ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಲನಾಲದ ಎಪ್ಪತ್ತು ಕಣಿವೆಯ ಸೇತುವೆ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಇಲ್ಲಿನ ಸ್ಥಳೀಯರು ನೀರಿನಲ್ಲಿ ಈಜುತ್ತಿದ್ದ ವೇಲೆ ಚಾನಲ್ ನೀರಿನಲ್ಲಿ ಮೃತದೇಹ ತೇಲಿಕೊಂಡು ಬಂದಿದ್ದು, ಈ ವಿಚಾರವನ್ನು ಅವರು ತಕ್ಷಣವೇ ಪೊಲೀಸರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಹಿರಿಯೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದು, ಸದ್ಯ ಮೃತರ ಗುರುತು ಪತ್ತೆಗೆ ಮುಂದಿನ ಕ್ರಮ ಜರುಗಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB