ಬೆಂಗಳೂರು: ರಾಜ್ಯಾದ್ಯಂತ ನಿರಂತರ ಗಾಳಿ ಮಳೆ, ಗುಡ್ಡ ಕುಸಿತ ಹಾಗೂ ಉಕ್ಕಿ ಹರಿಯುತ್ತಿರುವ ನದಿಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಇದರಿಂದಾಗಿ ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿವೆ. ಈ ಸಂಬಂಧ ಬೆಳೆ ಹಾನಿ ಅಧ್ಯಯನಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.
6 ತಂಡಗಳಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರ ತಂಡ ಬೆಳೆ ಹಾನಿ ಪರಿಶೀಲನೆ ನಡೆಸಲಿದೆ. ಬಿಜೆಪಿ ನಾಯಕರ ತಂಡ ರಾಜ್ಯಾದ್ಯಂತ ಸಂಚರಿಸಿ ಬೆಳೆ ಹಾನಿ ಬಗ್ಗೆ ಮಾಹಿತಿ ಕಲೆ ಹಾಕಲಿದೆ.
ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಆರಗ ಜ್ಞಾನೇಂದ್ರ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ನೇತೃತ್ವದ ತಂಡಗಳು ರಾಜ್ಯಾದ್ಯಂತ ಸಂಚರಿಸಲಿವೆ.
ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ತಂಡ ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ತಂಡ ಪ್ರವಾಸ ಕೈಗೊಳ್ಳಲಿದೆ. ಮಾಜಿ ಸಚಿವ ಅಶ್ವತ್ಥ್ ನಾರಾಯಣ ನೇತೃತ್ವದ ತಂಡ ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತದೆ. ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪರಿಶೀಲನೆಗೆ ಇಳಿಯಲಿದೆ. ಮಾಜಿ ಸಚಿವ ಬಿ. ಶ್ರೀರಾಮುಲು ನೇತೃತ್ವದ ತಂಡ ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಶ್ರೀರಾಮುಲು ನೇತೃತ್ವದ ತಂಡದಲ್ಲಿ ಶಾಸಕ ಜನಾರ್ದನ ರೆಡ್ಡಿ ಕೂಡ ಇದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA