಒಂದೇ ಬಸ್ಸಿನಲ್ಲಿ ಕರೆತನ್ನಿ ಎಂದು ತಿಳಿಸಿದರು.

    ಇ-ಪೋತಿ ಖಾತೆ: ತುಮಕೂರು ರಾಜ್ಯದಲ್ಲಿ ಮುಂಚೂಣಿ

    ಪ್ರಮುಖವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಕೆಲಸಗಳಿಗಾಗಿ ಪದೇ ಪದೇ ಯಾಕೆ ಅಲೆಯಬೇಕು ಮತ್ತು ಅವರು ಅರ್ಜಿ ಕೊಟ್ಟರೂ ಆ ಕೆಲಸಗಳು ಯಾಕೆ ಆಗುತ್ತಿಲ್ಲ ಎಂಬುದರ ಬಗ್ಗೆ ಗಮನಹರಿಸಿತು. ಮೃತ ರೈತರಿಗೆ ಸಂಬಂಧಿಸಿದಂತೆ 39 ಲಕ್ಷ ಪೋತಿ ಖಾತೆ ರಾಜ್ಯದಲ್ಲಿ ಬಾಕಿಯಿತ್ತು. ಕಂದಾಯ ಸಚಿವನಾದ ಮೇಲೆ ಪೋತಿ ಖಾತೆಗೆ ವಿಶೇಷ ಅಭಿಯಾನದ ಮೂಲಕ ಹಳ್ಳಿಹಳ್ಳಿಗೆ ತೆರಳಿ ಇ-ಪೋತಿ ಖಾತೆ ಮಾಡಿಕೊಡುವ ಅಭಿಯಾನ ಆರಂಭಿಸಿ ಸು. 14 ಲಕ್ಷದಷ್ಟು ಪೋತಿ ಖಾತೆಯನ್ನು ಮಾಡಿಕೊಡಲಾಗಿದೆ. ಜಿಲ್ಲೆಯಲ್ಲೂ 1.6 ಲಕ್ಷ ಪೋತಿ ಖಾತೆ ಆಗಿದ್ದು, ಇನ್ನೂ 2 ಲಕ್ಷ ಅರ್ಜಿಗಳು ಬಾಕಿಯಿವೆ.

    83 ಕೋಟಿ ಪುಟಗಳಷ್ಟು ಭೂ ದಾಖಲೆಗಳ ಸ್ಕ್ಯಾನ್:

    ಕಂದಾಯ ಇಲಾಖೆಯಲ್ಲಿ ದಾಖಲೆಗಳು ಕಾಣೆಯಾಗಿರುವ ಪ್ರಕರಣಗಳ ತಡೆಗೆ ನಮ್ಮ ಸರ್ಕಾರ ಭೂಸುರಕ್ಷಾ ಯೋಜನೆ ಜಾರಿಗೆ ತಂದು ರೈತರು, ಸರ್ಕಾರಕ್ಕೆ ಸಂಬಂಧಿಸಿದ ಮೂಲ ಭೂದಾಖಲೆಗಳನ್ನು ಸ್ಕ್ಯಾನ್ ಮಾಡಲಾಗುತ್ತಿದ್ದು, ಇದುವರೆವಿಗೂ 120 ಕೋಟಿ ವೆಚ್ಚ ಮಾಡಿ 83 ಕೋಟಿ ಪುಟಗಳ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ. ಮುಂದಿನ 4 ತಿಂಗಳೊಳಗಾಗಿ ರಾಜ್ಯಾದ್ಯಂತ ಮೂಲ ದಾಖಲೆಗಳ ಗಣಕೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದರಿಂದ ನಕಲಿ ದಾಖಲೆಗಳ ಸೃಷ್ಟಿ, ಕಾಣೆಯಾಗುವ ಅಥವಾ ಅರಿದು ಹೋಗುವ ಪ್ರಕರಣಗಳಿಗೆ ಇನ್ನು ಮುಂದೆ ಅವಕಾಶವಿರುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

    ನ್ಯಾಯಾಲಯದ ಪ್ರಕರಣಗಳ ವಿಲೇವಾರಿ:

    ಉಪವಿಭಾಗಾಧಿಕಾರಿಗಳ ನ್ಯಾಯಾಲಯ ವ್ಯಾಪ್ತಿಯಲ್ಲಿ ಬಾಕಿಯಿದ್ದ 73,624 ಅವಧಿ ಮೀರಿದ ಪ್ರಕರಣಗಳನ್ನು ವಿಶೇಷ ಉಪವಿಭಾಗಾಧಿಕಾರಿಗಳ ನಿಯೋಜನೆ ಮೂಲಕ 7,721 ಸಂಖ್ಯೆಗೆ ಇಳಿಸಿದ್ದು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 10,400 ಪ್ರಕರಣ ಬಾಕಿಯಿದ್ದು ಅದು 4,713ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನ ಡಿಸಿಕೋರ್ಟ್‌ನಲ್ಲಿ 3,000ದಷ್ಟಿದ್ದು, 9 ಜನ ವಿಶೇಷ ಜಿಲ್ಲಾಧಿಕಾರಿಗಳನ್ನು ನಿಯೋಜಿಸಿ ಪ್ರಕರಣ ಇತ್ಯರ್ಥಕ್ಕೆ 6 ತಿಂಗಳ ಗಡುವು ನೀಡಲಾಗಿದೆ ಎಂದರು.

    ಸಭೆಯಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO

    May 13, 2026

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ತುಮಕೂರು/ಬೆಂಗಳೂರು: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್…

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.