ತುಮಕೂರು: ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಮಾಡುವ ಸಂದರ್ಭದಲ್ಲಿ ಕಲಿಯುವ ಕಡೆಗೆ ಗಮನ ಹರಿಸಿದರೆ ತಮ್ಮ ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಮುಖಾಂತರ ಏನಾದರೂ ಸಾಧಿಸಬಹುದು ಎಂದೂ ಶಿಕ್ಷಣ ಇಲಾಖೆಯ ಬಿ.ಆರ್.ಸಿ ಪವನ್ ಕುಮಾರ್ ರೆಡ್ಡಿ ತಿಳಿಸಿದರು.
ಮಧುಗಿರಿ ತಾಲ್ಲೂಕ್ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ದಾ ಪೂಜೆ ಮತ್ತು ತಂದೆ– ತಾಯಿ ಪಾದಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಶಿಕ್ಷಣ ಸಂಯೋಜಕ ಶ್ರೀನಿವಾಸ ಕೆ.ಟಿ. ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲು ಶಿಕ್ಷಕರು ಶ್ರಮಪಡಬೇಕು, ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು ಓದುವಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ತಮ್ಮ ಗ್ರಾಮಗಳಿಗೆ ಹೆಸರು ತರಬೇಕೆಂದು ತಿಳಿಸಿದರು.
ಬರಹಗಾರರಾದ ಎನ್.ಎಸ್.ಈಶ್ವರಪ್ರಸಾದ್ ಮಾತನಾಡಿ, ಶಾಲೆಗಳಲ್ಲಿ ಶಾರದಾ ಪೂಜೆ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗೆ ಎಷ್ಟು ಒತ್ತು ನೀಡುತ್ತಿರೋ, ಅದೇ ರೀತಿ ಇತಿಹಾಸದಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡುವಲ್ಲಿ ಶ್ರಮಿಸಿದ ಸಾವಿತ್ರಿ ಫುಲೆಗೆ ಅಷ್ಟೆ ಗೌರವ ನೀಡಬೇಕು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಕಾರಣ ಏನು ಎನ್ನುವುದನ್ನು ಶಿಕ್ಷಣ ಇಲಾಖೆ ಗಮನಿಸಿ ಸಮಸ್ಯೆ ನಿವಾರಣೆ ಮಾಡಬೇಕು. ಪ್ರತಿ ಪಂಚಾಯತ್ ಗೂ ಸರ್ಕಾರ ಪಬ್ಲಿಕ್ ಶಾಲೆಗಳನ್ನು ನೀಡಬೇಕೆಂದು ವಿನಂತಿ ಮಾಡಿದರು.
ನೇರಳೇಕೆರೆ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜನ್ ಮಾತನಾಡಿ, ವಿದ್ಯಾರ್ಥಿಗಳು ತಂದೆ–ತಾಯಿಗಳನ್ನು ಗೌರವಿಸಿ ಮುಪ್ಪಿನ ಸಂದರ್ಭದಲ್ಲಿ ಅನಾಥ ಆಶ್ರಮಗಳಿಗೆ ಹೋಗದಂತೆ ಅವರ ಯೋಗಕ್ಷೇಮ ನೋಡಿಕೊಳ್ಳಬೇಕೆಂದು ತಿಳಿಸಿದರು.
ಶಿಕ್ಷಣ ಇಲಾಖೆಯ ಸಿ.ಆರ್.ಪಿ. ರೂಪ ರಾಣಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ವಿಷಯದಲ್ಲಿ ಮುಂದೆ ಬರಬೇಕಾದರೆ ಶಾಲಾ ವಾರ್ಷಿಕೋತ್ಸವದಲ್ಲಿ ತಮ್ಮ ಪ್ರತಿಭೆಗಳನ್ನು ತೋರಿಸಲು ಅವಕಾಶ ಇದೆ ಎಂದೂ ತಿಳಿಸಿದರು.
ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುನೀತಾ ವಹಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದ್ರಕುಮಾರ್, ಎಸ್ ಡಿ ಎಂ.ಸಿ ಸದಸ್ಯರಾದ ಹಾಗೂ ಉಪಾಧ್ಯಕ್ಷರಾದ ದಾದಾಫೀರ್, ನಾಜೀಮ್, ಗ್ರಾಮ ಪಂಚಾಯತಿ ಸದಸ್ಯರಾದ ದಾಕ್ಷಣಾಮ್ಮ, ಉಮಾದೇವಿ, ಸಿ.ಆರ್.ಪಿ. ರೂಪ ರಾಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕರಾದ ತಿಪ್ಪೇಸ್ವಾಮಿ ನೀಡಿದರು.
ಶಿಕ್ಷಕಿ ಮಮತಾ ಸ್ವಾಗತಿಸಿದರು. ಶಿಕ್ಷಕರಾದ ಏಜಾಜ್ ಪಾಶ ನೆರವವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಎಲ್ಲಾ ಸದಸ್ಯರು ಹಾಗೂ ಪೋಷಕರು ಭಾಗವಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4