nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಜಿ.ಪ್ರಭು
    ತುಮಕೂರು September 1, 2024

    ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಜಿ.ಪ್ರಭು

    By adminSeptember 1, 2024No Comments3 Mins Read
    g prabhu

    ತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

    ಜಿಲ್ಲಾ ಪಂಚಾಯತಿಯ ತಮ್ಮ ಕೊಠಡಿಯಲ್ಲಿಂದು ವಿವಿಧ ಯೋಜನೆಗಳ ಪ್ರಗತಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಆದ್ಯತೆ ಮೇರೆಗೆ ಕಾಯ್ದುಕೊಳ್ಳಲಾಗುತ್ತಿದೆ. ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ತಾಲ್ಲೂಕು ಪಂಚಾಯತಿ ಅಥವಾ ಜಿಲ್ಲಾ ಪಂಚಾಯತಿ ಗಮನಕ್ಕೆ ತಂದಲ್ಲಿ ಕೂಡಲೇ ಕಳಪೆ ಕಾಮಗಾರಿಗೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ಧ ಕ್ರಮವಹಿಸಲಾಗುವುದೆಂದು ತಿಳಿಸಿದರು.

    ಕಾಮಗಾರಿಗಳ ಬಿಲ್ ಪಾವತಿ ವಿಳಂಬ ಕುರಿತು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಆರ್ಥಿಕ ವರ್ಷಾರಂಭದ ಮೊದಲ 3 ತಿಂಗಳು ಅನುದಾನದ ಬಳಕೆಯಾಗುವುದಿಲ್ಲ. ಮೊದಲ 3 ತಿಂಗಳ ಅವಧಿಯಲ್ಲಿ ಪ್ರಸಕ್ತ ವರ್ಷ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಕೆ, ಟೆಂಡರ್ ಪ್ರಕ್ರಿಯೆ, ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಕೆ, ಕಾಮಗಾರಿಗಳ ಅನುಮೋದನೆಗೆ ಕ್ರಮಕೈಗೊಳ್ಳಲಾಗುವುದು. ನರೇಗಾ ಹೊರತುಪಡಿಸಿ ಉಳಿದ ಯೋಜನೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಆಗಸ್ಟ್ ಮಾಹೆಯಿಂದ ಕೈಗೆತ್ತಿಕೊಳ್ಳಲಾಗುವುದು. ಆದರೆ ಸಾರ್ವಜನಿಕರಿಗೆ ಒದಗಿಸುವ ಆರೋಗ್ಯ, ಶಿಕ್ಷಣ, ಮತ್ತಿತರ ಸೇವೆಗಳು ನಿರಂತರವಾಗಿ ಸಾಗುತ್ತಿರುತ್ತವೆ ಎಂದು ತಿಳಿಸಿದರು.

    ಜಿಲ್ಲೆಯ ಪ್ರಗತಿ ಸುಧಾರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲು ಎಲ್ಲಾ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಯಾವುದೇ ಬಿಲ್ಲುಗಳು ಬಾಕಿ ಉಳಿಸಿಕೊಳ್ಳದೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತಿದ್ದಂತೆ ಕಾಮಗಾರಿಗಳ ಬಿಲ್ಲಿನ ಮೊತ್ತವನ್ನು ಗುತ್ತಿಗೆದಾರರಿಗೆ ವಿಳಂಬ ಮಾಡದೆ ಸಕಾಲದಲ್ಲಿ ಪಾವತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಕಳಪೆ ಕಾಮಗಾರಿಗಳನ್ನು ಕೈಗೊಂಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಜಲ್ ಜೀವನ್ ಮಿಷನ್ ಯೋಜನೆ ಸಂಬಂಧ ಇತ್ತೀಚೆಗೆ ಗುತ್ತಿಗೆದಾರರ ಸಂಘವು ಅಧಿಕಾರಿಗಳ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದು. ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲವೆಂದು ಬಿಲ್ ಪಾವತಿಯನ್ನು ತಿರಸ್ಕರಿಸಿದಾಗ ಇಂತಹ ಆರೋಪಗಳು ಸಾಮಾನ್ಯವೆಂದು ತಿಳಿಸಿದರಲ್ಲದೆ ನೈಜತೆ ಇಲ್ಲದ ಗಾಳಿ ಸುದ್ದಿಗಳಿಗೆ ನಾನು ತಲೆ ಕೆಡಿಸುವುದಿಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ಅಶಿಸ್ತು, ಕರ್ತವ್ಯ ನಿರ್ಲಕ್ಷ್ಯತೆ ತೋರಿದ ಸುಮಾರು 20 ಪಿಡಿಓಗಳನ್ನು ಯಾವುದೇ ಮುಲಾಜಿಲ್ಲದೆ ಅಮಾನತ್ತು ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

    ಕಳೆದ 1 ವರ್ಷದಿಂದ ಜಿಲ್ಲಾ ಪಂಚಾಯತಿಯಲ್ಲಿ ಶಾಸಕರು, ಸಚಿವರ ಮಾರ್ಗದರ್ಶನದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಜಿಲ್ಲೆಯನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲಾ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಕೆಲವು ಕಾಮಗಾರಿ ಹಾಗೂ ಸೇವೆಗಳಲ್ಲಿ ಸಣ್ಣ–ಪುಟ್ಟ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಪಾರದರ್ಶಕವಾಗಿ ಅನುಷ್ಟಾನಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದ ಜನತೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶಕ್ತಿಮೀರಿ ಯೋಜನೆಗಳ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

    ಜಿಲ್ಲೆಯಲ್ಲಿ ಪ್ರತೀ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಟಾನಿಸುವಾಗ ಗುಣಮಟ್ಟದ ಪರೀಕ್ಷೆಯನ್ನು 3ನೇ ವ್ಯಕ್ತಿಯಿಂದ ತಪಾಸಣೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ ಜಲ್ ಜೀವನ್ ಮಿಷನ್ ಕಾಮಗಾರಿಗಳ ಬಿಲ್ ಪಾವತಿ ವಿಳಂಬಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ, ಆರ್ಥಿಕ ವರ್ಷ ಮುಕ್ತಾಯ ಅವಧಿಯಲ್ಲಿ ಬಿಲ್ ಪಾವತಿ ಮಾಡಲು ವಿಳಂಬವಾಗಿದೆ. ಕಾಮಗಾರಿ ಪೂರ್ಣಗೊಂಡ ಒಂದು ತಿಂಗಳ ಅವಧಿಯೊಳಗೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

    ಜಲ್‌ಜೀವನ್ ಮಿಷನ್ ಕಾಮಗಾರಿಗಾಗಿ 2021 ರಿಂದ 100 ಕೋಟಿ ರೂ.ಗಳ ಜಿಎಸ್‌ ಟಿ ಮೊತ್ತ ಸೇರಿ ಈವರೆಗೆ ಒಟ್ಟು 446 ಕೋಟಿ ರೂ.ಗಳನ್ನು ಪಾವತಿ ಮಾಡಲಾಗಿದೆ. ಗ್ರಾಮೀಣ ಪ್ರದೇಶಗಳ ಜನರಿಗಾಗಿ ಶಾಶ್ವತ ಕಾಮಗಾರಿಗಳನ್ನು ಸೃಜಿಸಲು ಹಾಗೂ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಲು ಎಲ್ಲಾ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

    ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಶೇ.55 ಹಾಗೂ ಕೇಂದ್ರ ಸರ್ಕಾರದ ಶೇ.45ರಷ್ಟು ಅನುದಾನದಲ್ಲಿ ಜಲ್ ಜೀವನ್ ಮೀಷನ್ ಯೋಜನೆ(ಜೆಜೆಎಂ)ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಈವರೆಗೆ ಒಟ್ಟು 3700 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, 2500 ಕಾಮಗಾರಿಗಳು ಪ್ರಗತಿಯಲ್ಲಿವೆ. ಪೂರ್ಣಗೊಂಡ 805 ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶೇ.80ರಷ್ಟು ಹಣ ಪಾವತಿಮಾಡಲಾಗಿದೆ. ಕಳಪೆ ಗುಣಮಟ್ಟ ಮತ್ತು ಕಾಮಗಾರಿ ವಿಳಂಬಗೊಳಿಸಿರುವ 116 ಕಾಮಗಾರಿಗಳ ಟೆಂಡರ್ ಹಣವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದರು.

    ಜಲ್ ಜೀವನ್ ಮಿಷನ್ ಯೋಜನೆಯಡಿ ಕಳಪೆ ಗುಣಮಟ್ಟದ ಕಾಮಗಾರಿ ನಡೆಸುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ. ಜೆಜೆಎಂ ಕಾಮಗಾರಿಗಳು ಪೂರ್ಣಗೊಂಡ ನಂತರ ಆಯಾ ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿ ಗುಣಮಟ್ಟದ ಬಗ್ಗೆ ಗ್ರಾಮ ಸಭೆ ನಡೆಸಿ ಸಭೆಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿ ಗುತ್ತಿಗೆ ದಾರರಿಗೆ ಬಿಲ್ ಪಾವತಿ ಮಾಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು.

    ಕಳೆದ ವರ್ಷ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 3 ಪಟ್ಟು ಹೆಚ್ಚುವರಿ ಆಸ್ತಿಗಳನ್ನು ಸೃಜನೆ ಮಾಡಲಾಗಿದೆ. ಅಧಿಕಾರಿಗಳ ಶ್ರಮದಿಂದಲೇ ಈ ಸಾಧನೆ ಸಾಧ್ಯವಾಗಿದೆ ಎಂದರಲ್ಲದೆ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ನರೇಗಾ ಯೋಜನೆಯಡಿ ಯಂತ್ರಗಳನ್ನು ಬಳಸದೆ ಸಮಗ್ರ ಶಾಲಾಭಿವೃದ್ಧಿ, ಆಸ್ಪತ್ರೆ, ರಸ್ತೆ, ಚರಂಡಿ ಕಾಮಗಾರಿ, ಅಂಗನವಾಡಿ ಕೊಠಡಿ ನಿರ್ಮಾಣಕ್ಕಾಗಿ 750 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ 24,58,682 ಮಾನವ ದಿನಗಳನ್ನು ಸೃಜಿಸುವ ಮೂಲಕ ಕೂಲಿ ಕಾರ್ಮಿಕರ ಖಾತೆಗೆ ಒಟ್ಟು 127 ಕೋಟಿ ರೂ.ಗಳನ್ನು ನೇರವಾಗಿ ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.