ಪರೀಕ್ಷೆ ಬರೆಯಲೆಂದು ಬಂದಿದ್ದ ವಿದ್ಯಾರ್ಥಿಯನ್ನು ಕಾನೂನು ಕಾಲೇಜು ಆವರಣದಲ್ಲೇ ಮುಸುಕುಧಾರಿಗಳು ಹೊಡೆದು ಹತ್ಯೆ ಮಾಡಿರುವ ಘಟನೆ ಪಾಟ್ನಾದಲ್ಲಿ ವರದಿಯಾಗಿದೆ.
ಹರ್ಷ್ ಬಿ.ಎನ್. ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ ಈತ ಲೋಕನಾಯಕ ಯುವ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಕೂಡ ಆಗಿದ್ದ ಎನ್ನಲಾಗಿದೆ. ಲೋಕಸಭೆ ಚುನಾವಣೆಯಲ್ಲೂ ಸಮಸ್ತಿಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಶಾಂಭವಿ ಚೌಧರಿ ಪರ ಪ್ರಚಾರದಲ್ಲಿ ನಿರತರಾಗಿದ್ದರು ಎಂದು ವರದಿ ತಿಳಿಸಿದೆ.
ಮೂಲತಃ ವೈಶಾಲಿ ಜಿಲ್ಲೆಯ ಬೆಲ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಜೌಲಿ ಗ್ರಾಮದ ನಿವಾಸಿಯಾಗಿರುವ ಹರ್ಷ್ ರಾಜ್, ಪಾಟ್ನಾದ ಬೋರಿಂಗ್ ರಸ್ತೆಯಲ್ಲಿ ವಾಸವಾಗಿದ್ದರು. ಪರೀಕ್ಷೆ ಮುಗಿದು ತರಗತಿಯಿಂದ ಹೊರಬಂದ ಹರ್ಷ್ ಕ್ಯಾಂಪಸ್ ಗೆ ಬಂದು ಬುಲೆಟ್ ಬೈಕ್ ನಲ್ಲಿ ಕುಳಿತಿದ್ದಾಗ ಗುಂಪೊಂದು ದಾಳಿ ನಡೆಸಿದೆ.
1 ವರ್ಷದಿಂದ ಕಾಲೇಜಿನ ಸಿಸಿಟಿವಿ ಕೆಟ್ಟುಹೋಗಿದೆ ಎಂದು ತನಿಖೆಯ ವೇಳೆ ತಿಳಿದಿದ್ದು, ಹಲವು ಅನುಮಾನ ಮೂಡಿಸಿದೆ. ದೊಣ್ಣೆಗಳಿಂದ ತೀವ್ರವಾಗಿ ಹೊಡೆದಿದ್ದಾರೆ. ಇಟ್ಟಿಗೆ ಮತ್ತು ಕಲ್ಲುಗಳಿಂದ ವಿದ್ಯಾರ್ಥಿಯ ಬೆನ್ನು ಮತ್ತು ಹೊಟ್ಟೆಯ ಮೇಲೂ ಹೊಡೆದಿದ್ದಾರೆ, ಪ್ರಜ್ಞೆ ತಪ್ಪುವವರೆಗೂ ಥಳಿಸಿ, ಬೈಕ್ ನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಹಲ್ಲೆಯ ಬಗ್ಗೆ ಮಾಹಿತಿ ಪಡೆದ ಅವರ ಸ್ನೇಹಿತರು ಕಾನೂನು ಕಾಲೇಜಿಗೆ ಆಗಮಿಸಿ ರಕ್ತಸ್ರಾವದ ಸ್ಥಿತಿಯಲ್ಲಿ ಹರ್ಷನನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA